AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

32 ಮಕ್ಕಳಿಗೆ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿ: ಕರ್ನಾಟಕದ ಇಬ್ಬರಿಗೆ ಗೌರವ

ಕರ್ನಾಟಕದ ಇಬ್ಬರು ಮಕ್ಕಳಿಗೆ ಪ್ರಶಸ್ತಿ ಸಿಕ್ಕಿದೆ. ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ರಾಕೇಶ್​ ಕೃಷ್ಣ ಹಾಗೂ ಬೆಂಗಳೂರಿನ ವೀರ್​ ಕಶ್ಯಪ್​ಗೆ ಪ್ರಶಸ್ತಿ ದೊರೆತಿದೆ.

32 ಮಕ್ಕಳಿಗೆ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿ: ಕರ್ನಾಟಕದ ಇಬ್ಬರಿಗೆ ಗೌರವ
ಬಾಲ ಪ್ರಶಸ್ತಿ ಪಡೆದ ಕರ್ನಾಟಕದವರು
ರಾಜೇಶ್ ದುಗ್ಗುಮನೆ
| Edited By: |

Updated on: Jan 25, 2021 | 5:05 PM

Share

ಬೆಂಗಳೂರು: ಗಣರಾಜ್ಯೋತ್ಸವ ಸಮಯದಲ್ಲಿ ನೀಡುವ ಪ್ರಧಾನ ಮಂತ್ರಿ ಬಾಲ ಪುರಸ್ಕಾರ 2021 ಘೋಷಣೆ ಆಗಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 32 ಮಕ್ಕಳಿಗೆ ಈ ಪ್ರಶಸ್ತಿ ನೀಡಲಾಗಿದೆ. ಕೊರೊನಾ ಸಮಯದಲ್ಲೂ ಅನೇಕ ಮಕ್ಕಳು ತಮ್ಮ ಕಲೆಯನ್ನು ಅಭಿವ್ಯಕ್ತಪಡಿಸಿದ್ದಾರೆ. ಇಂಥವರನ್ನು ಗುರುತಿಸಿ ನಾವು ಪ್ರಶಸ್ತಿ ನೀಡಿದ್ದೇವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಕರ್ನಾಟಕದ ಇಬ್ಬರು ಮಕ್ಕಳಿಗೆ ಪ್ರಶಸ್ತಿ ಸಿಕ್ಕಿದೆ. ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ರಾಕೇಶ್​ ಕೃಷ್ಣ ಹಾಗೂ ಬೆಂಗಳೂರಿನ ವೀರ್​ ಕಶ್ಯಪ್​ಗೆ ಈ ಗೌರವ ಸಿಕ್ಕಿದೆ. ಆವಿಷ್ಕಾರ ವಿಭಾಗದಲ್ಲಿ ಇವರಿಗೆ ಬಾಲ ಪುರಸ್ಕಾರ ಸಿಕ್ಕಿದೆ. ಒಂದು ಲಕ್ಷ ರೂಪಾಯಿ ನಗದು ಹಾಗೂ ಪದಕ ಇವರಿಗೆ ಸಿಗಲಿದೆ.

ಕೃಷಿ ಕ್ಷೇತ್ರದಲ್ಲಿ ಹೊಸ ಅನ್ವೇಷಣೆಗಾಗಿ ಕರ್ನಾಟಕದ ರಾಕೇಶ್ ಕೃಷ್ಣಗೆ ಈ ಗೌರವ ಸಂದಿದೆ. ಇವರು ಸೀಡೋಗ್ರಾಫರ್ ಎಂಬ ಬಹುಪಯೋಗಿ ಬೀಜ ಬಿತ್ತನೆ ಯಂತ್ರವನ್ನು ಕಂಡುಹಿಡಿದಿದ್ದಾರೆ. ವೀರ್​ ಕಶ್ಯಪ್ ಕೊರೊನಾ ಸಂದರ್ಭದಲ್ಲಿ ಹೊಸ ಗೇಮ್​ ಒಂದನ್ನು ಆವಿಷ್ಕರಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪಡೆದ ರಾಕೇಶ್ ಕೃಷ್ಣ ಮತ್ತು ವೀರ್​ ಕಶ್ಯಪ್​ಗೆ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಪ್ರಶಸ್ತಿ ಪಡೆದ ಇತರರ ಮಾಹಿತಿ ಇಲ್ಲಿದೆ.

  • ಅಮೆಯಾ: ಡಾನ್ಸರ್​, ಈ ವರೆಗೆ ನೂರಕ್ಕೂ ಹೆಚ್ಚು ಕಡೆಗಳಲ್ಲಿ ನೃತ್ಯ ಪ್ರದರ್ಶನ ನೀಡಿದ್ದಾರೆ
  • ಆನಂದ್​ ಕುಮಾರ್​: ಗಣಿತದಲ್ಲಿ ಸಾಕಷ್ಟು ಥಿಯರಿಗಳನ್ನು ಕಂಡು ಹಿಡಿದಿದ್ದಾರೆ.
  • ಅನುಜ್​ ಜೈನ್: ಜಾಗತಿಕ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ.
  • ಅನುರಾಗ್​ ರಾಮೋಲಾ: ಇವರು ಆರ್ಟಿಸ್ಟ್​. ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ಆಲೋಚನೆಗಳನ್ನು ವಿವರಿಸಿ ಭೇಷ್​ ಎನಿಸಿಕೊಂಡಿದ್ದರು.
  • ಅನ್ವೇಷ್​ ಶುಭಮ್​ ಪ್ರಧಾನ್​: ಓದಿನಲ್ಲಿ ಮುಂದಿರುವ ಇವರು 400ಕ್ಕೂ ಹೆಚ್ಚು ಪ್ರಮಾಣ ಪತ್ರ ಹಾಗೂ ಸ್ಕಾಲರ್​​ಶಿಪ್​ ಪಡೆದಿದ್ದಾರೆ.
  • ಅರ್ಚಿತ್​ ರಾಹುಲ್​: ‘ಪ್ರಸವಾನಂತರದ ರಕ್ತಸ್ರಾವ ಕಪ್’ ಅನ್ನು ರೂಪಿಸುವ ಮೂಲಕ ಇವರು ತಾಯಿಮರಣ ಪ್ರಮಾಣವನ್ನು ಜಾಗತಿಕವಾಗಿ ಕಡಿಮೆ ಮಾಡಲು ಸಹಾಯ ಮಾಡಿದ್ದಾರೆ.
  • ಕಾಮ್ಯಾ ಕಾರ್ತಿಕೇಯನ್​: ಸಾಕಷ್ಟು ಪರ್ವತಗಳನ್ನು ಏರಿದ ಖ್ಯಾತಿ ಇವರಿಗಿದೆ.
  • ಸವಿತಾ ಕುಮಾರಿ: ಬಿಲ್ಲುಗಾರಿಕೆ ಅಭ್ಯಾಸ ಮಾಡುತ್ತಿರುವ ಇವರು ಸಾಕಷ್ಟು ಪ್ರಶಸ್ತಿ ಗೆದ್ದಿದ್ದಾರೆ.
  • ಖುಷಿ ಚಿರಾಗ್​: ಸ್ಕೇಟಿಂಗ್​ನಲ್ಲಿ ಸಾಕಷ್ಟು ಪ್ರಶಸ್ತಿ ಗೆದ್ದಿದ್ದಾರೆ.

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ; ಪ್ರಧಾನಿ ನರೇಂದ್ರ ಮೋದಿ ಸಹಿತ ಗಣ್ಯರಿಂದ ಶುಭಾಶಯ

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?