Cairn Energyಗೆ ₹8,000 ಕೋಟಿ ನೀಡುವಂತೆ ಭಾರತಕ್ಕೆ ಅಂತಾರಾಷ್ಟ್ರೀಯ ನ್ಯಾಯಮಂಡಳಿ ಸೂಚನೆ

ಅಂತರರಾಷ್ಟ್ರೀಯ ಮಧ್ಯಸ್ಥಿಕೆ ಪ್ರಕರಣ ಭಾರತದ ಪಾಲಿಗೆ ಅತ್ಯಂತ ಮಹತ್ವದ್ದಾಗಿತ್ತು. ಆದರೆ, ಈಗ ಭಾರತವು ಪ್ರಕರಣವನ್ನು ಸೋತಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಏತನ್ಮಧ್ಯೆ, Cairn Energy Plc ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

Cairn Energyಗೆ ₹8,000 ಕೋಟಿ ನೀಡುವಂತೆ ಭಾರತಕ್ಕೆ ಅಂತಾರಾಷ್ಟ್ರೀಯ ನ್ಯಾಯಮಂಡಳಿ ಸೂಚನೆ
ಸಾಂಕೇತಿಕ ಚಿತ್ರ
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 23, 2020 | 3:40 PM

ನವದೆಹಲಿ: ಬ್ರಿಟನ್​ ಮೂಲದ ತೈಲ ಉತ್ಪಾದಕ ಸಂಸ್ಥೆ ಕೇರ್ನ್ ಎನರ್ಜಿಗೆ Cairn Energy PLC ₹8,000 ಸಾವಿರ ಕೋಟಿ ರೂಪಾಯಿ ನೀಡಬೇಕೆಂದು ಭಾರತ ಸರ್ಕಾರಕ್ಕೆ ಅಂತಾರಾಷ್ಟ್ರೀಯ ಮಧ್ಯಸ್ಥಿಕೆ ನ್ಯಾಯಮಂಡಳಿ ಸೂಚನೆ ನೀಡಿದೆ. ಈ ಸಂಸ್ಥೆಗೆ ನಷ್ಟ ಮಾಡಿದ ಆರೋಪದ ಮೇಲೆ ಇಷ್ಟು ದೊಡ್ಡ ಮೊತ್ತದ ಹಣ ಪಾವತಿಗೆ ಸೂಚಿಸಲಾಗಿದೆ.

ಈ ಅಂತಾರಾಷ್ಟ್ರೀಯ ಮಧ್ಯಸ್ಥಿಕೆ ಪ್ರಕರಣ ಭಾರತದ ಪಾಲಿಗೆ ಅತ್ಯಂತ ಮಹತ್ವದ್ದಾಗಿತ್ತು. ಆದರೆ, ಈಗ ಭಾರತವು ಪ್ರಕರಣವನ್ನು ಸೋತಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಆದರೆ, Cairn Energy Plc ಮಾತ್ರ ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

ಭಾರತದ ಕಂಪನಿಯೊಂದಿಗೆ ವಿಲೀನ ಅಥವಾ ಮಾರಾಟ ಪ್ರಕ್ರಿಯೆ ನಡೆದರೆ ಭಾರತ ಸರ್ಕಾರಕ್ಕೆ ತೆರಿಗೆ ಕಟ್ಟಬೇಕು ಎನ್ನುವ ಕಾನೂನನ್ನು ಭಾರತ ಸರ್ಕಾರ ಜಾರಿ ಮಾಡಿತ್ತು. ಆದರೆ, ಭಾರತದಲ್ಲಿ ವೇದಾಂತ ಕಂಪನಿಯ ಜೊತೆಗೆ ವಿಲೀನಗೊಂಡ ಹೊರತಾಗಿಯೂ Cairn Energy Plc ತೆರಿಗೆ ಕಟ್ಟಲು ನಿರಾಕರಿಸಿತ್ತು. ಅಲ್ಲದೆ, ಈ ಬಗ್ಗೆ ಅಂತಾರಾಷ್ಟ್ರೀಯ ಮಧ್ಯಸ್ಥಿಕೆ ನ್ಯಾಯಮಂಡಳಿಯಲ್ಲಿ ದಾವೆಯನ್ನೂ ಹೂಡಿತ್ತು.

2018ರ ಡಿಸೆಂಬರ್​ನಲ್ಲಿಯೇ ವಿಚಾರಣೆ ಪೂರ್ಣಗೊಂಡಿತ್ತು. ಆದರೆ, ತೀರ್ಪಿನ ದಿನಾಂಕವನ್ನು ಮುಂದೂಡಲಾಗಿತ್ತು. ಈಗ ತೀರ್ಪು ಹೊರಬಂದಿದ್ದು Cairn Energyಗೆ ಜಯ ಸಿಕ್ಕಂತಾಗಿದೆ. ಈ ತೀರ್ಪಿನ ನಂತರ Cairn Energyಗೆ ನಷ್ಟ ಮಾಡಿದ ಆರೋಪದಲ್ಲಿ ₹ 8,000 ಕೋಟಿಯನ್ನು ಭಾರತ ಸರ್ಕಾರ ಪಾವತಿ ಮಾಡಬೇಕಿದೆ. ಈ ಮೊದಲು ವೊಡಾಫೋನ್​ ವಿರುದ್ಧದ ಪ್ರಕರಣದಲ್ಲಿಯೂ ಭಾರತ ಸೋತಿತ್ತು.

ಕೊರೊನಾ ರೂಪಾಂತರ: ಬ್ರಿಟನ್​ನಿಂದ ಆಗಮಿಸುವವರ ತಪಾಸಣೆಗಾಗಿ ಕೇಂದ್ರದಿಂದ ನಿಯಮಾವಳಿ ಬಿಡುಗಡೆ

ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು