AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IT Raid: ಕಾರಿಗೆ ಫುಟ್​ಬಾಲ್​ ಸ್ಟಿಕರ್​ ಅಂಟಿಸಿ ಫೀಲ್ಡ್​ಗಿಳಿದ ಐಟಿ ಅಧಿಕಾರಿಗಳು, ತೆರಿಗೆ ವಂಚಕರ ವಿರುದ್ಧ ‘ಚೆಂಡಾ’ಮಂಡಲ

IT Department: ದಾಳಿ ನಡೆಸಲು ಸಿದ್ಧವಾಗಿದ್ದ ಅಧಿಕಾರಿಗಳು ನಿನ್ನೆ ಸಂಜೆ‌ಯೇ 60 ಕಾರುಗಳನ್ನು ಬಾಡಿಗೆಗೆ ಪಡೆದಿದ್ದಾರೆ. ಯಾರಿಗೂ ಅನುಮಾನಬಾರದೆಂಬ ಕಾರಣಕ್ಕೆ ಇಂಟರ್​ಸ್ಟೇಟ್ ಫುಟ್ಬಾಲ್ ಚಾಂಪಿಯನ್​ಶಿಪ್​ ಆಡಲು ಕೇರಳಕ್ಕೆ ಹೋಗಬೇಕು ಎಂಬ ಕಾರಣ ನೀಡಿದ್ದರು.

IT Raid: ಕಾರಿಗೆ ಫುಟ್​ಬಾಲ್​ ಸ್ಟಿಕರ್​ ಅಂಟಿಸಿ ಫೀಲ್ಡ್​ಗಿಳಿದ ಐಟಿ ಅಧಿಕಾರಿಗಳು, ತೆರಿಗೆ ವಂಚಕರ ವಿರುದ್ಧ ‘ಚೆಂಡಾ’ಮಂಡಲ
ಫುಟ್​ಬಾಲ್​ ಚಾಂಪಿಯನ್​ಶಿಪ್​ ಸ್ಟಿಕರ್​ ಅಂಟಿಸಿಕೊಂಡು ಅಖಾಡಕ್ಕಿಳಿದ ಐಟಿ ಅಧಿಕಾರಿಗಳು
Skanda
|

Updated on:Feb 17, 2021 | 12:53 PM

Share

ರಾಜ್ಯದ ವಿವಿಧೆಡೆ ಖಾಸಗಿ ಆಸ್ಪತ್ರೆ, ಮೆಡಿಕಲ್ ಕಾಲೇಜುಗಳ ಮೇಲೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ತೆರಿಗೆ ವಂಚಕರನ್ನು ಬೆಚ್ಚಿಬೀಳಿಸಿದ್ದಾರೆ. ಸಾಧಾರಣವಾಗಿ ದಾಳಿ ವಿಚಾರವನ್ನು ಅತ್ಯಂತ್ಯ ಗೌಪ್ಯವಾಗಿಡುವ ಅಧಿಕಾರಿಗಳು, ಪ್ರತಿಬಾರಿಯೂ ಗುಟ್ಟು ಬಿಟ್ಟುಕೊಡದೇ ಇರಲು ಒಂದಕ್ಕಿಂತ ಒಂದು ಅದ್ಭುತ ತಂತ್ರಗಳನ್ನು ಹೆಣೆಯುತ್ತಾರೆ. ಅಂತೆಯೇ ಈ ಬಾರಿಯೂ ದಾಳಿಗೆ ಮುನ್ನ ಮಾಸ್ಟರ್ ಪ್ಲಾನ್ ರೂಪಿಸಿದ ಐಟಿ ಅಧಿಕಾರಿಗಳು ಕಾರಿಗೆ ಫುಟ್​ಬಾಲ್​ ಸ್ಟಿಕರ್​ ಅಂಟಿಸಿಕೊಂಡು ಅಖಾಡಕ್ಕೆ ಇಳಿದಿದ್ದಾರೆ.

ದಾಳಿ ನಡೆಸಲು ಸಿದ್ಧವಾಗಿದ್ದ ಅಧಿಕಾರಿಗಳು ನಿನ್ನೆ ಸಂಜೆ‌ಯೇ 60 ಕಾರುಗಳನ್ನು ಬಾಡಿಗೆಗೆ ಪಡೆದಿದ್ದಾರೆ. ಯಾರಿಗೂ ಅನುಮಾನಬಾರದೆಂಬ ಕಾರಣಕ್ಕೆ ಇಂಟರ್-​ಸ್ಟೇಟ್ ಫುಟ್ಬಾಲ್ ಚಾಂಪಿಯನ್​ಶಿಪ್​ ಆಡಲು ಕೇರಳಕ್ಕೆ ಹೋಗಬೇಕು ಎಂಬ ಕಾರಣ ನೀಡಿದ್ದರು. ನಂತರ ಎಲ್ಲಾ ಕಾರುಗಳ ಮೇಲೆ ಫುಟ್ಬಾಲ್ ಸ್ಟಿಕರ್ ಅಂಟಿಸಿದ್ದ ಸಿಬ್ಬಂದಿ ಇಂದು ಬೆಳಗ್ಗೆ ತೆರಿಗೆ ವಂಚಕರ ಮೇಲೆ ದಾಳಿ ಮಾಡಿ ಅಕ್ಷರಶಃ ಫುಟ್ಬಾಲ್ ಆಡಿದ್ದಾರೆ.

ಇದನ್ನೂ ಓದಿ: ಖಾಸಗಿ ಆಸ್ಪತ್ರೆ ಮಾಲೀಕರಿಗೆ ಐಟಿ ಶಾಕ್​ ಟ್ರೀಟ್​ಮೆಂಟ್, ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ​

ಕೊರೊನಾ ಸಂದರ್ಭದಲ್ಲಿ ಅವ್ಯವಹಾರ ನಡೆದಿದೆ ಮತ್ತು ಮೆಡಿಕಲ್​ ಕಾಲೇಜ್​ ಶುಲ್ಕ ವಿಚಾರದಲ್ಲಿ ವ್ಯತ್ಯಾಸ ಕಂಡುಬಂದಿದೆ ಎಂಬ ಕಾರಣಕ್ಕೆ ರಾಜ್ಯದ ವಿವಿಧೆಡೆ ಏಕಕಾಲಕ್ಕೆ ದಾಳಿ ನಡೆಸಿರುವ ಅಧಿಕಾರಿಗಳು, ಮಂಗಳೂರು, ಬೆಂಗಳೂರು, ನೆಲಮಂಗಲ, ತುಮಕೂರು ಸೇರಿದಂತೆ ವಿವಿಧೆಡೆ ದಾಳಿ ನಡೆಸಿ ಶಾಕ್​ ನೀಡಿದ್ದಾರೆ.

Published On - 12:50 pm, Wed, 17 February 21

Follow Us
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್