AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಕಾಲೇಜು ಆರಂಭದ ಬಳಿಕ ಹೆಚ್ಚಿದ ಕೋವಿಡ್ ಪ್ರಕರಣ: ಸೋಂಕು ತಗುಲಿದ ವಿದ್ಯಾರ್ಥಿ ‌ಹಾಗೂ ಶಿಕ್ಷಕರೆಷ್ಟು?

ರಾಜ್ಯದಲ್ಲಿ ಕಾಲೇಜು ಆರಂಭದ ಬಳಿಕ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ರಾಜ್ಯದಲ್ಲಿ ನಾಲ್ಕೇ ದಿನಕ್ಕೆ ಕೋವಿಡ್ ಪ್ರಕರಣಗಳು ಶತಕ ದಾಟಿವೆ. ರಾಜ್ಯದಲ್ಲಿ ಕಾಲೇಜು ಆರಂಭವಾದ ಬಳಿಕ 104ಕ್ಕೂ ಹೆಚ್ಚು ವಿದ್ಯಾರ್ಥಿ ‌ಹಾಗೂ ಶಿಕ್ಷಕರಿಗೆ ಕೊರೊನಾ ಒಕ್ಕರಿಸಿದೆ. ಅದರಲ್ಲಿ ಸಿಲಿಕಾನ್ ಸಿಟಿಯೊಂದರಲ್ಲಿಯೇ ‌89 ಜನರಿಗೆ ಸೋಂಕು ದೃಢವಾಗಿದೆ. ನವೆಂಬರ್ 16 ರಿಂದ ನ.19ವರೆಗೆ 13037 ಜನ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಸಿಟಿಯಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ಈ ಪೈಕಿ 89 ಜನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಸೋಂಕು […]

ರಾಜ್ಯದಲ್ಲಿ ಕಾಲೇಜು ಆರಂಭದ ಬಳಿಕ ಹೆಚ್ಚಿದ ಕೋವಿಡ್ ಪ್ರಕರಣ: ಸೋಂಕು ತಗುಲಿದ ವಿದ್ಯಾರ್ಥಿ ‌ಹಾಗೂ ಶಿಕ್ಷಕರೆಷ್ಟು?
ಪೃಥ್ವಿಶಂಕರ
|

Updated on:Nov 21, 2020 | 8:36 AM

Share

ರಾಜ್ಯದಲ್ಲಿ ಕಾಲೇಜು ಆರಂಭದ ಬಳಿಕ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ರಾಜ್ಯದಲ್ಲಿ ನಾಲ್ಕೇ ದಿನಕ್ಕೆ ಕೋವಿಡ್ ಪ್ರಕರಣಗಳು ಶತಕ ದಾಟಿವೆ.

ರಾಜ್ಯದಲ್ಲಿ ಕಾಲೇಜು ಆರಂಭವಾದ ಬಳಿಕ 104ಕ್ಕೂ ಹೆಚ್ಚು ವಿದ್ಯಾರ್ಥಿ ‌ಹಾಗೂ ಶಿಕ್ಷಕರಿಗೆ ಕೊರೊನಾ ಒಕ್ಕರಿಸಿದೆ. ಅದರಲ್ಲಿ ಸಿಲಿಕಾನ್ ಸಿಟಿಯೊಂದರಲ್ಲಿಯೇ ‌89 ಜನರಿಗೆ ಸೋಂಕು ದೃಢವಾಗಿದೆ. ನವೆಂಬರ್ 16 ರಿಂದ ನ.19ವರೆಗೆ 13037 ಜನ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಸಿಟಿಯಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ಈ ಪೈಕಿ 89 ಜನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಸೋಂಕು ದೃಢವಾಗಿರುವುದು ಕಂಡು ಬಂದಿದೆ.

ದಿನದಿಂದ ‌ದಿನಕ್ಕೆ ಕೊರೊನಾ ಸೋಂಕಿತ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಕಾಲೇಜು ಆರಂಭ ಮಾಡಿ ಸರ್ಕಾರ ತಪ್ಪು ಮಾಡ್ತಾ ಎಂಬ ಅನುಮಾನ ಈಗ ಎಲ್ಲೆಡೆ ಶುರುವಾಗಿದೆ. ರಾಜ್ಯದಲ್ಲಿ ಈಗಾಗಲೇ 104 ವಿದ್ಯಾರ್ಥಿ ಹಾಗೂ ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಕಾಲೇಜಿಗೆ ಬಂದವರಲ್ಲಿ ಸೋಂಕು ಬಂದ ಹಿನ್ನೆಲೆ ಇತರೆ ವಿದ್ಯಾರ್ಥಿಗಳಲ್ಲಿ ಕೂಡ ಭೀತಿ ಹೆಚ್ಚಳವಾಗಿದೆ.

ಕಾಲೇಜು ಆರಂಭವಾದ ಹರಿಯಾಣ, ದೆಹಲಿ, ಆಂದ್ರಪ್ರದೇಶ ಗಳಲ್ಲಿ ‌ಕೊರೊನಾ‌ ಏರಿಕೆಯಾದ ಕಾರಣದಿಂದಾಗಿ ಹರಿಯಾಣದಲ್ಲಿ ‌ಮತ್ತೆ‌ ಶಾಲಾ -ಕಾಲೇಜು‌ಗಳನ್ನು ಬಂದ್ ಮಾಡಲಾಗಿದೆ. ಹೀಗಾಗಿ ನ. 23 ರಿಂದ ಆರಂಭ ಮಾಡಲು ತಯಾರಿ ನಡೆಸಿದ್ದ ಗುಜರಾತ್ ‌ಸರ್ಕಾರ ಕೊರೊನಾ ಏರಿಕೆಯನ್ನು ಕಂಡು ಶಾಲಾ ಕಾಲೇಜು ಆರಂಭವನ್ನು ಮತ್ತೆ ಮುಂದೂಡಿದೆ.

ಇದನ್ನೂ ಓದಿ: ವಿದ್ಯಾರ್ಥಿ, ಪೋಷಕರ ಒತ್ತಾಯಕ್ಕೆ ಕಾಲೇಜು ಓಪನ್ ಮಾಡಿದ್ದೇವೆ -DCM ಡಾ. ಅಶ್ವತ್ಥ್ ನಾರಾಯಣ

Published On - 7:28 am, Sat, 21 November 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ