ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಉಪ ಪಂಗಡಗಳನ್ನು OBC ಗೆ ಸೇರಿಸುವಂತೆ ಕೇಂದ್ರಕ್ಕೆ ಮಠಾಧೀಶರ ಮನವಿ

Veerashaiva Lingayat Community: ಉಜ್ಜಯಿನಿ ಪೀಠದ ಜಗದ್ಗುರು ನೇತೃತ್ವದಲ್ಲಿರಾಷ್ಟ್ರೀಯ ವೀರಶೈವ ಲಿಂಗಾಯತ ಮಠಾಧೀಶರ ಸಭೆ ಆರಂಭವಾಗಿದ್ದು, ಸಮುದಾಯದ ಎಲ್ಲ ಉಪಪಂಗಡಗಳನ್ನು ಒಬಿಸಿಗೆ ಸೇರಿಸುವಂತೆ ಕೇಂದ್ರಕ್ಕೆ ಒತ್ತಾಯಿಸಿ ಸಭೆಯಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ. 

ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಉಪ ಪಂಗಡಗಳನ್ನು OBC ಗೆ ಸೇರಿಸುವಂತೆ ಕೇಂದ್ರಕ್ಕೆ ಮಠಾಧೀಶರ ಮನವಿ
ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಬಿಸಿಗೆ ಸೇರಿಸುವಂತೆ ಕೇಂದ್ರಕ್ಕೆ ಮನವಿ
ಸಾಧು ಶ್ರೀನಾಥ್​ Edited By:

Updated on: Feb 13, 2021 | 12:29 PM

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಾಷ್ಟ್ರೀಯ ವೀರಶೈವ ಲಿಂಗಾಯತ ಮಠಾಧೀಶರ ಸಭೆಯೊಂದು ವಿಜಯನಗರದ ಸುಜ್ಞಾನ ಮಂಟಪದಲ್ಲಿ ಈಗ ನಡೆಯುತ್ತಿದೆ.  ಉಜ್ಜಯಿನಿ ಪೀಠದ ಜಗದ್ಗುರು ನೇತೃತ್ವದಲ್ಲಿ ಸುಮಾರು 160 ರಿಂದ 180 ಮಠಾಧೀಶರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಸಭೆ ಆರಂಭವಾಗುತ್ತಿದ್ದಂತೆ ಸಮುದಾಯದ ಉಪಪಂಗಡಗಳನ್ನು ಒಬಿಸಿಗೆ ಸೇರಿಸುವಂತೆ ಕೇಂದ್ರಕ್ಕೆ ಒತ್ತಾಯಿಸಿ ಶ್ರೀಗಳು ಸಭೆಯಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ. ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷ ಬಿಎಸ್ ಪರಮಶಿವಯ್ಯ ಅವರ ಮೂಲಕ ಸರ್ಕಾರಕ್ಕೆ ರಾಷ್ಟ್ರೀಯ ವೀರಶೈವ ಲಿಂಗಾಯತ ಮಠಾಧೀಶರ ಒಕ್ಕೂಟವು ಏಳು ಪುಟದ ಮನವಿ ಸಲ್ಲಿಸಿದೆ.

ವೇದಿಕೆಯ ಮೇಲೆ ಸರ್ಪಭೂಷನ ಮಠದ ಮಲ್ಲಿಕಾರ್ಜುನ ದೇವರು, ಉಜ್ಜಯಿನಿ ಜಗದ್ಗುರು ಡಾ ಮರುಳಸಿದ್ದಶಿವಾಚಾರ್ಯ ಮಹಾ ಸ್ವಾಮಿಗಳು, ಶ್ರೀಶೈಲ ಜಗದ್ಗುರು ಚೆನ್ನಸಿದ್ದರಾಮ ಶಿವಾಚಾರ್ಯ ಸ್ವಾಮಿಗಳು, ಸಿದ್ಧಗಂಗಾಶ್ರೀಗಳು, ದಿಂಗಾಲೇಶ್ವರ ಸ್ವಾಮಿಗಳು, ಸಿಂದಗಿ ಪ್ರಭು ಸಾರಂಗ ಶಿವಾಚಾರ್ಯ ಸ್ವಾಮಿಗಳು, ಮುಚ್ಚಳಾಂಭ ಶ್ರೀಗಳು, ಶಿವಗಂಗೆ ಶ್ರೀಗಳಾದ ಮಲಯ ಶಾಂತಮುನಿ ಶಿವಾಚಾರ್ಯ ಸ್ವಾಮಿಗಳು, ಬಸವಾನಂದ ಸ್ವಾಮಿಗಳು, ಉಪ್ಪೂರು ಗದ್ದಿಗೆಯ ಯತೀಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಮಹಾಂತ ಲಿಂಗ ಶಿವಾಚಾರ್ಯ ಸ್ವಾಮಿಗಳು ವಿಭೂತಿಪುರ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷ ಪರಮಶಿವಯ್ಯ ಹಾಗೂ ಕೆಆರ್​ಐಡಿಎಲ್ ಅಧ್ಯಕ್ಷ ಎಂ ರುದ್ರೇಶ್ ಉಪಸ್ಥಿತಿರಿದ್ದಾರೆ.

ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಬಿಸಿಗೆ ಸೇರಿಸುವಂತೆ ಕೇಂದ್ರಕ್ಕೆ ಒತ್ತಾಯ

Published On - 11:41 am, Sat, 13 February 21

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us