ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ರೈತರ ಆತ್ಮಹತ್ಯೆ

|

Updated on: Feb 13, 2021 | 4:51 PM

ಪ್ರತ್ಯೇಕ ಘಟನೆಯಲ್ಲಿ ಸಾಲಭಾದೆ ತಾಳಲಾರದೆ ರೈತರಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಮತ್ತು ಹುಬ್ಬಳ್ಳಿಯಲ್ಲಿ ನಡೆದಿದೆ.

ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ರೈತರ ಆತ್ಮಹತ್ಯೆ
ಅತ್ತೆ ಸೊಸೆ ಕಿತ್ತಾಟ: ಸೊಸೆಗೆ ಚಾಕುವಿನಿಂದ ಚುಚ್ಚಿದ್ದ ಅತ್ತೆ, ಸೊಸೆ ಸತ್ತಳೆಂದು ಅಂಜಿ ನೇಣಿಗೆ ಶರಣು
Follow us on

ಬಾಗಲಕೋಟೆ: ಸಾಲಬಾಧೆ ತಾಳಲಾರದೆ ಮಾವಿನ ಗಿಡಕ್ಕೆ ನೇಣು ಹಾಕಿಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ.

ಶಿವಾನಂದ ಹಿರೆಮಠ (80) ಎಂಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದು, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್​ನಲ್ಲಿ 3 ಲಕ್ಷ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ 50,000, ಇನ್ನಿತರೆ ಕೈಸಾಲ 2 ಲಕ್ಷ ಸೇರಿ ಒಟ್ಟು ಐದೂವರೆ ಲಕ್ಷ ಸಾಲ ಮಾಡಿದ್ದರು. ಸದ್ಯ ಸ್ಥಳಕ್ಕೆ ಬಾದಾಮಿ ಕಂದಾಯ ಇಲಾಖೆ ಅಧಿಕಾರಿಗಳು, ಬಾದಾಮಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಸಾಲಬಾಧೆ ತಾಳಲಾರದೆ ಹುಬ್ಬಳ್ಳಿ ರೈತ ಆತ್ಮಹತ್ಯೆಗೆ ಶರಣು:
ಸುಭಾಷ್ ಸಣ್ಣಮನಿ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಶಿರೂರ ಗ್ರಾಮದ ರೈತ. ಶಿರೂರು ಗ್ರಾಮದ ವಿಜಯ ಬ್ಯಾಂಕ್ ಸೇರಿದಂತೆ ವಿವಿಧ ಬ್ಯಾಂಕ್​ಗಳಲ್ಲಿ 17 ಲಕ್ಷ ಸಾಲ ಮಾಡಿದ್ದು, ಸಾಲ ತೀರಿಸಲಾಗದೇ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಈ ಕುರಿತು ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:  ಚಿಕ್ಕಮಗಳೂರು ಅಯ್ಯನಕೆರೆಯಲ್ಲಿ ವೃದ್ಧೆಯ ಶವ ಪತ್ತೆ, ವಿಜಯಪುರ ಕಡಣಿ ಗ್ರಾಮದಲ್ಲಿ ಯುವ ರೈತ ಆತ್ಮಹತ್ಯೆ