AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪಿತಪ್ಪಿಯೂ ದಿಲ್ಲಿ ಬಿಟ್ಟು ಕದಲುವ ಮನಸ್ಥಿತಿ, ಪರಿಸ್ಥಿತಿಯಲ್ಲಿಲ್ಲ ಡಿಕೆಶಿ! ಯಾಕೆ?

ಬೆಂಗಳೂರು: ಕಾಂಗ್ರೆಸ್​ನ ವರ್ಚಸ್ವೀ ನಾಯಕ ಡಿ.ಕೆ.‌ ಶಿವಕುಮಾರ್ ಅವರು ಬೆಂಗಳೂರು ಬಿಟ್ಟು 50 ದಿನಗಳೇ ಆಗುತ್ತಿವೆ. ಯಾವತ್ತೂ ಅವರು ಇಷ್ಟು ದಿನ ಕರ್ನಾಟಕ ಬಿಟ್ಟು ಹೋಗಿಲ್ಲ. ಕಾರಣವೇನೇ ಇರಲಿ ಈ ಮಧ್ಯೆ, ನಿನ್ನೆ ಕೋರ್ಟ್​ ಅವರಿಗೆ ಜಾಮೀನು ನೀಡಿ, ನೀವು ಸದ್ಯಕ್ಕೆ ಸ್ವತಂತ್ರರು. ಎಲ್ಲಿಗೆ ಬೇಕಾದರೂ ಹೋಗಬಹುದು, ಆದ್ರೆ ದೇಶವನ್ನೇ ಬಿಟ್ಟು ಹೋಗುವ ಹಾಗಿಲ್ಲ ಎಂದು ಹೇಳಿದೆ. ಸರಿ, ಸಾಕ್ಷಾತ್​ ಕೋರ್ಟ್ ಹೀಗೆ ಹೇಳಿದ ಮೇಲೆ ಡಿಕೆಶಿ, ನಿನ್ನೆ ತಿಹಾರ್​ ಜೈಲಿನಿಂದ ಹೊರಬಂದು ಸೀದಾ ಇಂದಾದರೂ ಬೆಂಗಳೂರಿಗೆ […]

ಅಪ್ಪಿತಪ್ಪಿಯೂ ದಿಲ್ಲಿ ಬಿಟ್ಟು ಕದಲುವ ಮನಸ್ಥಿತಿ, ಪರಿಸ್ಥಿತಿಯಲ್ಲಿಲ್ಲ ಡಿಕೆಶಿ! ಯಾಕೆ?
ಸಾಧು ಶ್ರೀನಾಥ್​
|

Updated on:Oct 24, 2019 | 12:40 PM

Share

ಬೆಂಗಳೂರು: ಕಾಂಗ್ರೆಸ್​ನ ವರ್ಚಸ್ವೀ ನಾಯಕ ಡಿ.ಕೆ.‌ ಶಿವಕುಮಾರ್ ಅವರು ಬೆಂಗಳೂರು ಬಿಟ್ಟು 50 ದಿನಗಳೇ ಆಗುತ್ತಿವೆ. ಯಾವತ್ತೂ ಅವರು ಇಷ್ಟು ದಿನ ಕರ್ನಾಟಕ ಬಿಟ್ಟು ಹೋಗಿಲ್ಲ. ಕಾರಣವೇನೇ ಇರಲಿ ಈ ಮಧ್ಯೆ, ನಿನ್ನೆ ಕೋರ್ಟ್​ ಅವರಿಗೆ ಜಾಮೀನು ನೀಡಿ, ನೀವು ಸದ್ಯಕ್ಕೆ ಸ್ವತಂತ್ರರು. ಎಲ್ಲಿಗೆ ಬೇಕಾದರೂ ಹೋಗಬಹುದು, ಆದ್ರೆ ದೇಶವನ್ನೇ ಬಿಟ್ಟು ಹೋಗುವ ಹಾಗಿಲ್ಲ ಎಂದು ಹೇಳಿದೆ.

ಸರಿ, ಸಾಕ್ಷಾತ್​ ಕೋರ್ಟ್ ಹೀಗೆ ಹೇಳಿದ ಮೇಲೆ ಡಿಕೆಶಿ, ನಿನ್ನೆ ತಿಹಾರ್​ ಜೈಲಿನಿಂದ ಹೊರಬಂದು ಸೀದಾ ಇಂದಾದರೂ ಬೆಂಗಳೂರಿಗೆ ಬಂದು ತಮ್ಮ ಅಭಿಮಾನಿಗಳ ಮುಂದೆ ಕಾಣಿಸಿಕೊಳ್ಳುತ್ತಾರೆ ಎಂದು ಭಾವಿಸಲಾಗಿತ್ತು. ಆದ್ರೆ ಡಿಕೆಶಿ ಸುತರಾಂ ಬೆಂಗಳೂರಿಗೆ ಬರುವ ಮೂಡ್​​ನಲ್ಲಿ ಇಲ್ಲ. ಅಪ್ಪಿತಪ್ಪಿಯೂ ದಿಲ್ಲಿ ಬಿಟ್ಟು ಕದಲುವ ಮನಸ್ಥಿತಿ/ ಪರಿಸ್ಥಿತಿ ಅವರದ್ದಾಗಿಲ್ಲ. ಏಕೆಂದ್ರೆ ಅವರನ್ನು ಇಷ್ಟು ದಿನ ತಿಹಾರ್​ ಜೈಲಿಗೆ ಕಳುಹಿಸಿದ್ದ ಜಾರಿ ನಿರ್ದೇಶನಲಾಯವಾಗಲಿ ಅಥವಾ ಸಿಬಿಐ ಆಗಲಿ ಅವರನ್ನು ಕಣ್ಣಲ್ಲಿ ಕಣ್ಣಿಟ್ಟು ಹೊಂಚುಹಾಕುತ್ತಿದೆ. ಮತ್ತೆ ವಶಕ್ಕೆ ತೆಗೆದುಕೊಳ್ಳಲು. ಇಂತಹ ಪರಿಸ್ಥಿತಿ ಇರುವಾಗ ಡಿಕೆಶಿ ತಾನೇ ಹೇಗೆ ಕರ್ನಾಟಕಕ್ಕೆ ಮರಳುತ್ತಾರೆ.

ಪರಿಸ್ಥಿತಿಯನ್ನು ನಿಭಾಯಿಸಲು ಅಗ್ರಜನಿಗೆ ಭುಜಕ್ಕೆ ಭುಜ ಕೊಟ್ಟು, ಕಷ್ಟಕಾಲದಲ್ಲಿ ತನಗೆ ಕಾಪು ನೀಡುತ್ತಿರುವ ತಮ್ಮ ಡಿ.ಕೆ.‌ ಸುರೇಶ್​ ಮನೆಯಲ್ಲೇ ಸದ್ಯಕ್ಕೆ ಶಿವಕುಮಾರ್ ವಾಸ್ತವ್ಯ ಹೂಡಿದ್ದಾರೆ. ಶಿವಕುಮಾರ್ ವಿಶ್ರಾಂತಿ ಪಡೆಯುತ್ತಿದ್ದು, ಇವತ್ತು ವಕೀಲರನ್ನು ಭೇಟಿ ಮಾಡಲಿದ್ದಾರೆ. ಅವರು ಏನು ಹೇಳುತ್ತಾರೋ ಹಾಗೆ ತಮ್ಮ ಮುಂದಿನ ಹೆಜ್ಜೆ ಇಡಲಿದ್ದಾರೆ ಎಂದು ಸ್ವತಃ ಸುರೇಶ್​ ಹೇಳಿದ್ದಾರೆ. ಅತ್ತ ಸಿಬಿಐ, ತನ್ನ ಕುಣಿಕೆಯನ್ನು ಕೈಯಲ್ಲಿ ಹಿಡಿದು ನಿಂತಿದೆ ಎನ್ನಲಾಗಿದೆ. ಹಾಗಾಗಿ ಡಿಕೆ ಶಿವಕುಮಾರ್​ ಕರ್ನಾಟಕದತ್ತ ತಲೆ ಹಾಕುವ ಆಲೋಚನೆಯನ್ನೂ ಮಾಡಿದಂತಿಲ್ಲ.

Published On - 11:01 am, Thu, 24 October 19

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ