AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಬೇಲಿಯೇ ಎದ್ದು ಹೊಲ ಮೇಯ್ದ ಕತೆ; ನಕಲಿ ಕೀ ಬಳಸಿ ತನ್ನದೇ ಕಚೇರಿಯಿಂದ ಹಣ ದೋಚಿದ ಅಧಿಕಾರಿ

ಹೊಸಪೇಟೆ ನಗರದ ಗಾಂಧಿ ಕಾಲೋನಿಯಲ್ಲಿರುವ ಪುಲರ್ ಟನ್ ಇಂಡಿಯಾ ಕ್ರೆಡಿಟ್ ಕಂಪನಿ ಲಿಮಿಟೆಡ್ ನಲ್ಲಿ ಕಳ್ಳತನವಾಗಿತ್ತು. ಲಾಕರ್​​ನಲ್ಲಿದ್ದ 13 ಲಕ್ಷ 66 ಸಾವಿರಕ್ಕೂ ಅಧಿಕ ಹಣ ಕಳ್ಳತನವಾಗಿರುವ ಬಗ್ಗೆ ಹೊಸಪೇಟೆಯ ಬಡಾವಣೆ ಪೊಲೀಸ್ ಠಾಣೆಗೆ ಕಂಪನಿಯ ಮ್ಯಾನೇಜರ್ ದೂರು ಸಲ್ಲಿಸಿದ್ದರು.

ಇದು ಬೇಲಿಯೇ ಎದ್ದು ಹೊಲ ಮೇಯ್ದ ಕತೆ; ನಕಲಿ ಕೀ ಬಳಸಿ ತನ್ನದೇ ಕಚೇರಿಯಿಂದ ಹಣ ದೋಚಿದ ಅಧಿಕಾರಿ
ಸಾಂದರ್ಭಿಕ ಚಿತ್ರ
Skanda
| Edited By: |

Updated on: Dec 07, 2020 | 9:56 PM

Share

ಬಳ್ಳಾರಿ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎನ್ನುವ ಗಾದೆ ಇದೆ. ಹೊಸಪೇಟೆಯಲ್ಲಿ ಇದು ಅಕ್ಷರಶಃ ಸತ್ಯವಾಗಿದೆ. ಇಲ್ಲಿನ ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳು ಲಾಕರ್​​ನ ನಕಲಿ ಕೀ ಬಳಸಿ ಲಕ್ಷ ಲಕ್ಷ ಹಣ ಲಪಟಾಯಿಸಿದ್ದಾರೆ.

ಹೊಸಪೇಟೆ ನಗರದ ಗಾಂಧಿ ಕಾಲೋನಿಯಲ್ಲಿರುವ ಪುಲರ್ ಟನ್ ಇಂಡಿಯಾ ಕ್ರೆಡಿಟ್ ಕಂಪನಿ ಲಿಮಿಟೆಡ್​ನಲ್ಲಿ ಕಳ್ಳತನವಾಗಿತ್ತು. ಲಾಕರ್​​ನಲ್ಲಿದ್ದ 13 ಲಕ್ಷ 66 ಸಾವಿರಕ್ಕೂ ಅಧಿಕ ಹಣ ಕಳ್ಳತನವಾಗಿರುವ ಬಗ್ಗೆ ಹೊಸಪೇಟೆಯ ಬಡಾವಣೆ ಪೊಲೀಸ್ ಠಾಣೆಗೆ ಕಂಪನಿಯ ಮ್ಯಾನೇಜರ್ ದೂರು ಸಲ್ಲಿಸಿದ್ದರು. ದೂರು ಆಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದರು. ಕಂಪನಿಯ ಸಿಸಿ ಕ್ಯಾಮರಾ ಕೂಡ ಪರಿಶೀಲನೆ ನಡೆಸಿದ್ದರು.

ಸಿಸಿಟಿವಿ ಇರುವ ವಿಚಾರ ಗೊತ್ತುಮಾಡಿಕೊಂಡಿದ್ದ ಇವರು, ಸಿಸಿಟಿವೆಗೆ ಬಟ್ಟೆ ಮುಚ್ಚಿದ್ದರು. ಅಷ್ಟೇ ಅಲ್ಲ, ತಾವು ಯಾರೆಂದು ಬೇರೆಯವರಿಗೆ ಗೊತ್ತಾಗಬಾರದು ಎನ್ನುವ ಕಾರಣಕ್ಕೆ ಮಂಕಿ ಕ್ಯಾಪ್​​ಗಳನ್ನು ಧರಿಸಿದ್ದರು. ಕಂಪನಿ ಲಾಕರ್ ಬಳಿ ಹೋಗಿ ಕೀನಿಂದ ಲಾಕರ್ ಓಪನ್ ಮಾಡಿ ಲಕ್ಷ ಲಕ್ಷ ಹಣವನ್ನ ದೋಚಿಕೊಂಡು ಹೋಗಿದ್ದರು. ಇದು ಪೊಲೀಸರಿಗೆ ದೊಡ್ಡ ಸವಾಲಾಗಿತ್ತು.

ಪೊಲೀಸರಿಗೆ ಅನುಮಾನ: ಪೊಲೀಸರು ಪರಿಶೀಲನೆ ವಿವಿಧ ಹಂತಗಳಲ್ಲಿ ತನಿಖೆ ನಡೆಸಿದ್ದರು. ಆದರೆ, ಕಳ್ಳರ ಬಗ್ಗೆ ಯಾವುದೇ  ಸುಳಿವು ಸಿಕ್ಕಿರಲಿಲ್ಲ. ಪೊಲೀಸರಿಗೆ ಇಲ್ಲಿ ಕೆಲಸ ಮಾಡುವ ಸಿಬ್ಬಂದಿಗಳ ಮೇಲೆ ಅನುಮಾನ ಉಂಟಾಗಿತ್ತು. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಂಪನಿಯ ಮಾಜಿ ಮ್ಯಾನೇಜರ್ ಹಾಗೂ ಹಾಲಿ ಕ್ರೆಡಿಟ್ ಆಫೀಸರ್ ಕಂಪನಿಯಲ್ಲಿ ಕಳ್ಳತನ ಮಾಡಿರುವುದು ಪತ್ತೆಯಾಗಿದೆ.

ಕಳ್ಳತನ ನಡೆದಿದ್ದು ಹೇಗೆ: ಈ ಕಂಪನಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ವಿಠ್ಠಲ ಚಿಟ್ಟಿ ಅವರನ್ನು ಸಸ್ಪೆಂಡ್ ಮಾಡಲಾಗಿತ್ತು. ಈ ವೇಳೆ ಕಂಪನಿಯ ಲಾಕರ್​​ನ ಎರಡು ಕೀ ಗಳ ಪೈಕಿ ಒಂದು ಕೀ ಕೊಟ್ಟು ಇನ್ನೊಂದು ಕೀ ಕಳೆದು ಹೋಗಿದೆ ಎಂದು ನಾಟಕವಾಡಿದ್ದರು. ನಂತರ ಕಳ್ಳತನಕ್ಕೆ ಸ್ಕೆಚ್​ ಹಾಕಿದ್ದರು. ಇದಕ್ಕೆ ಸಾಥ್ ನೀಡಿದ್ದು ಪ್ರಸ್ತುತ ಕ್ರೆಡಿಟ್ ಅಫೀಸರ್ ಆಗಿ ಕೆಲ್ಸ ಮಾಡುತ್ತಿರುವ ಯು. ರವಿಕುಮಾರ್. ವಿಠ್ಠಲ ಹಾಗೂ ರವಿಕುಮಾರ್ ಜೊತೆಗೂಡಿ ಈ ಕಂಪನಿಯ ಲಾಕರ್ ನಲ್ಲಿ ಹಣ ಕಳ್ಳತನ ಮಾಡಿ ಪರಾರಿಯಾಗಿದ್ದರು. ಈಗ ಇಬ್ಬರು ಕಿಲಾಡಿಗಳ ಬಂಧನ ಮಾಡಲಾಗಿದ್ದು, ಬಂಧಿತರಿಂದ 13 ಲಕ್ಷ 66 ಸಾವಿರ ಜಪ್ತಿ ಮಾಡಲಾಗಿದೆ. ಜತೆಗೆ,ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಅಕ್ರಮ ಗಣಿಗಾರಿಕೆ: ಕಲ್ಮಶಗೊಂಡಿದೆ ಬಳ್ಳಾರಿಯ ಐತಿಹಾಸಿಕ ಹರಿಶಂಕರ ತೀರ್ಥ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ