AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಹ್ನೆಗಳಿಗೆ ಅಂಟಿದ ಮೂಢನಂಬಿಕೆ ಭೂತ; ಕೆಲ ಸಿಂಬಲ್ ಕಂಡು ಭಯ ಬೀಳ್ತಿದ್ದಾರೆ ಗ್ರಾ.ಪಂ. ಅಭ್ಯರ್ಥಿಗಳು

ಗ್ರಾಮ‌ ಪಂಚಾಯಿತಿ ಚುನಾವಣೆಯಲ್ಲಿನ ಚಿಹ್ನೆಗಳಿಗೂ ಮೂಢನಂಬಿಕೆ ಸುತ್ತಿಕೊಂಡಿದೆ. ಅಭ್ಯರ್ಥಿಗಳು ಚಿಹ್ನೆ ಬಗ್ಗೆ ಇಟ್ಟುಕೊಂಡ ನಂಬಿಕೆ ಬಗ್ಗೆ ಕೇಳಿದರೆ ನಿಮಗೆ ಅಚ್ಚರಿಯಾಗೋದು ಗ್ಯಾರಂಟಿ. ಏಕೆಂದರೆ, ಗ್ರಾಮಫೋನ್, ಡೋರ್ ಲಾಕ್, ಮೆಣಸಿನಕಾಯಿ ಹೀಗೆ ಹಲವಾರು ಚಿಹ್ನೆಗಳು ಅಪಶಕುನವಂತೆ!

ಚಿಹ್ನೆಗಳಿಗೆ ಅಂಟಿದ ಮೂಢನಂಬಿಕೆ ಭೂತ; ಕೆಲ ಸಿಂಬಲ್ ಕಂಡು ಭಯ ಬೀಳ್ತಿದ್ದಾರೆ ಗ್ರಾ.ಪಂ. ಅಭ್ಯರ್ಥಿಗಳು
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 17, 2020 | 1:45 PM

Share

ಗದಗ: ಗ್ರಾಮೀಣ ಪ್ರದೇಶಗಳಲ್ಲಿ ಮೂಢನಂಬಿಕೆಗೆ ಇನ್ನೂ ಬ್ರೇಕ್ ಬಿದ್ದಿಲ್ಲ. ಈಗ ಗ್ರಾಮ‌ ಪಂಚಾಯಿತಿ ಚುನಾವಣೆಯಲ್ಲಿನ ಚಿಹ್ನೆಗಳಿಗೂ ಮೂಢನಂಬಿಕೆ ಸುತ್ತಿಕೊಂಡಿದೆ. ಅಭ್ಯರ್ಥಿಗಳು ಚಿಹ್ನೆ ಬಗ್ಗೆ ಇಟ್ಟುಕೊಂಡ ನಂಬಿಕೆ ಬಗ್ಗೆ ಕೇಳಿದರೆ ನಿಮಗೆ ಅಚ್ಚರಿಯಾಗೋದು ಗ್ಯಾರಂಟಿ. ಏಕೆಂದರೆ, ಗ್ರಾಮಫೋನ್, ಡೋರ್ ಲಾಕ್, ಮೆಣಸಿನಕಾಯಿ ಹೀಗೆ ಹಲವಾರು ಚಿಹ್ನೆಗಳು ಅಪಶಕುನವಂತೆ!

ಆಡು ಭಾಷೆಯಲ್ಲಿ ಗ್ರಾಮಫೋನ್ ಎಂದರೆ, ಖಾಲಿ ಭರವಸೆಗಳನ್ನು ನೀಡುವವನು ಎಂದರ್ಥವಿದೆ. ಇನ್ನು ಡೋರ್ ಲಾಕ್​ ಎಂದರೆ ಅಭಿವೃದ್ಧಿ ಕಾಮಗಾರಿಗಳಿಗೆ ಬಾಗಿಲು ಮುಚ್ಚಿರುವುದು ಎಂದು ಅರ್ಥವಿದೆ. ಟೋಪಿ ಚಿಹ್ನೆ ಎಂದರೆ ಮೋಸ ಮಾಡುವುದು, ಬಾಸ್ಕೆಟ್ ಎಂದರೆ ಅತಿ ಆಸೆಯುಳ್ಳವನು, ಮೆಣಸಿನಕಾಯಿ ಎಂದರೆ ಅತ್ಯಂತ ಒರಟು ಎಂಬೆಲ್ಲಾ ಅರ್ಥಗಳಿವೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದಿಂದ ನೀಡಲಾಗಿರುವ ಚಿಹ್ನೆಗಳ ಬಗ್ಗೆ ಅಭ್ಯರ್ಥಿಗಳು ಆತಂಕಕ್ಕೊಳಗಾಗಿದ್ದಾರೆ ಎನ್ನಲಾಗಿದೆ.

ಕೆಲವೊಂದು ಚಿಹ್ನೆಗಳು ಪ್ರಚಾರ, ಚುನಾವಣಾ ತಂತ್ರಗಾರಿಕೆಗೆ ಮುಳುವಾಗಬಹುದು ಅಂತ ಅಭ್ಯರ್ಥಿಗಳು ನಂಬಿರುವುದಾಗಿ ಹೇಳಿದ್ದಾರೆ ಗದಗ ಜಿಲ್ಲಾ ಚುನಾವಣಾ ಉಪ ಆಯುಕ್ತ ಸುಂದರೇಶ್ ಬಾಬು ಎನ್.

ಕರ್ನಾಟಕ ಪಂಚಾಯತ್ ರಾಜ್ (ಚುನಾವಣಾ ನೀತಿ ಸಂಹಿತೆ) 1993 ರ ರೂಲ್ 21 ರ ಪ್ರಕಾರ ಅಭ್ಯರ್ಥಿಗಳಿಗೆ ಚಿಹ್ನೆಯನ್ನು ನೀಡಲಾಗಿದೆ. ಇದನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ತೆಗೆದುಕೊಳ್ಳಬೇಕು. ಆದರೆ, ಈಗ ಅಭ್ಯರ್ಥಿಗಳು ಪ್ರಚಾರಕ್ಕಿಂತ ಚಿಹ್ನೆಯ ಬಗ್ಗೆಯೇ ಅಭ್ಯರ್ಥಿಗಳು ಹೆಚ್ಚು ತಲೆಕೆಡಿಸಿಕೊಂಡಿದ್ದಾರೆ ಎನ್ನುತ್ತಾರೆ ಉಪ ಆಯುಕ್ತರು.

ಇದನ್ನೂ ಓದಿ: ಗ್ರಾ.ಪಂ. ಮೊದಲ ಹಂತದ ಚುನಾವಣೆ: 4,377 ಮಂದಿ ಅವಿರೋಧವಾಗಿ ಆಯ್ಕೆ- ಚುನಾವಣಾ ಆಯೋಗ

ಗದಗ ಜಿಲ್ಲೆಯಲ್ಲಿ ಗ್ರಾ.ಪಂ. ಚುನಾವಣೆಗೆ ವಿತರಿಸಿರುವ ಚಿಹ್ನೆಗಳು

ರೋಣ ತಾಲೂಕಿನ ಶಿರೋಳ ಗ್ರಾಮದ ಅಭ್ಯರ್ಥಿ ವೀರೇಶ ಆತಂಕದ ಬಗ್ಗೆ ಮಾತನಾಡಿದ್ದು, ನಗರ ಪ್ರದೇಶದಲ್ಲಿ ಜನರು ಚಿಹ್ನೆಗಳಿಗೆ ಹೆಚ್ಚು ಮಹತ್ವ ನೀಡುವುದಿಲ್ಲ. ಆದರೆ ಗ್ರಾಮೀಣ ಭಾಗದಲ್ಲಿ ಚಿಹ್ನೆಯನ್ನು ನೀಡುವುದನ್ನೇ ಜನರು ಕಾಯುತ್ತಿರುತ್ತಾರೆ. ಅಪಶಕುನದ ಚಿಹ್ನೆ ಪಡೆಯುವ ದುರದೃಷ್ಟವಂತರು ಎಂದು ಗೇಲಿ ಮಾಡಲು ಪ್ರಾರಂಭಿಸುತ್ತಾರೆ ಎನ್ನುತ್ತಾರೆ.

ಅಭ್ಯರ್ಥಿ ಸೋತರೆ, ಸೋಲಿನ ಹೊಣೆಯಲ್ಲಾ ಚಿಹ್ನೆಯದ್ದೇ!

ಒಂದು ವೇಳೆ ಓರ್ವ ಅಭ್ಯರ್ಥಿಗೆ ಹೆಲ್ಮೆಟ್ ಚಿಹ್ನೆಯಾಗಿ ದೊರೆತು ಆತ ಸೋತರೆ, ‘ಹೆಲ್ಮೆಟ್ ಅಭ್ಯರ್ಥಿಯ ತಲೆ ಉಳಿಸಲು ವಿಫಲವಾಯಿತು‘ ಎನ್ನುವ ಮಾತುಗಳು ಕೇಳಿ ಬರಲಿವೆ. ದ್ರಾಕ್ಷಿಯ ಚಿಹ್ನೆ ಪಡೆದಿರುವ ವ್ಯಕ್ತಿ ಸೋತರೆ ಅದನ್ನು ಹುಳಿ ದ್ರಾಕ್ಷಿ ಎನ್ನಲು ಪ್ರಾರಂಭಿಸುತ್ತಾರೆ. ಆದ್ದರಿಂದ ಇವೆಲ್ಲಾ ಮಾತುಗಳು ಬರಲೇಬಾರದು ಅಂತಹ ಚಿಹ್ನೆಯನ್ನು ಅಭ್ಯರ್ಥಿಗಳು ಹುಡುಕಲು ಯತ್ನಿಸುತ್ತಾರೆ” ಎನ್ನುತ್ತಾರೆ ಪತ್ತಾರ್.

ಹಾಗಂತ ಎಲ್ಲಾ ಚಿಹ್ನೆಗಳನ್ನೂ ಜನ ನಕಾರಾತ್ಮಕವಾಗಿಯೇ ನೋಡುವುದಿಲ್ಲ. ಸೈಕಲ್ ಚಿಹ್ನೆ ದೊರೆತರೆ ಯಶಸ್ಸಿನ ಪೆಡಲ್ ಎಂದು ಭಾವಿಸುತ್ತಾರೆ. ಟಾರ್ಚ್ ದೊರೆತರೆ ಕತ್ತಲೆ ದೂರ ಮಾಡುವುದು ಎನ್ನುತ್ತಾರೆ. ವಿಚಿತ್ರವೆಂದರೆ ಹೆಡ್ ಫೋನ್​ಗಳಿಗೆ ಅತ್ಯುತ್ತಮ ಸಕಾರಾತ್ಮಕ ಅಭಿಪ್ರಾಯವಿದ್ದು, ಹೆಡ್ ಫೋನ್​ನ್ನು ಸಮಸ್ಯೆಗಳನ್ನು ಆಲಿಸುವವ ಎಂದು ಭಾವಿಸುತ್ತಾರೆ. ಆದರೆ ಅಭ್ಯರ್ಥಿಗಳ ಇಷ್ಟದಂತೆ ಚುನಾವಣಾ ಆಯೋಗ ಚಿಹ್ನೆಗಳನ್ನು ನೀಡುವುದಕ್ಕೆ ಸಾಧ್ಯವಿಲ್ಲ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

-ಸಂಜೀವ ಪಾಂಡ್ರೆ

ಗದಗ ಜಿಲ್ಲೆಯಲ್ಲಿ ಗ್ರಾ.ಪಂ. ಚುನಾವಣೆಗೆ ವಿತರಿಸಿರುವ ಚಿಹ್ನೆಗಳು

ರೈತನ ಶ್ರಮ ಬೆಂಕಿಗೆ ಆಹುತಿ: ಗದಗದಲ್ಲಿ 15 ಟ್ರ್ಯಾಕ್ಟರ್ ಶೇಂಗಾ ಭಸ್ಮ

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ