AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

32 ಮಕ್ಕಳಿಗೆ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿ: ಕರ್ನಾಟಕದ ಇಬ್ಬರಿಗೆ ಗೌರವ

ಕರ್ನಾಟಕದ ಇಬ್ಬರು ಮಕ್ಕಳಿಗೆ ಪ್ರಶಸ್ತಿ ಸಿಕ್ಕಿದೆ. ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ರಾಕೇಶ್​ ಕೃಷ್ಣ ಹಾಗೂ ಬೆಂಗಳೂರಿನ ವೀರ್​ ಕಶ್ಯಪ್​ಗೆ ಪ್ರಶಸ್ತಿ ದೊರೆತಿದೆ.

32 ಮಕ್ಕಳಿಗೆ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿ: ಕರ್ನಾಟಕದ ಇಬ್ಬರಿಗೆ ಗೌರವ
ಬಾಲ ಪ್ರಶಸ್ತಿ ಪಡೆದ ಕರ್ನಾಟಕದವರು
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 25, 2021 | 5:05 PM

ಬೆಂಗಳೂರು: ಗಣರಾಜ್ಯೋತ್ಸವ ಸಮಯದಲ್ಲಿ ನೀಡುವ ಪ್ರಧಾನ ಮಂತ್ರಿ ಬಾಲ ಪುರಸ್ಕಾರ 2021 ಘೋಷಣೆ ಆಗಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 32 ಮಕ್ಕಳಿಗೆ ಈ ಪ್ರಶಸ್ತಿ ನೀಡಲಾಗಿದೆ. ಕೊರೊನಾ ಸಮಯದಲ್ಲೂ ಅನೇಕ ಮಕ್ಕಳು ತಮ್ಮ ಕಲೆಯನ್ನು ಅಭಿವ್ಯಕ್ತಪಡಿಸಿದ್ದಾರೆ. ಇಂಥವರನ್ನು ಗುರುತಿಸಿ ನಾವು ಪ್ರಶಸ್ತಿ ನೀಡಿದ್ದೇವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಕರ್ನಾಟಕದ ಇಬ್ಬರು ಮಕ್ಕಳಿಗೆ ಪ್ರಶಸ್ತಿ ಸಿಕ್ಕಿದೆ. ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ರಾಕೇಶ್​ ಕೃಷ್ಣ ಹಾಗೂ ಬೆಂಗಳೂರಿನ ವೀರ್​ ಕಶ್ಯಪ್​ಗೆ ಈ ಗೌರವ ಸಿಕ್ಕಿದೆ. ಆವಿಷ್ಕಾರ ವಿಭಾಗದಲ್ಲಿ ಇವರಿಗೆ ಬಾಲ ಪುರಸ್ಕಾರ ಸಿಕ್ಕಿದೆ. ಒಂದು ಲಕ್ಷ ರೂಪಾಯಿ ನಗದು ಹಾಗೂ ಪದಕ ಇವರಿಗೆ ಸಿಗಲಿದೆ.

ಕೃಷಿ ಕ್ಷೇತ್ರದಲ್ಲಿ ಹೊಸ ಅನ್ವೇಷಣೆಗಾಗಿ ಕರ್ನಾಟಕದ ರಾಕೇಶ್ ಕೃಷ್ಣಗೆ ಈ ಗೌರವ ಸಂದಿದೆ. ಇವರು ಸೀಡೋಗ್ರಾಫರ್ ಎಂಬ ಬಹುಪಯೋಗಿ ಬೀಜ ಬಿತ್ತನೆ ಯಂತ್ರವನ್ನು ಕಂಡುಹಿಡಿದಿದ್ದಾರೆ. ವೀರ್​ ಕಶ್ಯಪ್ ಕೊರೊನಾ ಸಂದರ್ಭದಲ್ಲಿ ಹೊಸ ಗೇಮ್​ ಒಂದನ್ನು ಆವಿಷ್ಕರಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪಡೆದ ರಾಕೇಶ್ ಕೃಷ್ಣ ಮತ್ತು ವೀರ್​ ಕಶ್ಯಪ್​ಗೆ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಪ್ರಶಸ್ತಿ ಪಡೆದ ಇತರರ ಮಾಹಿತಿ ಇಲ್ಲಿದೆ.

  • ಅಮೆಯಾ: ಡಾನ್ಸರ್​, ಈ ವರೆಗೆ ನೂರಕ್ಕೂ ಹೆಚ್ಚು ಕಡೆಗಳಲ್ಲಿ ನೃತ್ಯ ಪ್ರದರ್ಶನ ನೀಡಿದ್ದಾರೆ
  • ಆನಂದ್​ ಕುಮಾರ್​: ಗಣಿತದಲ್ಲಿ ಸಾಕಷ್ಟು ಥಿಯರಿಗಳನ್ನು ಕಂಡು ಹಿಡಿದಿದ್ದಾರೆ.
  • ಅನುಜ್​ ಜೈನ್: ಜಾಗತಿಕ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ.
  • ಅನುರಾಗ್​ ರಾಮೋಲಾ: ಇವರು ಆರ್ಟಿಸ್ಟ್​. ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ಆಲೋಚನೆಗಳನ್ನು ವಿವರಿಸಿ ಭೇಷ್​ ಎನಿಸಿಕೊಂಡಿದ್ದರು.
  • ಅನ್ವೇಷ್​ ಶುಭಮ್​ ಪ್ರಧಾನ್​: ಓದಿನಲ್ಲಿ ಮುಂದಿರುವ ಇವರು 400ಕ್ಕೂ ಹೆಚ್ಚು ಪ್ರಮಾಣ ಪತ್ರ ಹಾಗೂ ಸ್ಕಾಲರ್​​ಶಿಪ್​ ಪಡೆದಿದ್ದಾರೆ.
  • ಅರ್ಚಿತ್​ ರಾಹುಲ್​: ‘ಪ್ರಸವಾನಂತರದ ರಕ್ತಸ್ರಾವ ಕಪ್’ ಅನ್ನು ರೂಪಿಸುವ ಮೂಲಕ ಇವರು ತಾಯಿಮರಣ ಪ್ರಮಾಣವನ್ನು ಜಾಗತಿಕವಾಗಿ ಕಡಿಮೆ ಮಾಡಲು ಸಹಾಯ ಮಾಡಿದ್ದಾರೆ.
  • ಕಾಮ್ಯಾ ಕಾರ್ತಿಕೇಯನ್​: ಸಾಕಷ್ಟು ಪರ್ವತಗಳನ್ನು ಏರಿದ ಖ್ಯಾತಿ ಇವರಿಗಿದೆ.
  • ಸವಿತಾ ಕುಮಾರಿ: ಬಿಲ್ಲುಗಾರಿಕೆ ಅಭ್ಯಾಸ ಮಾಡುತ್ತಿರುವ ಇವರು ಸಾಕಷ್ಟು ಪ್ರಶಸ್ತಿ ಗೆದ್ದಿದ್ದಾರೆ.
  • ಖುಷಿ ಚಿರಾಗ್​: ಸ್ಕೇಟಿಂಗ್​ನಲ್ಲಿ ಸಾಕಷ್ಟು ಪ್ರಶಸ್ತಿ ಗೆದ್ದಿದ್ದಾರೆ.

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ; ಪ್ರಧಾನಿ ನರೇಂದ್ರ ಮೋದಿ ಸಹಿತ ಗಣ್ಯರಿಂದ ಶುಭಾಶಯ

ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ಶೋಲೆಯ ರಾಮಗಢ ಇನ್ನಿಲ್ಲ, ಶುರುವಾಯ್ತು ಹೆಸರು ಬದಲಾವಣೆ
ಶೋಲೆಯ ರಾಮಗಢ ಇನ್ನಿಲ್ಲ, ಶುರುವಾಯ್ತು ಹೆಸರು ಬದಲಾವಣೆ