AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಏರಿಕೆಯಾಗುತ್ತಿರುವ ಕೊವಿಡ್​ ಪ್ರಕರಣಗಳು; 4 ಜಿಲ್ಲೆಗಳ ಮೇಲೆ ನಿಗಾ

ಇನ್ನೇನು ಕೊರೊನಾ ಅಬ್ಬರ ಮುಗಿಯಿತು ಎಂದು ಜನ ನಿರಾಳರಾಗಿದ್ದಾರೆ. ಆದರೆ ಮತ್ತೆ ಇದೀಗ ಸದ್ದಿಲ್ಲದೆ ನಿಧಾನಗತಿಯಲ್ಲಿ ಕೊರೊನಾ ಹಾವಳಿ ಶುರುವಾಗುತ್ತಿದೆ. ಹೌದು ರಾಜ್ಯದಲ್ಲಿ ಮತ್ತೆ ಕೊವಿಡ್​ ಪ್ರಕರಣಗಳು ಏರಿಕೆಯಾಗುತ್ತಿದ್ದು. ಕಳೆದ1 ವಾರದಿಂದ ಬೆಂಗಳೂರು ಸೇರಿ 4 ಜಿಲ್ಲೆಗಳಲ್ಲಿ ನಿಗಾವಹಿಸಲಾಗಿದೆ.

ರಾಜ್ಯದಲ್ಲಿ ಏರಿಕೆಯಾಗುತ್ತಿರುವ ಕೊವಿಡ್​ ಪ್ರಕರಣಗಳು; 4 ಜಿಲ್ಲೆಗಳ ಮೇಲೆ ನಿಗಾ
ಸಾಂದರ್ಭಿಕ ಚಿತ್ರ
ಕಿರಣ್ ಹನುಮಂತ್​ ಮಾದಾರ್
|

Updated on: Mar 21, 2023 | 1:12 PM

Share

ಬೆಂಗಳೂರು: ಇನ್ನೇನು ಕೊರೊನಾ(Covid-19)ಅಬ್ಬರ ಮುಗಿಯಿತು ಎಂದು ಜನ ನಿರಾಳರಾಗಿದ್ದಾರೆ. ಆದರೆ ಮತ್ತೆ ಇದೀಗ ಸದ್ದಿಲ್ಲದೆ ನಿಧಾನಗತಿಯಲ್ಲಿ ಕೊರೊನಾ ಹಾವಳಿ ಶುರುವಾಗುತ್ತಿದೆ. ಹೌದು ರಾಜ್ಯದಲ್ಲಿ ಮತ್ತೆ ಕೊವಿಡ್​ ಪ್ರಕರಣಗಳು ಏರಿಕೆಯಾಗುತ್ತಿದೆ. ಕಳೆದ 1 ವಾರದಿಂದ ಬೆಂಗಳೂರು ಸೇರಿ 4 ಜಿಲ್ಲೆಗಳಲ್ಲಿ ಕೊರೊನಾ ಏರಿಕೆಯಾಗಿದ್ದು, ಶಿವಮೊಗ್ಗ, ಕಲಬುರಗಿ, ಮೈಸೂರು, ಉತ್ತರ ಕನ್ನಡ ಜಿಲ್ಲೆಯಲ್ಲಿ ನಿಗಾವಹಿಸಲಾಗಿದೆ. ಈ 4 ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮಕೈಗೊಳ್ಳಲು ಸರ್ಕಾರ ಆದೇಶ ಹೊರಡಿಸಿದ್ದು, ಇದೀಗ ಕೇಂದ್ರದ ಸೂಚನೆ ಮೇರೆಗೆ ರಾಜ್ಯ ಆರೋಗ್ಯ ಇಲಾಖೆ ಕೊವಿಡ್​ ಪರೀಕ್ಷೆ, ಪತ್ತೆ, ಚಿಕಿತ್ಸೆ, ಲಸಿಕೆಗೆ ಒತ್ತು ಕೊಡಲು ಸೂಚನೆ ನೀಡಿದೆ. ಮತ್ತು ಸೋಂಕಿನ ಬಗ್ಗೆ ತೀವ್ರ ನಿಗಾ ಇಡಲು ಆರೋಗ್ಯ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ.

ರಾಜ್ಯದ ಚುನಾವೆಣೆಯ ಮೇಲೆ ಕೊರೊನಾ ಕರಿನೇರಳು ?

ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ಕೊರೊನಾ ಕೇಸ್​ಗಳು ಏರಿಕೆಯತ್ತ ಸಾಗಿದೆ. ಕಳೆದ ಒಂದು ವಾರದಿಂದ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮತ್ತೆ ಕೊರೊನಾ ಏರಿಕೆಯಾಗಿದೆ. ರಾಜ್ಯದಲ್ಲಿ ಕಳೆದ 5 ತಿಂಗಳಿಂದ ನಿಯಂತ್ರಣದಲ್ಲಿದ್ದ ಕೊರೋನಾ ಮಾ.8 ರಿಂದ ಕಳೆದ ಎರಡು ವಾರದ ಅವಧಿಯಲ್ಲಿ ಶೇ.2.77 ಪಾಸಿಟಿವಿಟಿದರ ಹೆಚ್ಚಿದೆ.

ಇದನ್ನೂ ಓದಿ:Covid cases in India: ಭಾರತದಲ್ಲಿ 800 ದಾಟಿದ ದೈನಂದಿನ ಕೋವಿಡ್ ಪ್ರಕರಣಗಳ ಸಂಖ್ಯೆ, ಇದು 4 ತಿಂಗಳುಗಳಲ್ಲಿ ಅತಿ ಹೆಚ್ಚು

ಇನ್ನು ದೇಶದಲ್ಲಿ ಈಗಾಗಲೇ ಎಚ್‌3ಎನ್‌2 ಸೋಂಕಿನಿಂದ ಹೆಚ್ಚೆಚ್ಚು ಜನರು ಬಳಲುತ್ತಿರುವ ನಡುವೆಯೇ ಕೋವಿಡ್‌ 19 ಪ್ರಕರಣಗಳು ನಿಧಾನವಾಗಿ ಏರಿಕೆ ಕಾಣುತ್ತಿದೆ. ಕಳೆದ 129 ದಿನಗಳಲ್ಲೇ ಗರಿಷ್ಠ ಪ್ರಮಾಣದ ಹೊಸ ಪ್ರಕರಣಗಳು ಭಾನುವಾರ ವರದಿಯಾಗಿದೆ. ಕೇವಲ 24 ಗಂಟೆಗಳಲ್ಲಿ ದೇಶಾದ್ಯಂತ 1,071 ಹೊಸ ಕೊರೊನಾ ಕೇಸ್‌ಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಜೊತೆಗೆ ದೇಶದಲ್ಲಿ ಸಕ್ರಿಯ ಕೊರೊನಾ ಸೋಂಕಿತರ ಸಂಖ್ಯೆಯು 6000 ದಾಟಿದೆ.

ಸೋಂಕಿನಿಂದ ಪಾರಾಗಲು ಏನು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು.?

1) ನಿಗದಿತವಾಗಿ ಪರೀಕ್ಷೆಗಳನ್ನು ನಡೆಸಬೇಕು.

2) ಹೊಸದಾಗಿ ಹಾಗೂ ಕ್ಲಸ್ಟರ್ ಮಾದರಿಯಲ್ಲಿ ವರದಿಯಾಗುವ ಸೋಂಕು ಪ್ರಕರಣಗಳ ಮೇಲ್ವಿಚಾರಣೆ ಮಾಡಬೇಕು.

3) ಕೊರೋನಾ ಸೋಂಕು ಹರಡುವುದನ್ನು ತಡೆಗಟ್ಟಲು ಎಲ್ಲ ಆರೋಗ್ಯ ಸಂಸ್ಥೆಗಳಲ್ಲಿ ಎಚ್ಚರವಹಿಸಬೇಕು.

4) ಐಎಲ್‌ಐ (ವಿಷಮ ಶೀತ ಜ್ವರ) ಹಾಗೂ ಸಾರಿ (ತೀವ್ರ ಉಸಿರಾಟ ಸಮಸ್ಯೆ) ಪ್ರಕರಣಗಳನ್ನು ಪತ್ತೆಹಚ್ಚಬೇಕು.

5) ಅಂತರಾಷ್ಟ್ರೀಯ ಪ್ರಯಾಣಿಕರು, ಸ್ಥಳೀಯವಾಗಿ ವರದಿಯಾಗುವ ಕ್ಲಸ್ಟರ್ ಪ್ರಕರ‘ಣಗಳಲ್ಲಿ ಸಂಗ್ರಹಿಸಲಾಗುವ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆ ನಡೆಸಬೇಕು.

6)ಅರ್ಹರಿಗೆ ಲಸಿಕೆ ಹೆಚ್ಚಿಸಬೇಕು

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ