Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾ.ಶಿವರಾಮ ಕಾರಂತ ಬಡಾವಣೆಗೆ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರಿಂದ ಪ್ರತಿಭಟನೆ

ಡಾ.ಶಿವರಾಮ ಕಾರಂತ ಬಡಾವಣೆ ಹೆಸರಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಭೂಸ್ವಾಧೀನ ವಿಚಾರಕ್ಕೆ ಸಂಬಂಧಿಸಿ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ಗ್ರಾಮಸ್ಥರು ಪ್ರತಿಭಟನೆಗೆ ಮುಂದಾಗಿದ್ದಾರೆ.

ಡಾ.ಶಿವರಾಮ ಕಾರಂತ ಬಡಾವಣೆಗೆ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರಿಂದ ಪ್ರತಿಭಟನೆ
ಪ್ರತಿಭಟನೆಗೆ ಮುಂದಾದ ಗ್ರಾಮಸ್ಥರು
Follow us
shruti hegde
| Updated By: ಸಾಧು ಶ್ರೀನಾಥ್​

Updated on: Mar 24, 2021 | 4:51 PM

ನೆಲಮಂಗಲ: ಡಾ.ಶಿವರಾಮ ಕಾರಂತ ಬಡಾವಣೆ ಹೆಸರಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ಗ್ರಾಮಸ್ಥರು ಪ್ರತಿಭಟನೆಗೆ ಮುಂದಾಗಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಪ್ರತಿಭಟನೆ ನಡೆಸಿದ್ದಾರೆ.

ಕೆಂಪಾಪುರ, ಸೋಮಶೆಟ್ಟಿಹಳ್ಳಿ, ಲಕ್ಷ್ಮೀಪುರ, ಗಾಣಿಗರಹಳ್ಳಿಯ ಗ್ರಾಮಸ್ಥರು ನಡೆಸುವ ಪ್ರತಿಭಟನೆಯನ್ನು ತಡೆಯಲು ಪೊಲೀಸರು ಸಕಲ ಸಿದ್ಧತೆ ಮಾಡಿಕೊಂಡಿದ್ದರು. ಪ್ರತಿಭಟನೆಗೆ ತೆರಳಿದರೆ ಕೇಸ್ ಹಾಕುವುದಾಗಿ ಪೊಲೀಸರು ಬೆದರಿಕೆ ಹಾಕಿದ್ದಾರೆ. ಈ ರೀತಿಯಾಗಿ ಬೆದರಿಕೆ ಹಾಕುತ್ತಿರುವ ಪೊಲೀಸರ ವಿರುದ್ಧ ಗ್ರಾಮಸ್ಥರಿಂದ ಆರೋಪದ ಮಾತು ಕೇಳಿ ಬಂದಿದೆ. ಸೋಲದೇವನಹಳ್ಳಿ ಪೊಲೀಸರ ವಿರುದ್ಧ ಗ್ರಾಮಸ್ಥರು ಕಿಡಿಕಾರಿದ್ದಾರೆ. ಗ್ರಾಮಗಳಿಗೆ ಜೆಡಿಎಸ್ ಶಾಸಕ ಆರ್.ಮಂಜುನಾಥ್ ಭೇಟಿ ನೀಡಿದ್ದು, ಸರ್ಕಾರದ ನಡೆ ವಿರುದ್ಧ ಶಾಸಕ ಮಂಜುನಾಥ್ ಆಕ್ರೋಶ ಹೊರಹಾಕಿದ್ದಾರೆ.

ಜನರು ಮತ್ತು ರೈತರು ಇಂದು ಬಿಡಿಎಗೆ ಮುತ್ತಿಗೆಗೆ ಮುಂದಾಗಿದ್ದರು. ಪ್ರತಿಭಟನೆಗೆ ಅವಕಾಶ ಕೊಡದೆ ಪ್ರತಿಭಟನೆಕಾರರನ್ನು ಬಸ್​ನಲ್ಲಿ ಬಲವಂತವಾಗಿ ಪೊಲೀಸರು ಕರೆದೊಯ್ದಿದ್ದಾರೆ. ಈ ಕುರಿತಾಗಿ ಪ್ರತಿಭಟನೆಕಾರರು ಮತ್ತು ಪೊಲೀಸರ ಮಧ್ಯೆ ಮಾತಿನ ಚಕಮಕಿ ಏರ್ಪಟ್ಟಿದೆ. ನಮ್ಮ ಜಾಗವನ್ನು ನಮಗೆ ನೀಡಿ ಎಂದು ಜನರು ಒತ್ತಾಯಿಸಿದ್ದಾರೆ. ಬಿಡಿಎ ಮುಂದೆ ಪ್ರತಿಭಟನೆ ನಡೆಸಲು ಪೊಲೀಸರು ತಡೆ ಒಡ್ಡಿದ್ದಾರೆ. ದಾರಿ ಮಧ್ಯವೇ ಪ್ರತಿಭಟನಾಕಾರರನ್ನು ತಡೆದು ಪೊಲೀಸರು ಕೆಲವರನ್ನು ಬಂಧಿಸಿದ್ದಾರೆ.

ಈ ಕುರಿತಂತೆ ಕೋಡಿಹಳ್ಳಿ ಚಂದ್ರಶೇಖರ್ ಹೇಳಿಕೆ ನೀಡಿದ್ದು, ಶಿವರಾಮ ಕಾರಂತ ಬಡಾವಣೆ ವಿಚಾರ 12 ವರ್ಷಗಳ ಹಿಂದೆ ನೋಟಿಫಿಕೇಶನ್ ಆಗಿದೆ. 24 ಅಪಾರ್ಟ್‌ಮೆಂಟ್ ಕಟ್ಟಲು ಬಿಡಿಎ ಅನುಮತಿ ಕೊಟ್ಟಿದೆ. ಲೇಔಟ್ ಮಾಡಲು ಈಗ ಬಿಡಿಎ ಮುಂದಾಗಿದೆ. ಸುಪ್ರೀಂಕೋರ್ಟ್ ಹೇಳುತ್ತಿದೆ ಎಂದು ಬಿಡಿಎ ಜನರಿಗೆ ಕಿರುಕುಳ ಕೊಡುತ್ತಿದೆ. ಜನರಿಗೆ ಕಿರುಕುಳ ಕೊಟ್ಟು ಲೇಔಟ್ ಮಾಡೋದು ಎಷ್ಟು ಸರಿ? ಸತ್ಯಾಗ್ರಹ ತಡೆಯೋದು ಸರಿಯಲ್ಲ. ಶಾಸಕ ವಿಶ್ವನಾಥ್ ಮಾತು ತಪ್ಪಬಾರದು. ವಿರೋಧ ಪಕ್ಷದಲ್ಲಿದ್ದಾಗ ಒಂದು ಮಾತು, ಆಡಳಿತ ಪಕ್ಷದಲ್ಲಿದ್ದಾಗ ಒಂದು ಮಾತನಾಡೋದು ಸರಿಯಲ್ಲ. ಅವರು ಮಾತಿಗೆ ತಪ್ಪಿದ್ದಕ್ಕೆ ಜನ ಇಂದು ಬೀದಿಗೆ ಬಂದಿದ್ದಾರೆ ಎಂದು ಮಾತನಾಡಿದ್ದಾರೆ.

ಇದನ್ನೂ ಓದಿ: ಭೀಕರ ರಸ್ತೆ ಅಪಘಾತ: ಹೆದ್ದಾರಿ ಭೂಸ್ವಾಧೀನ ಅಧಿಕಾರಿ ಸೇರಿ ಇಬ್ಬರ ದುರ್ಮರಣ

ಯಲಹಂಕ ಭೂಸ್ವಾಧೀನಾಧಿಕಾರಿಯಾಗಿದ್ದ ಡಾ. ಸುಧಾ ಮನೆ ACB ರೇಡ್; ಮನೆಯಲ್ಲಿ ‘ಚಿನ್ನದ ಗಣಿ’

ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ