AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಟಿ ದಾಳಿ ಕೇಸ್: ಸಿಎಂ ನಿರೀಕ್ಷೆಯಲ್ಲಿರುವ ಡಿಕೆ ಶಿವಕುಮಾರ್​​​​ಗೆ ಕೋರ್ಟ್​​​ ಬಿಗ್ ರಿಲೀಫ್

ಉಪಮುಖ್ಯಮಂತ್ರಿಯಾಗಿದ್ದ ಡಿಕೆ ಶಿವಕುಮಾರ್ ಇದೀಗ ಮುಖ್ಯಮಂತ್ರಿಯಾಗುತ್ತಿದ್ದು, ಸಿಎಂ ಆಗಿ ಪ್ರಮಾಣವಚನಕ್ಕೆ ಸಕಲ ಸಿದ್ಧತೆಗಳು ನಡೆದಿವೆ.ಇದರೊಂದಿಗೆ ಅವರೇ ಹೇಳಿದಂತೆ ಸುರಿಸಿದ ಬೆವರಿಗೆ ಕೂಲಿ ಸಿಕ್ಕಿದ್ದು, ಫುಲ್ ಖುಷ್ ಆಗಿದ್ದಾರೆ. ಇದರ ಮಧ್ಯೆ ಇನ್ನೊಂದೆಡೆ ಐಟಿ ದಾಳಿ ಪ್ರಕರಣದಲ್ಲಿ ಡಿಕೆ ಶಿವಕುಮಾರ್​​​ಗೆ ಬಿಗ್ ರಿಲೀಫ್ ಸಿಕ್ಕಿದೆ. ಕೋರ್ಟ್​ ವಿಧಿಸಿದ್ದ ಷರತ್ತು ಸಡಿಲಿಸಿದೆ.

ಐಟಿ ದಾಳಿ ಕೇಸ್: ಸಿಎಂ ನಿರೀಕ್ಷೆಯಲ್ಲಿರುವ ಡಿಕೆ ಶಿವಕುಮಾರ್​​​​ಗೆ ಕೋರ್ಟ್​​​ ಬಿಗ್ ರಿಲೀಫ್
Dk Shivakumar
Ramesha M
| Edited By: |

Updated on: May 29, 2026 | 8:09 PM

Share

ಬೆಂಗಳೂರು, (ಮೇ 29): ತೆರಿಗೆ ವಂಚನೆ ಸಂಬಂಧ ಐಟಿ ದಾಳಿ ಪ್ರಕರಣದಲ್ಲಿ (IT Raid Case) ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar)  ಅವರಿಗೆ ವಿಧಿಸಲಾಗಿದ್ದ ಜಾಮೀನು ಷರತ್ತನ್ನು ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯ ಸಡಿಲಿಸಿದೆ. ಕೋರ್ಟ್ ಅನುಮತಿ ಇಲ್ಲದೇ ದೇಶ ಬಿಟ್ಟು ತೆರಳುವಂತಿಲ್ಲವೆಂದು ವಿಧಿಸಲಾಗಿದ್ದ ಷರತ್ತು ಸಡಿಲಿಕೆ ಮಾಡಿದೆ. ಸಚಿವರಾಗಿ ಅಧಿಕೃತ ಕೆಲಸ ಹಾಗೂ ವೈಯಕ್ತಿಕ ಉದ್ಯಮದ ನಿಮಿತ್ತ ಮುಂದಿನ ಎರಡು ವರ್ಷಗಳ ಕಾಲ ವಿವಿಧ ದೇಶಗಳಿಗೆ ಪ್ರವಾಸ ಕೈಗೊಳ್ಳಲು ಅನುಮತಿ ನೀಡಿದೆ. ಆದರೆ, ಪ್ರತಿ ಬಾರಿಯೂ ಪ್ರವಾಸದ ಸಂಪೂರ್ಣ ವಿವರವನ್ನು ತನಿಖಾ ಸಂಸ್ಥೆಗೆ ಕಡ್ಡಾಯವಾಗಿ ಸಲ್ಲಿಸುವಂತೆ ಕೋರ್ಟ್ ಷರತ್ತು ವಿಧಿಸಿದೆ. ಈ ಮೂಲಕ ಸಿಎಂ ಆಗುತ್ತಿರುವ ಡಿಕೆ ಶಿವಕುಮಾರ್‌ ಅವರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಂತಾಗಿದೆ.

ಮುಖ್ಯಾಂಶಗಳು

  • ತೆರಿಗೆ ವಂಚನೆ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್
  • ತೆರಿಗೆ ವಂಚನೆ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಡಿಕೆಶಿ ಜಾಮೀನು ಷರತ್ತು ಸಡಿಲಿಕೆ
  • 2 ವರ್ಷ ವಿದೇಶ ಪ್ರವಾಸ ಕೈಗೊಳ್ಳಲು ಬೆಂಗಳೂರು 42ನೇ ಎಸಿಜೆಎಂ ಕೋರ್ಟ್ ಅನುಮತಿ

ಡಿಕೆ ಶಿವಕುಮಾರ್ ಮನವಿ ಪುರಸ್ಕರಿಸಿದ ಕೋರ್ಟ್

ದೆಹಲಿಯ ನಿವಾಸಗಳ ಮೇಲೆ ಐಟಿ ದಾಳಿ ಪ್ರಕರಣ ಸಂಬಂಧ ಕೋರ್ಟ್ ಅನುಮತಿ ಇಲ್ಲದೇ ದೇಶಬಿಟ್ಟು ತೆರಳದಂತೆ ಕೋರ್ಟ್ ಷರತ್ತು ವಿಧಿಸಿ ಜಾಮೀನು ನೀಡಿತ್ತು. ಬಳಿಕ ಡಿಕೆ ಶಿವಕುಮಾರ್, ಜಾಮೀನು ಷರತ್ತು ಸಡಿಲಿಕೆ ಕೋರಿ ಡಿ.ಕೆ.ಶಿವಕುಮಾರ್ ಅರ್ಜಿ ಸಲ್ಲಿಸಿದ್ದರು. ವ್ಯವಹಾರ, ಅಧಿಕೃತ ಕೆಲಸಗಳ ಹಿನ್ನೆಲೆಯಲ್ಲಿ ವಿದೇಶ ಪ್ರಯಾಣಿಸಬೇಕಿದೆ. ಅಮೆರಿಕ ಸಂಯುಕ್ತ ಸಂಸ್ಥಾನ, ಯುರೋಪ್, ಇಂಗ್ಲೆಂಡ್, ಆಸ್ಟ್ರೇಲಿಯಾ, ರಷ್ಯಾ, ಅರಬ್ ದೇಶಗಳಿಗೆ ಕಾರ್ಯಕ್ರಮ ನಿಮಿತ್ತ ಪ್ರಯಾಣಿಸಬೇಕಿದೆ. ಪ್ರತಿ ಬಾರಿ ವಿದೇಶಕ್ಕೆ ತೆರಳುವಾಗ ಕೋರ್ಟ್​ಗೆ ಈ ಬಗ್ಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಬೇಕಿದೆ. ಹೀಗಾಗಿ 2 ವರ್ಷಗಳ ಅವಧಿಗೆ ಜಾಮೀನು ಷರತ್ತು ಸಡಿಲಿಸುವಂತೆ ಕೋರಿದ್ದರು. ಇದನ್ನು ವಿಚಾರಣೆ ನಡೆಸಿದ ಕೋರ್ಟ್, ಡಿಕೆ ಶಿವಕುಮಾರ್ ಮನವಿಯನ್ನು ಪುರಸ್ಕರಿಸಿದ್ದು, ವಿದೇಶ ಪ್ರವಾಸ ಷರತ್ತನ್ನು ಸಡಿಲಗೊಳಿಸಿ ಆದೇಶಿಸಿದೆ. ಆದ್ರೆ, ವಿದೇಶಕ್ಕೆ ತೆರಳುವಾಗ ತನಿಖಾಧಿಕಾರಿಗೆ ಮಾಹಿತಿ ನೀಡಲು ಸೂಚಿಸಿದೆ.

ಇದನ್ನೂ ಓದಿ: ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ 3 ದಿನಾಂಕ ನೀಡಿದ ದ್ವಾರಕನಾಥ್ ಗುರೂಜಿ

ಪ್ರಕರಣದ ಹಿನ್ನೆಲೆ

ತೆರಿಗೆ ವಂಚನೆ ಆರೋಪದ ಮೇಲೆ ನವದೆಹಲಿಯ ವಿವಿಧ ನಿವಾಸ ಹಾಗೂ ಕಚೇರಿಗಳ ಮೇಲೆ ಆದಾಯ ತೆರಿಗೆ (ಐಟಿ) ಇಲಾಖೆ ಅಧಿಕಾರಿಗಳು ಏಕಾಏಕಿ ಬೃಹತ್ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದರು. ಈಗಲ್ಟನ್‌ ರೆಸಾರ್ಟ್‌ನಲ್ಲಿ ಐಟಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾಗ ಶಿವಕುಮಾರ್‌ ಅವರು ಪ್ರಮುಖ ಸಾಕ್ಷಿಯನ್ನು ನಾಶಪಡಿಸಿದ್ದಾರೆ ಎಂಬ ಗಂಭೀರ ಆರೋಪವೂ ಕೇಳಿಬಂದಿತ್ತು.

ತೆರಿಗೆ ವಂಚನೆ ಆರೋಪದ ಮೇಲೆ ಡಿ.ಕೆ. ಶಿವಕುಮಾರ್‌ (A1), ಶರ್ಮಾ ಟ್ರಾನ್ಸ್‌ಪೋರ್ಟ್‌ನ ಸುನೀಲ್‌ ಕುಮಾರ್‌ ಶರ್ಮಾ, ಅವರ ಸಹೋದರ ಸಚಿನ್‌ ನಾರಾಯಣ್‌, ಆಂಜನೇಯ ಹನುಮಂತಯ್ಯ ಮತ್ತು ಎನ್‌ ರಾಜೇಂದ್ರ ವಿರುದ್ಧ ಆದಾಯ ತೆರಿಗೆ ಕಾಯಿದೆ ಸೆಕ್ಷನ್‌ಗಳಾದ 276C(1), 277, 278 ಹಾಗೂ ಐಪಿಸಿ ಸೆಕ್ಷನ್‌ಗಳಾದ 193, 199 ಮತ್ತು 120ಬಿ ಅಡಿ ಪ್ರಕರಣ ದಾಖಲಾಗಿತ್ತು. ಬಳಿಕ ಡಿಕೆ ಶಿವಕುಮಾರ್ ಮನವಿ ಮೇರೆಗೆ ಕೋರ್ಟ್, ಜಾಮೀನು ಮಂಜೂರು ಮಾಡಿತ್ತು. ಆದ್ರೆ, ನ್ಯಾಯಾಲಯದ ಪೂರ್ವಾನುಮತಿ ಇಲ್ಲದೇ ದೇಶ ತೊರೆಯುವಂತಿಲ್ಲ ಎಂಬ ಕಠಿಣ ಷರತ್ತು ವಿಧಿಸಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Ramesha M
Ramesha M