AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಕಾಲೇಜು ಆರಂಭದ ಬಳಿಕ ಹೆಚ್ಚಿದ ಕೋವಿಡ್ ಪ್ರಕರಣ: ಸೋಂಕು ತಗುಲಿದ ವಿದ್ಯಾರ್ಥಿ ‌ಹಾಗೂ ಶಿಕ್ಷಕರೆಷ್ಟು?

ರಾಜ್ಯದಲ್ಲಿ ಕಾಲೇಜು ಆರಂಭದ ಬಳಿಕ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ರಾಜ್ಯದಲ್ಲಿ ನಾಲ್ಕೇ ದಿನಕ್ಕೆ ಕೋವಿಡ್ ಪ್ರಕರಣಗಳು ಶತಕ ದಾಟಿವೆ. ರಾಜ್ಯದಲ್ಲಿ ಕಾಲೇಜು ಆರಂಭವಾದ ಬಳಿಕ 104ಕ್ಕೂ ಹೆಚ್ಚು ವಿದ್ಯಾರ್ಥಿ ‌ಹಾಗೂ ಶಿಕ್ಷಕರಿಗೆ ಕೊರೊನಾ ಒಕ್ಕರಿಸಿದೆ. ಅದರಲ್ಲಿ ಸಿಲಿಕಾನ್ ಸಿಟಿಯೊಂದರಲ್ಲಿಯೇ ‌89 ಜನರಿಗೆ ಸೋಂಕು ದೃಢವಾಗಿದೆ. ನವೆಂಬರ್ 16 ರಿಂದ ನ.19ವರೆಗೆ 13037 ಜನ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಸಿಟಿಯಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ಈ ಪೈಕಿ 89 ಜನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಸೋಂಕು […]

ರಾಜ್ಯದಲ್ಲಿ ಕಾಲೇಜು ಆರಂಭದ ಬಳಿಕ ಹೆಚ್ಚಿದ ಕೋವಿಡ್ ಪ್ರಕರಣ: ಸೋಂಕು ತಗುಲಿದ ವಿದ್ಯಾರ್ಥಿ ‌ಹಾಗೂ ಶಿಕ್ಷಕರೆಷ್ಟು?
ಪೃಥ್ವಿಶಂಕರ
|

Updated on:Nov 21, 2020 | 8:36 AM

Share

ರಾಜ್ಯದಲ್ಲಿ ಕಾಲೇಜು ಆರಂಭದ ಬಳಿಕ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ರಾಜ್ಯದಲ್ಲಿ ನಾಲ್ಕೇ ದಿನಕ್ಕೆ ಕೋವಿಡ್ ಪ್ರಕರಣಗಳು ಶತಕ ದಾಟಿವೆ.

ರಾಜ್ಯದಲ್ಲಿ ಕಾಲೇಜು ಆರಂಭವಾದ ಬಳಿಕ 104ಕ್ಕೂ ಹೆಚ್ಚು ವಿದ್ಯಾರ್ಥಿ ‌ಹಾಗೂ ಶಿಕ್ಷಕರಿಗೆ ಕೊರೊನಾ ಒಕ್ಕರಿಸಿದೆ. ಅದರಲ್ಲಿ ಸಿಲಿಕಾನ್ ಸಿಟಿಯೊಂದರಲ್ಲಿಯೇ ‌89 ಜನರಿಗೆ ಸೋಂಕು ದೃಢವಾಗಿದೆ. ನವೆಂಬರ್ 16 ರಿಂದ ನ.19ವರೆಗೆ 13037 ಜನ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಸಿಟಿಯಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ಈ ಪೈಕಿ 89 ಜನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಸೋಂಕು ದೃಢವಾಗಿರುವುದು ಕಂಡು ಬಂದಿದೆ.

ದಿನದಿಂದ ‌ದಿನಕ್ಕೆ ಕೊರೊನಾ ಸೋಂಕಿತ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಕಾಲೇಜು ಆರಂಭ ಮಾಡಿ ಸರ್ಕಾರ ತಪ್ಪು ಮಾಡ್ತಾ ಎಂಬ ಅನುಮಾನ ಈಗ ಎಲ್ಲೆಡೆ ಶುರುವಾಗಿದೆ. ರಾಜ್ಯದಲ್ಲಿ ಈಗಾಗಲೇ 104 ವಿದ್ಯಾರ್ಥಿ ಹಾಗೂ ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಕಾಲೇಜಿಗೆ ಬಂದವರಲ್ಲಿ ಸೋಂಕು ಬಂದ ಹಿನ್ನೆಲೆ ಇತರೆ ವಿದ್ಯಾರ್ಥಿಗಳಲ್ಲಿ ಕೂಡ ಭೀತಿ ಹೆಚ್ಚಳವಾಗಿದೆ.

ಕಾಲೇಜು ಆರಂಭವಾದ ಹರಿಯಾಣ, ದೆಹಲಿ, ಆಂದ್ರಪ್ರದೇಶ ಗಳಲ್ಲಿ ‌ಕೊರೊನಾ‌ ಏರಿಕೆಯಾದ ಕಾರಣದಿಂದಾಗಿ ಹರಿಯಾಣದಲ್ಲಿ ‌ಮತ್ತೆ‌ ಶಾಲಾ -ಕಾಲೇಜು‌ಗಳನ್ನು ಬಂದ್ ಮಾಡಲಾಗಿದೆ. ಹೀಗಾಗಿ ನ. 23 ರಿಂದ ಆರಂಭ ಮಾಡಲು ತಯಾರಿ ನಡೆಸಿದ್ದ ಗುಜರಾತ್ ‌ಸರ್ಕಾರ ಕೊರೊನಾ ಏರಿಕೆಯನ್ನು ಕಂಡು ಶಾಲಾ ಕಾಲೇಜು ಆರಂಭವನ್ನು ಮತ್ತೆ ಮುಂದೂಡಿದೆ.

ಇದನ್ನೂ ಓದಿ: ವಿದ್ಯಾರ್ಥಿ, ಪೋಷಕರ ಒತ್ತಾಯಕ್ಕೆ ಕಾಲೇಜು ಓಪನ್ ಮಾಡಿದ್ದೇವೆ -DCM ಡಾ. ಅಶ್ವತ್ಥ್ ನಾರಾಯಣ

Published On - 7:28 am, Sat, 21 November 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ