AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ ಇತರ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಮದ್ಯದ ಬೆಲೆ ಹೆಚ್ಚು: ವರದಿ

ಕರ್ನಾಟಕದ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ​​ಫೆಡರೇಶನ್‌ ಪ್ರಕಾರ ಮದ್ಯದ ಬೆಲೆ ಏರಿಕೆಯಿಂದ ಆಗಸ್ಟ್‌ನ ಮೊದಲ ಎರಡು ವಾರಗಳಲ್ಲಿ ಮಾರಾಟ ಮತ್ತು ಆದಾಯ ಎರಡರಲ್ಲೂ ಗಣನೀಯ ಕುಸಿತ ಕಂಡಿದೆ. ಇದರಿಂದ ಸರ್ಕಾರದ ಯೋಜನೆಗಳಿಗೆ ಹೊಡೆತ ಬಿದ್ದಿದೆ ಎಂದು ಹೇಳಿದೆ.

ದೇಶದ ಇತರ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಮದ್ಯದ ಬೆಲೆ ಹೆಚ್ಚು: ವರದಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 25, 2023 | 11:12 AM

Share

ಬೆಂಗಳೂರು ಸೆ.25: ಮದ್ಯದ ಬೆಲೆಯಲ್ಲಿ ಕರ್ನಾಟಕ (Karnataka) ದೇಶದಲ್ಲೇ ಅಗ್ರಸ್ಥಾನದಲ್ಲಿದೆ. ತೆಲಂಗಾಣ ಎರಡನೇ ಸ್ಥಾನದಲ್ಲಿದೆ. ಮತ್ತು ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಎಂಆರ್​ಪಿ (MRP) (ಮ್ಯಾಕ್ಸಿಮಮ್ ರೀಟೇಲ್ ಪ್ರೈಸ್) ಮೇಲಿನ ತೆರಿಗೆ ಕೂಡ ಹೆಚ್ಚಾಗಿದೆ. ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಮದ್ಯದ (Alcohol) ನೈಜ ಬೆಲೆಗೆ ಶೇ 83 ತೆರಿಗೆ ವಿಧಿಸಲಾಗುತ್ತದೆ. ವರದಿಯೊಂದರ ಪ್ರಕಾರ, ಗೋವಾದಲ್ಲಿ 100 ರೂ. ಗೆ ಮಾರಾಟವಾಗುವ ಸ್ಪಿರಿಟ್ (ನಾನ್-ಬಿಯರ್) ಕರ್ನಾಟಕದಲ್ಲಿ ಸುಮಾರು 513 ರೂ.ಗೆ ಮಾರಾಟವಾಗುತ್ತದೆ.

ಹೆಚ್ಚಿನ ತೆರಿಗೆ ವಿಧಿಸುತ್ತಿರುವ ಹಿನ್ನೆಲೆಯಲ್ಲಿ ಮದ್ಯದ ಬೆಲೆ ಹೆಚ್ಚಾಗುತ್ತಿದೆ. ದೇಶದ ಎಲ್ಲ ರಾಜ್ಯಗಳಿಗಿಂತ ಗೋವಾದಲ್ಲಿ ಅತಿ ಕಡಿಮೆ ಬೆಲೆಗೆ ಮದ್ಯ ಸಿಗುತ್ತದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರದ ಮೊದಲ ಬಜೆಟ್‌ನಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾರತೀಯ ನಿರ್ಮಿತ ಮದ್ಯದ (ಐಎಂಎಲ್) ಎಲ್ಲಾ 18 ಸ್ಲ್ಯಾಬ್‌ಗಳ ಮೇಲೆ ಶೇ 20 ರಷ್ಟು ಮತ್ತು ಬಿಯರ್‌ನ ಮೇಲೆ ಸುಂಕವನ್ನು ಶೇ 10 ತೆರಿಗೆ ಹೆಚ್ಚಿಸಿದ್ದಾರೆ. ಅಬಕಾರಿ ಇಲಾಖೆಯ ಗುರಿಯ ಆದಾಯ ಗುರಿಯನ್ನೂ 36,000 ರೂ. ಕೋಟಿಗೆ ಹೆಚ್ಚಿಸಲಾಗಿದೆ.

ಇದನ್ನೂ ಓದಿ: ಗ್ಯಾರಂಟಿ ನಷ್ಟ ಭರಿಸೋಕ್ಕೆ ಸರ್ಕಾರದಿಂದ ಹೊಸ ಪ್ಲಾನ್‌; ಮಾಲ್‌, ಸೂಪರ್‌ ಮಾರ್ಕೆಟ್‌ನಲ್ಲೂ ಮದ್ಯ ಮಾರಾಟ

ಕರ್ನಾಟಕದ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ​​ಫೆಡರೇಶನ್‌ನ ಹೇಳಿಕೆಯ ಪ್ರಕಾರ ಆಗಸ್ಟ್‌ನ ಮೊದಲ ಎರಡು ವಾರಗಳಲ್ಲಿ ಮಾರಾಟ ಮತ್ತು ಆದಾಯ ಎರಡರಲ್ಲೂ ಗಣನೀಯ ಕುಸಿತ ಕಂಡಿದೆ. ಇದರಿಂದ ಸರ್ಕಾರದ ಯೋಜನೆಗಳಿಗೆ ಹೊಡೆತ ಬಿದ್ದಿದೆ.

ಆಗಸ್ಟ್‌ನ ಮೊದಲಾರ್ಧದಲ್ಲಿ ಐಎಮ್​ಎಲ್​​ನ 21.87 ಲಕ್ಷ ಬಾಕ್ಸ್‌ಗಳು ಮಾರಾಟವಾಗಿವೆ. ಇದು ಆಗಸ್ಟ್ 2022 ರಲ್ಲಿ ಆಗಸ್ಟ್​​ ತಿಂಗಳಲ್ಲಿ ಮಾರವಾಟವಾದ ಮದ್ಯಕ್ಕಿಂತ ಶೇ 14.25 ರಷ್ಟು ಕಡಿಮೆಯಾಗಿದೆ. ಹೊಸ ಬೆಲೆ ಜುಲೈ 20 ರಿಂದ ಜಾರಿಗೆ ಬಂದಿದೆ. ಹೊಸ ಬೆಲೆ ಬಂದ ನಂತರ ಮದ್ಯಕ್ಕೆ ಬೇಡಿಕೆ ಕಡಿಮೆಯಾಗಿದೆ ಎಂದು ಸಂಘದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:09 am, Mon, 25 September 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!