Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check ಕರ್ನಾಟಕದ ಯುವ ಕಾಂಗ್ರೆಸ್‌ ಕಚೇರಿ ಇಸ್ಲಾಂ ಧರ್ಮದ ರೀತಿಯಲ್ಲಿ ಉದ್ಘಾಟನೆ ಎಂಬ ವೈರಲ್ ಚಿತ್ರದ ಸತ್ಯಾಸತ್ಯತೆ ಏನು?

ಕಾಂಗ್ರೆಸ್ ಭವನದಲ್ಲಿ ವಿವಿಧ ಧರ್ಮಗಳ ವಿಧಿ ವಿಧಾನಗಳ ಮೂಲಕ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಕೆಪಿವೈಸಿಸಿ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸುತ್ತಿರುವ ಚಿತ್ರವನ್ನು ಇಸ್ಲಾಮಿಕ್ ವಿಧಿ ವಿಧಾನಗಳ ಪ್ರಕಾರ ಹೊಸ ಯೂತ್ ಕಾಂಗ್ರೆಸ್ ಕಚೇರಿ ಉದ್ಘಾಟನೆ ಮಾಡಲಾಗಿದೆ ಎಂಬ ಶೀರ್ಷಿಕೆಯೊಂದಿಗೆ ವೈರಲ್ ಮಾಡಲಾಗಿದೆ

Fact Check ಕರ್ನಾಟಕದ ಯುವ ಕಾಂಗ್ರೆಸ್‌ ಕಚೇರಿ ಇಸ್ಲಾಂ ಧರ್ಮದ ರೀತಿಯಲ್ಲಿ ಉದ್ಘಾಟನೆ ಎಂಬ ವೈರಲ್ ಚಿತ್ರದ ಸತ್ಯಾಸತ್ಯತೆ ಏನು?
ವೈರಲ್ ಚಿತ್ರದ ಫ್ಯಾಕ್ಟ್​​ಚೆಕ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Feb 02, 2022 | 6:06 PM

ಕರ್ನಾಟಕದಲ್ಲಿ ಯುವ ಕಾಂಗ್ರೆಸ್ ಕಚೇರಿಯ (Youth Congress office)ಉದ್ಘಾಟನಾ ಸಮಾರಂಭದಲ್ಲಿನ ಚಿತ್ರ ಎಂದು ಪುರುಷರ ಗುಂಪೊಂದು ಕೋಣೆಯೊಳಗೆ ದುವಾ (ಪ್ರಾರ್ಥನೆ ) ಮಾಡುತ್ತಿರುವ ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಇವರಿರುವ ಕೋಣೆಯ ಗೋಡೆಯ ಮೇಲೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರ ಭಾವಚಿತ್ರಗಳನ್ನೂ ಕಾಣಬಹುದು. ಇದು ಮದರಸದ ಉದ್ಘಾಟನೆಯಲ್ಲ, ಕಾಂಗ್ರೆಸ್ ಕಚೇರಿಯ ಉದ್ಘಾಟನೆ ಎಂದು ಪ್ರತೀಶ್ ವಿಶ್ವನಾಥ್ ಎಂಬವರು ಇದೇ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ. ಟ್ವಿಟರ್​​ನಲ್ಲಿ ಹಲವರು ಇದೇ ಚಿತ್ರವನ್ನು ಟ್ವೀಟ್ ಮಾಡಿದ್ದು ಫೇಸ್​​ಬುಕ್ ನಲ್ಲಿ ಕಪಿಲ್ ಮಿಶ್ರಾ ಫ್ಯಾನ್ ಪೇಜ್ ನಲ್ಲಿಯೂ ಈ ಫೋಟೊ ಶೇರ್ ಆಗಿದೆ.  ಮುಸ್ಲಿಂ ಧರ್ಮದ ರೀತಿಯಲ್ಲಿ ಕಾಂಗ್ರೆಸ್ ಕಚೇರಿಯನ್ನು ಉದ್ಘಾಟನೆ ಮಾಡಲಾಯಿತೇ? ವೈರಲ್ ಫೋಟೊದ ಸತ್ಯಾಸತ್ಯತೆ ಏನು ಎಂಬುದನ್ನು ತಿಳಿಯಲು ಆಲ್ಟ್ ನ್ಯೂಸ್ ಫ್ಯಾಕ್ಟ್ ಚೆಕ್ ಮಾಡಿದೆ. ಈ ಬಗ್ಗೆ Karnataka youth congress inauguration ಎಂದು ಗೂಗಲ್ ನಲ್ಲಿ ಸರ್ಚ್ ಮಾಡಿದಾಗ ಡೆಕ್ಕನ್ ಹೆರಾಲ್ಡ್​​​ನಲ್ಲಿರುವ ಸುದ್ದಿ ಸಿಕ್ಕಿದೆ. ಈ ಸುದ್ದಿ ಪ್ರಕಾರ ಜನವರಿ 31 ರಂದು ಮೊಹಮ್ಮದ್  ಹ್ಯಾರಿಸ್ ನಲಪಾಡ್  (Mohammed Haris Nalapad)ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ (ಕೆಪಿವೈಸಿಸಿ) ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಂಪ್ರದಾಯದಂತೆ ಧಾರ್ಮಿಕ ವಿಧಿವಿಧಾನಗಳೊಂದಿಗೆ ಹ್ಯಾರಿಸ್ ತಮ್ಮ ಕಚೇರಿಯನ್ನು ಉದ್ಘಾಟಿಸಿದರು ಎಂದು ವರದಿಯಲ್ಲಿ ಹೇಳಿದೆ.

ಫೇಸ್‌ಬುಕ್‌ನಲ್ಲಿ ಇದೇ ಕೀವರ್ಡ್ ಹುಡುಕಾಡಿದಾಗ ನಲಪಾಡ್ ಅವರ ತಂದೆ ಮತ್ತು ಶಾಂತಿನಗರ ಶಾಸಕ ಎನ್‌ಎ ಹ್ಯಾರಿಸ್ ಅವರು ಹಂಚಿಕೊಂಡ ಫೇಸ್‌ಬುಕ್ ಲೈವ್ ವಿಡಿಯೊ ಸಿಕ್ಕಿದೆ, ಅಲ್ಲಿ ಮೊಹಮ್ಮದ್ ಹವನ ಸಮಾರಂಭದಲ್ಲಿ ಭಾಗವಹಿಸುವುದನ್ನು ಕಾಣಬಹುದು. ಹ್ಯಾರಿಸ್‌ಗೆ ಅಭಿನಂದನೆ ಸಲ್ಲಿಸುವ ಸಂದರ್ಭದಲ್ಲಿ ಇತರ ಕಾಂಗ್ರೆಸ್ ನಾಯಕರು ಈ ಕಾರ್ಯಕ್ರಮದ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ.

ವೈರಲ್ ಚಿತ್ರದಲ್ಲಿ ಹೇಳಿರುವಂತೆ “ಹೊಸ ಕಚೇರಿ” ಉದ್ಘಾಟನೆ ಎಂಬ ಹೇಳಿಕೆಯು ನಿಜವಲ್ಲ. ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ಹಾಲಿ ಕೆಪಿವೈಸಿಸಿ ಅಧ್ಯಕ್ಷ ರಕ್ಷಾ ರಾಮಯ್ಯ ಅವರ ಸ್ಥಾನಕ್ಕೆ ಹ್ಯಾರಿಸ್ ಬಂದಿದ್ದಾರೆ. ಜನವರಿ 31 ರಂದು ರಕ್ಷಾ ಅವಧಿಯು ಕೊನೆಗೊಂಡಿತ್ತು.ಅವರು ಕಾಂಗ್ರೆಸ್ ಭವನದಲ್ಲಿ ಕೆಲವು ವಿಧಿ ವಿಧಾನಗಳನ್ನು ಮಾಡುವ ಮೂಲಕ ಅಧಿಕಾರ ವಹಿಸಿಕೊಂಡರು. ಯಾವುದೇ ಸುದ್ದಿ ವರದಿಗಳಲ್ಲಿ ಹೊಸ ಕಚೇರಿಯ ಪ್ರಸ್ತಾಪವಿಲ್ಲ. ಹ್ಯಾರಿಸ್ ಅವರು ಟ್ವೀಟ್ ನಲ್ಲಿ “ಕಾಂಗ್ರೆಸ್ ಭವನದಲ್ಲಿರುವ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಕಚೇರಿ” ಎಂದು ಹೇಳಿದ್ದಾರೆ.

ಒಟ್ಟಿನಲ್ಲಿ ಕಾಂಗ್ರೆಸ್ ಭವನದಲ್ಲಿ ವಿವಿಧ ಧರ್ಮಗಳ ವಿಧಿ ವಿಧಾನಗಳ ಮೂಲಕ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಕೆಪಿವೈಸಿಸಿ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸುತ್ತಿರುವ ಚಿತ್ರವನ್ನು ಇಸ್ಲಾಮಿಕ್ ವಿಧಿ ವಿಧಾನಗಳ ಪ್ರಕಾರ ಹೊಸ ಯೂತ್ ಕಾಂಗ್ರೆಸ್ ಕಚೇರಿ ಉದ್ಘಾಟನೆ ಮಾಡಲಾಗಿದೆ ಎಂಬ ತಪ್ಪಾದ ಶೀರ್ಷಿಕೆಯೊಂದಿಗೆ ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಮೋದಿ ಚುನಾವಣೆಗಾಗಿ ಉಡುಗೆ ತೊಡುತ್ತಾರೆ, ಈ ಗಿಮಿಕ್​​ಗಳಿಂದ ದೇಶಕ್ಕೆ ಏನು ಸಿಗುತ್ತದೆ?: ತೆಲಂಗಾಣ ಸಿಎಂ ಕೆಸಿಆರ್

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ