Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್ ರನ್ನು ಭೇಟಿಯಾಗಲು ಆಗಮಿಸಿದ ಬಿಜೆಪಿ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ

ಡಿಕೆ ಶಿವಕುಮಾರ್ ರನ್ನು ಭೇಟಿಯಾಗಲು ಆಗಮಿಸಿದ ಬಿಜೆಪಿ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ

ಅರುಣ್​ ಕುಮಾರ್​ ಬೆಳ್ಳಿ
|

Updated on:Nov 10, 2023 | 2:19 PM

ಇವತ್ತು ಬಿಜೆಪಿಯ ಹಿರಿಯ ನಾಯಕ, ಬಳ್ಳಾರಿ ಶಾಸಕ ಮತ್ತು ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ಧನ ರೆಡ್ಡಿ ಸಹೋದರ ಗಾಲಿ ಸೋಮಶೇಖರ ರೆಡ್ಡಿ ಶಿವಕುಮಾರ್ ರನ್ನು ಭೇಟಿಯಾಗಲು ನಗರದ ಸದಾಶಿವನಗರದಲ್ಲಿರುವ ಅವರ ನಿವಾಸಕ್ಕೆ ಆಗಮಿಸಿದರು.

ಬೆಂಗಳೂರು: ಕಾಂಗ್ರೆಸ್ ನಾಯಕರು ಅಪರೇಶನ್ ಕಮಲದ (Operation Lotus) ಬಗ್ಗೆ ಮಾತಾಡುತ್ತಾರೆ. ಆದರೆ ಗಮನಿಸಬೇಕಾದ ಸಂಗತಿಯೆಂದರೆ ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕರನ್ನು ಅದರಲ್ಲೂ ವಿಶೇಷವಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರನ್ನು ಭೇಟಿಯಾಗುವುದು ಮುಂದುವರಿಸಿದ್ದಾರೆ. ಇವತ್ತು ಬಿಜೆಪಿಯ ಹಿರಿಯ ನಾಯಕ, ಬಳ್ಳಾರಿ ಶಾಸಕ ಮತ್ತು ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ಧನ ರೆಡ್ಡಿ ಸಹೋದರ ಗಾಲಿ ಸೋಮಶೇಖರ ರೆಡ್ಡಿ (Gali Somashekhar Reddy) ಶಿವಕುಮಾರ್ ರನ್ನು ಭೇಟಿಯಾಗಲು ನಗರದ ಸದಾಶಿವನಗರದಲ್ಲಿರುವ ಅವರ ನಿವಾಸಕ್ಕೆ ಆಗಮಿಸಿದರು. ಕಾರಣ ಏನೂಂತ ಗೊತ್ತಿಲ್ಲ, ಆದರೆ ಭೇಟಿಯಾಗಿ ಹೊರಬಂದ ಬಳಿಕ ಏನು ಹೇಳುತ್ತಾರೆ ಅಂತ ಗೊತ್ತು. ವಿಶೇಷವೇನಿಲ್ಲ, ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಅನುದಾನ ಬಿಡುಗಡೆ ಮಾಡುವಂತೆ ಕೇಳಲು ಬಂದಿದ್ದೆ ಅನ್ನುತ್ತಾರೆ! ಶಿವಕುಮಾರ್ ನಿವಾಸದ ಹೊರಗಡೆ ಅವರು ಡಿಕೆ ಸುರೇಶ್ ಅವರೊಂದಿಗೆ ಮಾತಾಡುವುದನ್ನು ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Nov 10, 2023 01:02 PM