AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ವಿಚಾರದಲ್ಲಿ ಕಾಂಗ್ರೆಸ್​ನಲ್ಲಿ ದ್ವಂದ್ವ ನಿಲುವು; ಶ್ರೀರಾಮನ ಕಟೌಟ್ ಹಾಕಿದ ಕೈ ಶಾಸಕರು

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ವಿಚಾರದಲ್ಲಿ ಕರ್ನಾಟಕ ಕಾಂಗ್ರೆಸ್​ ಪಕ್ಷದಲ್ಲಿ ದ್ವಂದ್ವ ನಿಲುವು ಕಂಡುಬರುತ್ತಿದೆ. ರಾಜ್ಯ ಕಾಂಗ್ರೆಸ್ ನಾಯಕರು ಕಾರ್ಯಕ್ರಮದಿಂದ ದೂರ ಉಳಿಯಲು ನಿರ್ಣಯಿಸಿದ್ದಾರೆ. ಆದರೆ, ಸ್ವಪಕ್ಷದ ಶಾಸಕರಾದ ಎಂ. ಕೃಷ್ಣಪ್ಪ ಹಾಗೂ ಪ್ರಿಯಾಕೃಷ್ಣ ಅವರು ಕಚೇರಿಯಲ್ಲಿ ಬೃಹತ್ ಕಟೌಟ್​ಗಳನ್ನು ಹಾಕಿ ಅಚ್ಚರಿ ಮೂಡಿಸಿದ್ದಾರೆ. ಇನ್ನೊಂದೆಡೆ, ಕಟೌಟ್​ ಹಾಕಬೇಕಾ ಎಂದ ವ್ಯಕ್ತಿಗೆ ಏನೂ ಹೇಳದೆ ಡಿಕೆ ಶಿವಕುಮಾರ್ ತೆರಳಿದ್ದಾರೆ.

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ವಿಚಾರದಲ್ಲಿ ಕಾಂಗ್ರೆಸ್​ನಲ್ಲಿ ದ್ವಂದ್ವ ನಿಲುವು; ಶ್ರೀರಾಮನ ಕಟೌಟ್ ಹಾಕಿದ ಕೈ ಶಾಸಕರು
ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆಯ ಕಟೌಟ್ ಹಾಕಿದ ಕಾಂಗ್ರೆಸ್ ಶಾಸಕರು
Anil Kalkere
| Edited By: |

Updated on: Jan 16, 2024 | 7:12 PM

Share

ಬೆಂಗಳೂರು, ಜ.16: ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆಗೆ ಕೆಲವೇ ದಿನಗಳು ಬಾಕಿ ಇರುವಂತೆ ಕರ್ನಾಟಕ ಕಾಂಗ್ರೆಸ್ ನಾಯಕರಲ್ಲಿನ ದ್ವಂದ್ವ ನಿಲುವು ಬಹಿರಂಗವಾಗಿದೆ. ಕಟೌಟ್​ ಹಾಕಬೇಕಾ ಎಂದ ವ್ಯಕ್ತಿಗೆ ಏನೂ ಹೇಳದೆ ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ತೆರಳಿದ್ದಾರೆ. ಇತ್ತ, ಸ್ವಪಕ್ಷದ ಶಾಸಕರಾದ ಎಂ. ಕೃಷ್ಣಪ್ಪ ಹಾಗೂ‌ ಪ್ರಿಯಾಕೃಷ್ಣ ಅವರು ತಮ್ಮ ಕಚೇರಿ ಮುಂದೆ ಮಂದಿರ ಲೋಕಾರ್ಪಣೆಗೆ ಶುಭಕೋರಿ ಕಟೌಟ್ ಹಾಕಿ ಅಚ್ಚರಿ ಮೂಡಿಸಿದ್ದಾರೆ.

ಬೆಂಗಳೂರು ನಗರದ ಷೇಷಾದ್ರಿಪುರಂನಲ್ಲಿ ಇಂದು ಜನಸ್ಪಂದನ ಕಾರ್ಯಕ್ರಮದ ಪ್ರಯುಕ್ತ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ಡಿಕೆ ಶಿವಕುಮಾರ್ ಅವರಲ್ಲಿ ವ್ಯಕ್ತಿಯೊಬ್ಬರು ರಾಮ ಮಂದಿರದ ಕಟೌಟ್ ಹಾಕಲು ಅನುಮತಿ ಕೇಳಿದ್ದಾರೆ. ಕಟೌಟ್​ನ ಫೋಟೋ ನೀಡಿ 40 ಅಡಿ ಎತ್ತರದ ಕಟೌಟ್​ನಲ್ಲಿ ನಿಮ್ಮ ಹೆಸರು ಹಾಕುತ್ತೇವೆ, ಶಾಸಕರ ಹೆಸರು ಹಾಕುತ್ತೇವೆ ಎಂದು ಹೇಳಿದ್ದಾರೆ. ಈ ವೇಳೆ ಫೋಟೋ ನೋಡಿದ ಡಿಕೆ ಶಿವಕುಮಾರ್, ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದ್ದಾರೆ.

ಇದನ್ನೂ ಓದಿ: ನಿವೃತ್ತಿ ವೇತನ ನೀಡಲು ಲಂಚ ಕೇಳಿದ ಅಧಿಕಾರಿ ಅಮಾನತಿಗೆ ಆದೇಶಿಸಿದ ಡಿಸಿಎಂ ಡಿಕೆ ಶಿವಕುಮಾರ್

ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದಲ್ಲೇ ಪರ ವಿರೋಧ ಚರ್ಚೆಗಳು ನಡೆಯುತ್ತಿವೆ. ಈ ನಡುವೆ ವಿಜಯನಗರ ಕಾಂಗ್ರೆಸ್ ಶಾಸಕ ಎಂ. ಕೃಷ್ಣಪ್ಪ ಹಾಗೂ‌ ಗೋವಿಂದರಾಜನಗರ ಕ್ಷೇತ್ರದ ಶಾಸಕ ಪ್ರಿಯಾಕೃಷ್ಣ ಅವರು ತಮ್ಮ ಕಚೇರಿ ಮುಂದೆ ಮಂದಿರ ಲೋಕಾರ್ಪಣೆ ಕಾರ್ಯಕ್ರಮದ ಕಟೌಟ್​ ಹಾಕಿ ಅಚ್ಚರಿ ಮೂಡಿಸಿದ್ದಾರೆ.

ಮೂಡಲಪಾಳ್ಯ ಸರ್ಕಲ್ ಹಾಗೂ ಮಾಗಡಿ ರೋಡ್​ನ ಟೋಲ್ ಗೇಟ್ ಸರ್ಕಲ್​ನಲ್ಲಿ ಶ್ರೀರಾಮನ ಕಟೌಟ್ ತಲೆ ಎತ್ತಿವೆ. ಕಟೌಟ್​ನಲ್ಲಿ ಶ್ರೀರಾಮ, ಅಯೋಧ್ಯೆಯಲ್ಲಿ ನಿರ್ಮಾಣ ಆಗುತ್ತಿರುವ ಭವ್ಯ ಮಂದಿರದ ಚಿತ್ರ ಕಾಣಬಹುದು. ಅಷ್ಟು ಮಾತ್ರವಲ್ಲದೆ, ಕಟೌಟ್​ಗಳಿಗೆ ವಿದ್ಯುತ್ ದೀಪಾಲಂಕಾರವೂ ಮಾಡಲಾಗಿದೆ.

ಕಾಂಗ್ರೆಸ್ ಹೈಕಮಾಂಡ್ ನಾಯಕರು ಶ್ರಿರಾಮ ಕಾರ್ಯಕ್ರಮದಿಂದ ದೂರ ಉಳಿಯುವ ಸಂದೇಶ ನೀಡಿದ್ದರು. ರಾಜ್ಯದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಬಗ್ಗೆ ಯಡವಟ್ಟು ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಳಿಕ ಯೂಟರ್ನ ಹೊಡೆದಿದ್ದರು.

ವರದಿ: ಶಾಂತಮೂರ್ತಿ, ಟಿವಿ9 ಬೆಂಗಳೂರು

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು