AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ರೂಪಾಂತರಿ ಕೊರೊನಾ ಪತ್ತೆ, ಅತಿಹೆಚ್ಚು ಸಕ್ರಿಯ ಪ್ರಕರಣಗಳಿರುವ ಜಿಲ್ಲೆಗಳ ಪಟ್ಟಿಯಲ್ಲಿ ಬೆಂಗಳೂರು

ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡುಬರುತ್ತಿದೆ. ನಮ್ಮ ಪಕ್ಕದ ರಾಜ್ಯಗಳಾದ ಕೇರಳ, ಮಹಾರಾಷ್ಟ್ರ ಅಷ್ಟೇ ಅಲ್ಲದೆ ಚಂಡೀಗಡ, ರಾಜಸ್ಥಾನದಲ್ಲೂ ಕೊವಿಡ್-19 ಸೋಂಕು ಹಲವರಲ್ಲಿ ಪತ್ತೆಯಾಗುತ್ತಿದೆ. ಈ ಸಂಬಂಧ ಕರ್ನಾಟಕ ರಾಜ್ಯ ಸರ್ಕಾರ ಇಂದು (ಮಾರ್ಚ್ 24) ಹೊಸ ಕೊವಿಡ್ ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ.

ಭಾರತದಲ್ಲಿ ರೂಪಾಂತರಿ ಕೊರೊನಾ ಪತ್ತೆ, ಅತಿಹೆಚ್ಚು ಸಕ್ರಿಯ ಪ್ರಕರಣಗಳಿರುವ ಜಿಲ್ಲೆಗಳ ಪಟ್ಟಿಯಲ್ಲಿ ಬೆಂಗಳೂರು
ಸೌಜನ್ಯ : ಅಂತರ್ಜಾಲ
TV9 Web
| Edited By: |

Updated on:Apr 05, 2022 | 1:15 PM

Share

ದೆಹಲಿ: ಭಾರತದಲ್ಲಿ ರೂಪಾಂತರ ಕೊರೊನಾ ವೈರಾಣು ಪತ್ತೆಯಾಗಿದೆ. ಕರ್ನಾಟಕದ ನೆರೆಯ ರಾಜ್ಯಗಳಾದ ಕೇರಳ ಮತ್ತು ಮಹಾರಾಷ್ಟ್ರದಲ್ಲಿ ರೂಪಾಂತರಿ ಕೊರೊನಾ ಸೋಂಕು ಹರಡುತ್ತಿರುವ ಬಗ್ಗೆ ಮಾಹಿತಿ ಲಭಿಸಿದೆ. ಕೇಂದ್ರ ಸರ್ಕಾರದ ಆರೋಗ್ಯ ಸಚಿವಾಲಯ ಈ ಬಗ್ಗೆ ಟ್ವೀಟ್ ಮಾಡಿದೆ. ಮಹಾರಾಷ್ಟ್ರದಲ್ಲಿ ಸಾರ್ಸ್ ಕೋವ್-2 ಎಂಬ ಕೊರೊನಾ ರೂಪಾಂತರಿ ತಳಿ ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ವೈರಸ್‌ನ ಇ484ಕ್ಯೂ, ಎಲ್‌452ಆರ್‌ ರೂಪಾಂತರಿ ಪತ್ತೆಯಾಗಿದ್ದು, ಟೆಸ್ಟಿಂಗ್ ವೇಳೆ ಶೇ. 15ರಿಂದ 20ರಷ್ಟು ಮಾದರಿಗಳಲ್ಲಿ ಈ ವೈರಾಣು ಕಾಣಿಸಿಕೊಂಡಿದೆ.

2020ರ ಕೊವಿಡ್-19 ತಳಿಗೂ ಈ ವರ್ಷದ ಕೊವಿಡ್ ತಳಿಗೂ ಹೋಲಿಕೆ ಮಾಡಲಾಗಿದೆ. ಕೊರೊನಾ ವೈರಸ್‌ನ ಇ484ಕ್ಯು ಮತ್ತು ಎಲ್‌452ಆರ್‌ ರೂಪಾಂತರಗಳು ಹೆಚ್ಚಿರುವುದು ಪತ್ತೆಯಾಗಿದೆ ಎಂದು ರೂಪಾಂತರ ವೈರಸ್ ಬಗ್ಗೆ ಆರೋಗ್ಯ ಸಚಿವಾಯ ಮಾಹಿತಿ ಹಂಚಿಕೊಂಡಿದೆ.

ಕೇರಳದ 14 ಜಿಲ್ಲೆಯ 2,032 ಮಾದರಿಗಳನ್ನು ಟೆಸ್ಟ್ ಗೆ ಒಳಪಡಿಸಲಾಗಿತ್ತು. ಈ ಪೈಕಿ ಕೊರೊನಾ ವೈರಸ್‌ನ n440k ರೂಪಾಂತರ ತಳಿಯು 11 ಜಿಲ್ಲೆಗಳ 123 ಮಾದರಿಗಳಲ್ಲಿ ಪತ್ತೆಯಾಗಿದೆ. ಈ ರೂಪಾಂತರ ವೈರಸ್‌ ತಳಿ 16 ರಾಷ್ಟ್ರಗಳಲ್ಲಿ ಪತ್ತೆಯಾಗಿದೆ. ಆದರೆ, ಕೊರೊನಾ ಪ್ರಕರಣಗಳ ದಿಢೀರ್‌ ಏರಿಕೆಗೂ ರೂಪಾಂತರ ತಳಿಗಳಿಗೂ ನೇರ ಸಂಬಂಧ ಇರೋದನ್ನು ಖಚಿತ ಪಡಿಸಲು ಸಾಧ್ಯವಿಲ್ಲ. ಇದಕ್ಕೆ ಇನ್ನಷ್ಟು ವಿಶ್ಲೇಷಣೆಗಳು ಆಗಬೇಕಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ದೇಶದಲ್ಲಿ ಅತಿಹೆಚ್ಚು ಕೊವಿಡ್-19 ಪ್ರಕರಣಗಳು ಕಂಡುಬಂದಿರುವ ಹತ್ತು ಜಿಲ್ಲೆಗಳನ್ನು ಕೇಂದ್ರ ಆರೋಗ್ಯ ಸಚಿವಾಲಯ ಗುರುತಿಸಿದೆ. ಪುಣೆ, ನಾಗ್ಪುರ, ಮುಂಬೈ, ಥಾಣೆ, ನಾಸಿಕ್, ಔರಂಗಾಬಾದ್, ನಂದೆಡ್, ಜಾಲ್​ಗಾಂವ್, ಅಕೊಲ ಮತ್ತು ಬೆಂಗಳೂರು ನಗರ ಈ ಪಟ್ಟಿಯಲ್ಲಿದೆ. ಮಹಾರಾಷ್ಟ್ರದ ಒಂಭತ್ತು ಜಿಲ್ಲೆ ಹಾಗೂ ಕರ್ನಾಟಕ ರಾಜಧಾನಿ ಬೆಂಗಳೂರನ್ನು ಕೂಡ ಗುರುತಿಸಲಾಗಿದೆ.

ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡುಬರುತ್ತಿದೆ. ನಮ್ಮ ಪಕ್ಕದ ರಾಜ್ಯಗಳಾದ ಕೇರಳ, ಮಹಾರಾಷ್ಟ್ರ ಅಷ್ಟೇ ಅಲ್ಲದೆ ಚಂಡೀಗಡ, ರಾಜಸ್ಥಾನದಲ್ಲೂ ಕೊವಿಡ್-19 ಸೋಂಕು ಹಲವರಲ್ಲಿ ಪತ್ತೆಯಾಗುತ್ತಿದೆ. ಈ ಸಂಬಂಧ ಕರ್ನಾಟಕ ರಾಜ್ಯ ಸರ್ಕಾರ ಇಂದು (ಮಾರ್ಚ್ 24) ಹೊಸ ಕೊವಿಡ್ ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ. ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಪಾಲಿಸುವುದನ್ನು ಕಡ್ಡಾಯಗೊಳಿಸಿದೆ. ತಪ್ಪಿದಲ್ಲಿ ದಂಡ ವಿಧಿಸುವ ವಿಚಾರವನ್ನು ಕೂಡ ತಿಳಿಸಿದೆ.

ಇದನ್ನೂ ಓದಿ: ಕೊರೊನಾ ನಿಯಂತ್ರಣಕ್ಕೆ ರಾಜ್ಯದಲ್ಲಿ ಹೊಸ ನಿಯಮಾವಳಿ: ಮಾಸ್ಕ್ ಹಾಕದಿದ್ದರೆ ₹ 250 ದಂಡ!

ಇದನ್ನೂ ಓದಿ: Bangalore Covid-19 Case Updates: ಜುಲೈವರೆಗೂ ಕೊರೊನಾ ಸೋಂಕು ಕಾಡುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ ತಜ್ಞರು

Published On - 7:19 pm, Wed, 24 March 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್