AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS Final: ಸರ್ಕಾರದ ಸುತ್ತೋಲೆಗೆ ಡೋಂಟ್​ಕೇರ್;​ ಕ್ರೀಡಾಂಗಣದಲ್ಲಿ ಬಿಗ್ ಸ್ಕ್ರೀನ್ ವ್ಯವಸ್ಥೆ ಮಾಡದ ಅಧಿಕಾರಿಗಳು

India vs Australia, ICC ODI World Cup Final: ಚಿತ್ರದುರ್ಗ ಕ್ರೀಡಾ ಇಲಾಖೆ ಅಧಿಕಾರಿಗಳ ನಿರ್ಲಕ್ಷಕ್ಕೆ ಕ್ರಿಕೆಟ್​ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಸಮಯವಿಲ್ಲದ ಕಾರಣ ಎಲ್​ಇಡಿ ಸ್ಕ್ರೀನ್​ ಅಳವಡಿಸಲ್ಲ ಎಂದು ಕ್ರೀಡಾ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕರುನಾಡ ವಿಜಯಸೇನೆ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ.

IND vs AUS Final: ಸರ್ಕಾರದ ಸುತ್ತೋಲೆಗೆ ಡೋಂಟ್​ಕೇರ್;​ ಕ್ರೀಡಾಂಗಣದಲ್ಲಿ ಬಿಗ್ ಸ್ಕ್ರೀನ್ ವ್ಯವಸ್ಥೆ ಮಾಡದ ಅಧಿಕಾರಿಗಳು
ಕರುನಾಡ ವಿಜಯಸೇನೆ ಕಾರ್ಯಕರ್ತರ ಪ್ರತಿಭಟನೆ
TV9 Web
| Edited By: |

Updated on:Nov 19, 2023 | 1:27 PM

Share

ಕೋಲಾರ ನ.19: ರವಿವಾರ (ನ.19) ಭಾರತ ಮತ್ತು ಆಸ್ಟ್ರೇಲಿಯಾ ಮಧ್ಯೆ ವಿಶ್ವಕಪ್​ ಫೈನಲ್​ (India vs Australia Final) ಪಂದ್ಯ ನಡೆಯಲಿದೆ. ಗುಜರಾತ್​ನ ಅಹಮದಾಬಾದ್​​ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಎರಡು ಬಲಿಷ್ಠ ತಂಡಗಳು ಮುಖಾಮುಖಿಯಾಗಲಿವೆ. ಹೈವೋಲ್ಟೇಜ್​​​​ ಫೈನಲ್ ಪಂದ್ಯ ವೀಕ್ಷಣೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಬಿಗ್ ಸ್ಕ್ರೀನ್ (Big Screen) ವ್ಯವಸ್ಥೆ ಮಾಡುವಂತೆ ಸರ್ಕಾರ ನಿನ್ನೆ (ನ.18) ರಂದು ಸುತ್ತೋಲೆ ಹೊರಡಿಸಿತ್ತು. ಆದರೆ ಸರ್ಕಾರದ ಸುತ್ತೋಲೆಯನ್ನು ಕೋಲಾರ, ಮಂಡ್ಯ ಮತ್ತು ಚಿತ್ರದುರ್ಗ ಕ್ರೀಡಾ ಇಲಾಖೆ ಅಧಿಕಾರಿಗಳು ಪರಿಗಣನೆಗೆ ತೆಗೆದುಕೊಳ್ಳದೆ, ಕುಂಟು ನೆಪ ಹೇಳುತ್ತಿದ್ದಾರೆ.

ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಕಾಮಗಾರಿ ನಡೆಯುತ್ತಿದೆ. ಸೂಕ್ತ ಜಾಗದ ವ್ಯವಸ್ಥೆ ಇಲ್ಲ, ಸ್ಕ್ರೀನ್ ಸಿಗುತ್ತಿಲ್ಲ ಹೀಗಾಗಿ ಬಿಗ್ ಸ್ಕ್ರೀನ್ ವ್ಯವಸ್ಥೆ ಮಾಡುವುದಿಲ್ಲವೆಂದು ಕೋಲಾರ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕಿ ಗೀತಾ ಅವರು ನೆಪ ಹೇಳಿ ಜಾರಿಕೊಳ್ಳುತ್ತಿದ್ದಾರೆ. ಉಪ ನಿರ್ದೇಶಕಿ ಗೀತಾ ಅವರ ನಿರ್ಲಕ್ಷ್ಯಕ್ಕೆ ಕ್ರಿಕೆಟ್‌ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನು ಮಂಡ್ಯದಲ್ಲಿಯೂ ಇದೇ ಪರಿಸ್ಥಿತಿ ಇದೆ. ಅಧಿಕಾರಿಯ ಬೇಜವಬ್ದಾರಿತನಕ್ಕೆ ಕ್ರಿಕೆಟ್ ಅಭಿಮಾನಿಗಳಿಗೆ ಭಾರಿ ನಿರಾಸೆಯಾಗಿದೆ. ಕ್ರೀಡಾಂಗಣ ಕಾಮಗಾರಿಯಲ್ಲಿದೆ, ಒಂದೆ ದಿನಕ್ಕೆ ವ್ಯವಸ್ಥೆ ಮಾಡಲು ಆಗಲ್ಲ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕ ಓಂ ಪ್ರಕಾಶ್ ಹೇಳಿದ್ದಾರೆ.

ಇದನ್ನೂ ಓದಿ: ಮಂಗಳೂರು ಕಲಾವಿದನ ಕೈಯಲ್ಲಿ ಮೂಡಿದ ಚಿನ್ನದ ವಿಶ್ವಕಪ್ 

ಚಿತ್ರದುರ್ಗದಲ್ಲೂ ಕೂಡ ಕ್ರೀಡಾ ಇಲಾಖೆ ಅಧಿಕಾರಿಗಳ ನಿರ್ಲಕ್ಷಕ್ಕೆ ಕ್ರಿಕೆಟ್​​​ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಸಮಯವಿಲ್ಲದ ಕಾರಣ ಎಲ್​ಇಡಿ ಸ್ಕ್ರೀನ್​ ಅಳವಡಿಸಲ್ಲ ಎಂದು ಕ್ರೀಡಾ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕರುನಾಡ ವಿಜಯಸೇನೆ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಸುಚಿತ್ರಾ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಗದಗನಲ್ಲಿ ಎಲ್ಇಡಿ ಪರದೆ ವ್ಯವಸ್ಥೆಗೆಗಾಗಿ ಅಧಿಕಾರಿಗಳು ಪರದಾಡುತ್ತಿದ್ದಾರೆ. ಎಲ್.ಇ.ಡಿ ಪರದೆ ಸಿಗದಿದ್ದ ಹಿನ್ನೆಲೆಯಲ್ಲಿ ಸ್ಮಾರ್ಟ್ ಟಿವಿ ಮೂಲಕ ಕ್ರಿಕೆಟ್ ನೇರಪ್ರಸಾರದ ವ್ಯವಸ್ಥೆ ಮಾಡಿದ್ದಾರೆ. ಕ್ರೀಡಾಂಗಣದಲ್ಲಿ ಸಾವಿರಕ್ಕೂ ಹೆಚ್ಚು ಜನರು ಕೂಡುವ ಹಾಗೆ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಚೇರ್​ಗಳ ವ್ಯವಸ್ಥೆ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:26 pm, Sun, 19 November 23

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ