AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾ.ಶಿವರಾಮ ಕಾರಂತ ಬಡಾವಣೆಗೆ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರಿಂದ ಪ್ರತಿಭಟನೆ

ಡಾ.ಶಿವರಾಮ ಕಾರಂತ ಬಡಾವಣೆ ಹೆಸರಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಭೂಸ್ವಾಧೀನ ವಿಚಾರಕ್ಕೆ ಸಂಬಂಧಿಸಿ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ಗ್ರಾಮಸ್ಥರು ಪ್ರತಿಭಟನೆಗೆ ಮುಂದಾಗಿದ್ದಾರೆ.

ಡಾ.ಶಿವರಾಮ ಕಾರಂತ ಬಡಾವಣೆಗೆ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರಿಂದ ಪ್ರತಿಭಟನೆ
ಪ್ರತಿಭಟನೆಗೆ ಮುಂದಾದ ಗ್ರಾಮಸ್ಥರು
shruti hegde
| Edited By: |

Updated on: Mar 24, 2021 | 4:51 PM

Share

ನೆಲಮಂಗಲ: ಡಾ.ಶಿವರಾಮ ಕಾರಂತ ಬಡಾವಣೆ ಹೆಸರಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ಗ್ರಾಮಸ್ಥರು ಪ್ರತಿಭಟನೆಗೆ ಮುಂದಾಗಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಪ್ರತಿಭಟನೆ ನಡೆಸಿದ್ದಾರೆ.

ಕೆಂಪಾಪುರ, ಸೋಮಶೆಟ್ಟಿಹಳ್ಳಿ, ಲಕ್ಷ್ಮೀಪುರ, ಗಾಣಿಗರಹಳ್ಳಿಯ ಗ್ರಾಮಸ್ಥರು ನಡೆಸುವ ಪ್ರತಿಭಟನೆಯನ್ನು ತಡೆಯಲು ಪೊಲೀಸರು ಸಕಲ ಸಿದ್ಧತೆ ಮಾಡಿಕೊಂಡಿದ್ದರು. ಪ್ರತಿಭಟನೆಗೆ ತೆರಳಿದರೆ ಕೇಸ್ ಹಾಕುವುದಾಗಿ ಪೊಲೀಸರು ಬೆದರಿಕೆ ಹಾಕಿದ್ದಾರೆ. ಈ ರೀತಿಯಾಗಿ ಬೆದರಿಕೆ ಹಾಕುತ್ತಿರುವ ಪೊಲೀಸರ ವಿರುದ್ಧ ಗ್ರಾಮಸ್ಥರಿಂದ ಆರೋಪದ ಮಾತು ಕೇಳಿ ಬಂದಿದೆ. ಸೋಲದೇವನಹಳ್ಳಿ ಪೊಲೀಸರ ವಿರುದ್ಧ ಗ್ರಾಮಸ್ಥರು ಕಿಡಿಕಾರಿದ್ದಾರೆ. ಗ್ರಾಮಗಳಿಗೆ ಜೆಡಿಎಸ್ ಶಾಸಕ ಆರ್.ಮಂಜುನಾಥ್ ಭೇಟಿ ನೀಡಿದ್ದು, ಸರ್ಕಾರದ ನಡೆ ವಿರುದ್ಧ ಶಾಸಕ ಮಂಜುನಾಥ್ ಆಕ್ರೋಶ ಹೊರಹಾಕಿದ್ದಾರೆ.

ಜನರು ಮತ್ತು ರೈತರು ಇಂದು ಬಿಡಿಎಗೆ ಮುತ್ತಿಗೆಗೆ ಮುಂದಾಗಿದ್ದರು. ಪ್ರತಿಭಟನೆಗೆ ಅವಕಾಶ ಕೊಡದೆ ಪ್ರತಿಭಟನೆಕಾರರನ್ನು ಬಸ್​ನಲ್ಲಿ ಬಲವಂತವಾಗಿ ಪೊಲೀಸರು ಕರೆದೊಯ್ದಿದ್ದಾರೆ. ಈ ಕುರಿತಾಗಿ ಪ್ರತಿಭಟನೆಕಾರರು ಮತ್ತು ಪೊಲೀಸರ ಮಧ್ಯೆ ಮಾತಿನ ಚಕಮಕಿ ಏರ್ಪಟ್ಟಿದೆ. ನಮ್ಮ ಜಾಗವನ್ನು ನಮಗೆ ನೀಡಿ ಎಂದು ಜನರು ಒತ್ತಾಯಿಸಿದ್ದಾರೆ. ಬಿಡಿಎ ಮುಂದೆ ಪ್ರತಿಭಟನೆ ನಡೆಸಲು ಪೊಲೀಸರು ತಡೆ ಒಡ್ಡಿದ್ದಾರೆ. ದಾರಿ ಮಧ್ಯವೇ ಪ್ರತಿಭಟನಾಕಾರರನ್ನು ತಡೆದು ಪೊಲೀಸರು ಕೆಲವರನ್ನು ಬಂಧಿಸಿದ್ದಾರೆ.

ಈ ಕುರಿತಂತೆ ಕೋಡಿಹಳ್ಳಿ ಚಂದ್ರಶೇಖರ್ ಹೇಳಿಕೆ ನೀಡಿದ್ದು, ಶಿವರಾಮ ಕಾರಂತ ಬಡಾವಣೆ ವಿಚಾರ 12 ವರ್ಷಗಳ ಹಿಂದೆ ನೋಟಿಫಿಕೇಶನ್ ಆಗಿದೆ. 24 ಅಪಾರ್ಟ್‌ಮೆಂಟ್ ಕಟ್ಟಲು ಬಿಡಿಎ ಅನುಮತಿ ಕೊಟ್ಟಿದೆ. ಲೇಔಟ್ ಮಾಡಲು ಈಗ ಬಿಡಿಎ ಮುಂದಾಗಿದೆ. ಸುಪ್ರೀಂಕೋರ್ಟ್ ಹೇಳುತ್ತಿದೆ ಎಂದು ಬಿಡಿಎ ಜನರಿಗೆ ಕಿರುಕುಳ ಕೊಡುತ್ತಿದೆ. ಜನರಿಗೆ ಕಿರುಕುಳ ಕೊಟ್ಟು ಲೇಔಟ್ ಮಾಡೋದು ಎಷ್ಟು ಸರಿ? ಸತ್ಯಾಗ್ರಹ ತಡೆಯೋದು ಸರಿಯಲ್ಲ. ಶಾಸಕ ವಿಶ್ವನಾಥ್ ಮಾತು ತಪ್ಪಬಾರದು. ವಿರೋಧ ಪಕ್ಷದಲ್ಲಿದ್ದಾಗ ಒಂದು ಮಾತು, ಆಡಳಿತ ಪಕ್ಷದಲ್ಲಿದ್ದಾಗ ಒಂದು ಮಾತನಾಡೋದು ಸರಿಯಲ್ಲ. ಅವರು ಮಾತಿಗೆ ತಪ್ಪಿದ್ದಕ್ಕೆ ಜನ ಇಂದು ಬೀದಿಗೆ ಬಂದಿದ್ದಾರೆ ಎಂದು ಮಾತನಾಡಿದ್ದಾರೆ.

ಇದನ್ನೂ ಓದಿ: ಭೀಕರ ರಸ್ತೆ ಅಪಘಾತ: ಹೆದ್ದಾರಿ ಭೂಸ್ವಾಧೀನ ಅಧಿಕಾರಿ ಸೇರಿ ಇಬ್ಬರ ದುರ್ಮರಣ

ಯಲಹಂಕ ಭೂಸ್ವಾಧೀನಾಧಿಕಾರಿಯಾಗಿದ್ದ ಡಾ. ಸುಧಾ ಮನೆ ACB ರೇಡ್; ಮನೆಯಲ್ಲಿ ‘ಚಿನ್ನದ ಗಣಿ’

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು