AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಧ್ರಾದಲ್ಲಿ ಗರ್ಭಿಣಿ ಹೊಟ್ಟೆಗೆ ತ್ರಿಶೂಲದಲ್ಲಿ ಚುಚ್ಚಿ, ಮಗು ಹೊರತೆಗೆದ ದೃಶ್ಯವೂ ಇದೆ -ಎಚ್ಚರಿಸಿದ ಹೆಚ್ ​ಡಿ ಕುಮಾರಸ್ವಾಮಿ

The Kashmir Files: ಸಿನಿಮಾವನ್ನ ಎಮೋಷನಲಿ ಸಕ್ಸಸ್ ಆಗೋಕೆ ಜನರ ಹೃದಯಕ್ಕೆ ಹತ್ತಿರ ಆಗುವಂತೆ ಮಾಡ್ತಾರೆ. ಗೋಧ್ರಾದಲ್ಲಿ ಗರ್ಭಿಣಿ ಹೆಣ್ಣುಮಕ್ಕಳ ಹೊಟ್ಟೆಗೆ ತ್ರಿಶೂಲದಲ್ಲಿ ಚುಚ್ಚಿ ಮಗು ಹೊರತೆಗೆದ ದೃಶ್ಯಕೂಡ ನಡೆದು ಹೋಗಿದೆ. ಇಂತವೆಲ್ಲಾ ಮತ್ತೆ ಮುಂದುವರೆಸಿಕೊಂಡು ಹೋಗಬೇಕಾ, ಇದು ಆಗಬಾರದು ಎನ್ನೋದು ನನ್ನ ಅಭಿಪ್ರಾಯ - ಹೆಚ್​ಡಿ ಕುಮಾರಸ್ವಾಮಿ

ಗೋಧ್ರಾದಲ್ಲಿ ಗರ್ಭಿಣಿ ಹೊಟ್ಟೆಗೆ ತ್ರಿಶೂಲದಲ್ಲಿ ಚುಚ್ಚಿ, ಮಗು ಹೊರತೆಗೆದ ದೃಶ್ಯವೂ ಇದೆ -ಎಚ್ಚರಿಸಿದ ಹೆಚ್ ​ಡಿ ಕುಮಾರಸ್ವಾಮಿ
ಗೋಧ್ರಾದಲ್ಲಿ ಗರ್ಭಿಣಿ ಹೊಟ್ಟೆಗೆ ತ್ರಿಶೂಲದಲ್ಲಿ ಚುಚ್ಚಿ, ಮಗು ಹೊರತೆಗೆದ ದೃಶ್ಯಕೂಡ ನಡೆದು ಹೋಗಿದೆ - ಎಚ್ಚರಿಸಿದ ಹೆಚ್​ಡಿ ಕುಮಾರಸ್ವಾಮಿ
TV9 Web
| Edited By: |

Updated on:Mar 18, 2022 | 4:15 PM

Share

ಹಾಸನ: ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಟಿ ಮಾಯಗೌಡನಹಳ್ಳಿ ಗ್ರಾಮದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಸುದ್ದಿಗಾರರೊಂದಿಗೆ ಮಾತನಾಡಿದರು. ದಿ ಕಾಶ್ಮೀರಿ ಫೈಲ್ಸ್​ ಸಿನಿಮಾ (The Kashmir Files) ಬಗ್ಗೆ ಮಾತನಾಡಿದ ಹೆಚ್​ಡಿ ಕುಮಾರಸ್ವಾಮಿ ಅವರು ಹತ್ಯಾಕಂಡಗಳು ಮಹಾಭಾರತ, ಕುರುಕ್ಷೇತ್ರ ಕಾಲದಿಂದಲೂ ನಡೆದುಕೊಂಡು ಬಂದಿವೆ. ಈ ದೇಶಕ್ಕೆ ಸ್ವಾತಂತ್ರ್ಯ ಬಂದಾಗ ದೇಶ ವಿಭಜನೆ ಆದಾಗ 20 ಲಕ್ಷ ಕುಟುಂಬಗಳ ಬಲಿದಾನ ಆಗಿದೆ. ದೇಶದ ಹಿಂದಿನ ಚರಿತ್ರೆ ಹೀಗಿರುವಾಗ ಮತ್ತೆ ಇಂತಹ ರಕ್ತಪಾತವೇ ಮುಂದುವರಿದುಕೊಂಡು ಬರಬೇಕಾ? ಅವರು ಸಿನಿಮಾ ತೆಗೆದಿರೊದು ನೋವು ಹೇಳಿಕೊಂಡಿರೋದು ಎಲ್ಲವೂ ನಡೆದಿದೆ. ಆದರೆ ಅದು ಎಷ್ಟರಮಟ್ಟಿಗೆ ನಡೆದಿದೆ ನಾನು ಹೋಗಿ ನೋಡಿಲ್ಲ.

ಸಿನಿಮಾವನ್ನ ಎಮೋಷನಲಿ ಸಕ್ಸಸ್ ಆಗೋಕೆ ಜನರ ಹೃದಯಕ್ಕೆ ಹತ್ತಿರ ಆಗುವಂತೆ ಮಾಡ್ತಾರೆ. ಗೋಧ್ರಾದಲ್ಲಿ ಗರ್ಭಿಣಿ ಹೆಣ್ಣುಮಕ್ಕಳ ಹೊಟ್ಟೆಗೆ ತ್ರಿಶೂಲದಲ್ಲಿ ಚುಚ್ಚಿ ಮಗು ಹೊರತೆಗೆದ ದೃಶ್ಯಕೂಡ ನಡೆದು ಹೋಗಿದೆ (2002 Gujarat riots). ಇಂತವೆಲ್ಲಾ ಮತ್ತೆ ಮುಂದುವರೆಸಿಕೊಂಡು ಹೋಗಬೇಕಾ, ಇದು ಆಗಬಾರದು ಎನ್ನೋದು ನನ್ನ ಅಭಿಪ್ರಾಯ. ನಾವೇನಾದ್ರು ನಿಜ ಹೇಳೋಕೆ ಹೋದ್ರೆ ಅದನ್ನ ತಿರುಚುತ್ತಾರೆ ಏನು ಮಾಡೋದು. ಈಗ ಜನರ ಅಭಿವೃದ್ಧಿ ಕೆಲಸದ ಮೇಲೆ ಓಟ್ ಕೇಳ್ತಾ ಇಲ್ಲಾ, ಅವರವರದೇ ಅದ ಅಜೆಂಡಾ ಇಟ್ಟುಕೊಂಡಿದಾರೆ. ಭಾವನಾತ್ಮಕ ವಿಚರಗಳ ಮೇಲೆ ಮತ ಕೇಳಲು ಹೊರಟಿದ್ದಾರೆ. ಕೊನೆಗೆ ಇದಕ್ಕೆ ಪ್ರಾಯಶ್ಚಿತ್ತ ಪಡೋದು ಅಮಾಯಕ ಜನರಲ್ಲವೆ? ಅಧಿಕಾರ ಯಾರಿಗೂ ಶಾಶ್ವತ ಅಲ್ಲಾ, ಯಾವ ವಂಶ ಕೂಡ ಉಳಿದಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲೂ ಜನರೇ ಅಂತಿಮ ತೀರ್ಮಾನ ಮಾಡೋರು ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ​ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಎಚ್ಚರಿಸಿದರು.

ಹಿಜಾಬ್‌ ಯಾಕೆ ದೊಡ್ಡದು ಮಾಡ್ತೀರಾ… ಸರ್ಕಾರವೇ ಈ ಬಗ್ಗೆ ಕಾಂಪ್ರೊಮೈಸ್ ಮಾಡಲು ಮುಂದಾಗಲಿ: ಹಿಜಾಬ್‌ ಸಂಬಂಧ ನಾನು ನೀಡಿದ್ದ ಹೇಳಿಕೆ ತಿರುಚಲಾಗಿದೆ. ಹೈಕೋರ್ಟ್‌ನ ತೀರ್ಪನ್ನು ತಲೆಬಾಗಿ ಸ್ವೀಕರಿಸಬೇಕೆಂದಿದ್ದೆ. ಸರ್ಕಾರಿ ಶಾಲೆಯಲ್ಲಿ ಸಮವಸ್ತ್ರ ನಿಯಮ ಪಿಯುವರೆಗಿದೆ. ಈ ಗೊಂದಲ ನಿವಾರಣೆಗೆ ಸರ್ಕಾರ ಪ್ರಯತ್ನ ಮಾಡಬೇಕು. ಹೈಕೋರ್ಟ್ ಇದರ ಹಿಂದೆ ಕಾಣದ ಕೈ ಇದೆ ಎಂದು ಹೇಳಿದೆ. ಸರ್ಕಾರ ಆ ಕಾಣದ ಕೈಗಳನ್ನ ಗುರ್ತಿಸಲಿ. ಹಿಜಾಬ್‌ ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ಹೀಗಾಗಿ ಮುಸ್ಲಿಂ ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡುವ ಅಗತ್ಯವಿದೆ. ಶಾಲಾ ಮಕ್ಕಳು ಹಾಲಿನಂತಾ ಪರಿಶುದ್ಧ ಮನಸ್ಸಿನವರು, ಅದನ್ನ ಕಲುಷಿತ ಮಾಡಬೇಡಿ.

ಸರ್ವ ಜನಾಂಗದ ಶಾಂತಿಯ ತೋಟ ನಮ್ಮದು. ಸರ್ಕಾರ ಆರೂವರೆ ಕೋಟಿ ಜನರಿಗೆ ಇದೆ, ಅವರಿಗಾಗಿ ಕೆಲಸ ಮಾಡಬೇಕು. ಸರ್ಕಾರವೇ ಕೊಟ್ಟ ಯೂನಿಫಾರ್ಮ್ ದುಪ್ಪಟ್ಟಾವನ್ನು ಹೆಣ್ಣು ಮಕ್ಕಳು ತಲೆ ಮೇಲೆ‌ ಸುತ್ತಿ ಹಾಕಿಕೊಳ್ಳಲಿ ಬಿಡಿ. ಇದನ್ನ ಅವರು ನೆರಳಿಗಾಗಿಯೊ, ಧೂಳಿಗಾಗಿ ಹಾಕೊತ್ತಾರೋ ಗೊತ್ತಿಲ್ಲ. ಕಸ್ತೂರಬಾ, ಮದರ್ ತೆರೆಸಾ ಹಾಕುತ್ತಿರಲಿಲ್ಲವಾ ಅದನ್ನೇ ಯಾಕೆ ದೊಡ್ಡದು ಮಾಡ್ತೀರಾ. ಸರ್ಕಾರವೇ ಈ ಬಗ್ಗೆ ಕಾಂಪ್ರೊಮೈಸ್ ಮಾಡಲು ಮುಂದಾಗಲಿ ಎಂದೂ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಟಿ. ಮಾಯಗೌಡನಹಳ್ಳಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಸಲಹೆ ನೀಡಿದರು.

Published On - 4:05 pm, Fri, 18 March 22

ವಿಡಿಯೋ: ಡಿಕೆಶಿ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿದ್ದರಾಮಯ್ಯ!
ವಿಡಿಯೋ: ಡಿಕೆಶಿ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿದ್ದರಾಮಯ್ಯ!
ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ
ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ