AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಉಪ ಪಂಗಡಗಳನ್ನು OBC ಗೆ ಸೇರಿಸುವಂತೆ ಕೇಂದ್ರಕ್ಕೆ ಮಠಾಧೀಶರ ಮನವಿ

Veerashaiva Lingayat Community: ಉಜ್ಜಯಿನಿ ಪೀಠದ ಜಗದ್ಗುರು ನೇತೃತ್ವದಲ್ಲಿರಾಷ್ಟ್ರೀಯ ವೀರಶೈವ ಲಿಂಗಾಯತ ಮಠಾಧೀಶರ ಸಭೆ ಆರಂಭವಾಗಿದ್ದು, ಸಮುದಾಯದ ಎಲ್ಲ ಉಪಪಂಗಡಗಳನ್ನು ಒಬಿಸಿಗೆ ಸೇರಿಸುವಂತೆ ಕೇಂದ್ರಕ್ಕೆ ಒತ್ತಾಯಿಸಿ ಸಭೆಯಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ. 

ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಉಪ ಪಂಗಡಗಳನ್ನು OBC ಗೆ ಸೇರಿಸುವಂತೆ ಕೇಂದ್ರಕ್ಕೆ ಮಠಾಧೀಶರ ಮನವಿ
ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಬಿಸಿಗೆ ಸೇರಿಸುವಂತೆ ಕೇಂದ್ರಕ್ಕೆ ಮನವಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Feb 13, 2021 | 12:29 PM

Share

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಾಷ್ಟ್ರೀಯ ವೀರಶೈವ ಲಿಂಗಾಯತ ಮಠಾಧೀಶರ ಸಭೆಯೊಂದು ವಿಜಯನಗರದ ಸುಜ್ಞಾನ ಮಂಟಪದಲ್ಲಿ ಈಗ ನಡೆಯುತ್ತಿದೆ.  ಉಜ್ಜಯಿನಿ ಪೀಠದ ಜಗದ್ಗುರು ನೇತೃತ್ವದಲ್ಲಿ ಸುಮಾರು 160 ರಿಂದ 180 ಮಠಾಧೀಶರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಸಭೆ ಆರಂಭವಾಗುತ್ತಿದ್ದಂತೆ ಸಮುದಾಯದ ಉಪಪಂಗಡಗಳನ್ನು ಒಬಿಸಿಗೆ ಸೇರಿಸುವಂತೆ ಕೇಂದ್ರಕ್ಕೆ ಒತ್ತಾಯಿಸಿ ಶ್ರೀಗಳು ಸಭೆಯಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ. ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷ ಬಿಎಸ್ ಪರಮಶಿವಯ್ಯ ಅವರ ಮೂಲಕ ಸರ್ಕಾರಕ್ಕೆ ರಾಷ್ಟ್ರೀಯ ವೀರಶೈವ ಲಿಂಗಾಯತ ಮಠಾಧೀಶರ ಒಕ್ಕೂಟವು ಏಳು ಪುಟದ ಮನವಿ ಸಲ್ಲಿಸಿದೆ.

ವೇದಿಕೆಯ ಮೇಲೆ ಸರ್ಪಭೂಷನ ಮಠದ ಮಲ್ಲಿಕಾರ್ಜುನ ದೇವರು, ಉಜ್ಜಯಿನಿ ಜಗದ್ಗುರು ಡಾ ಮರುಳಸಿದ್ದಶಿವಾಚಾರ್ಯ ಮಹಾ ಸ್ವಾಮಿಗಳು, ಶ್ರೀಶೈಲ ಜಗದ್ಗುರು ಚೆನ್ನಸಿದ್ದರಾಮ ಶಿವಾಚಾರ್ಯ ಸ್ವಾಮಿಗಳು, ಸಿದ್ಧಗಂಗಾಶ್ರೀಗಳು, ದಿಂಗಾಲೇಶ್ವರ ಸ್ವಾಮಿಗಳು, ಸಿಂದಗಿ ಪ್ರಭು ಸಾರಂಗ ಶಿವಾಚಾರ್ಯ ಸ್ವಾಮಿಗಳು, ಮುಚ್ಚಳಾಂಭ ಶ್ರೀಗಳು, ಶಿವಗಂಗೆ ಶ್ರೀಗಳಾದ ಮಲಯ ಶಾಂತಮುನಿ ಶಿವಾಚಾರ್ಯ ಸ್ವಾಮಿಗಳು, ಬಸವಾನಂದ ಸ್ವಾಮಿಗಳು, ಉಪ್ಪೂರು ಗದ್ದಿಗೆಯ ಯತೀಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಮಹಾಂತ ಲಿಂಗ ಶಿವಾಚಾರ್ಯ ಸ್ವಾಮಿಗಳು ವಿಭೂತಿಪುರ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷ ಪರಮಶಿವಯ್ಯ ಹಾಗೂ ಕೆಆರ್​ಐಡಿಎಲ್ ಅಧ್ಯಕ್ಷ ಎಂ ರುದ್ರೇಶ್ ಉಪಸ್ಥಿತಿರಿದ್ದಾರೆ.

include all sub castes of veerashaiva lingayat community in to obc category for reservation

ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಬಿಸಿಗೆ ಸೇರಿಸುವಂತೆ ಕೇಂದ್ರಕ್ಕೆ ಒತ್ತಾಯ

Published On - 11:41 am, Sat, 13 February 21

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು