AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ವರ್ಷದಿಂದ ಲಿಕ್ವಿಡ್ ನ್ಯಾನೋ ಡಿಎಪಿ ಉತ್ಪಾದನೆ: ಕೇಂದ್ರ ಸಚಿವ ಭಗವಂತ ಖೂಬಾ

ಗೊಬ್ಬರದ ವಿಚಾರದಲ್ಲಿ ರಾಜಕಾರಣ ಮಾಡುವ ಅವಶ್ಯಕತೆ ನಮಗಿಲ್ಲ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದ್ದಾರೆ.

ಮುಂದಿನ ವರ್ಷದಿಂದ ಲಿಕ್ವಿಡ್ ನ್ಯಾನೋ ಡಿಎಪಿ ಉತ್ಪಾದನೆ: ಕೇಂದ್ರ ಸಚಿವ ಭಗವಂತ ಖೂಬಾ
ಭಗವಂತ ಖೂಬಾ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Oct 27, 2021 | 3:00 PM

Share

ಬೆಂಗಳೂರು: ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಡಿಎಪಿ ರಸಗೊಬ್ಬರ ಕೊರತೆಯಾಗುವುದಿಲ್ಲ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಹೇಳಿದ್ದಾರೆ. 5 ಲಕ್ಷ ಟನ್ ಗೊಬ್ಬರ ಉತ್ಪಾದಿಸಲು ಕಾರ್ಖಾನೆಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. ಕರ್ನಾಟಕದಲ್ಲಿ ಪ್ರಸ್ತುತ 22.33 ಲಕ್ಷ ಟನ್ ಯೂರಿಯಾ ಲಭ್ಯವಿದೆ. ನವೆಂಬರ್ ತಿಂಗಳಿಗೆ ಬೇಕಿರುವಷ್ಟು ಗೊಬ್ಬರ ಸರಬರಾಜು ಮಾಡುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ಗೊಬ್ಬರದ ವಿಚಾರದಲ್ಲಿ ರಾಜಕಾರಣ ಮಾಡುವ ಅವಶ್ಯಕತೆ ನಮಗಿಲ್ಲ. ರಾಜ್ಯದಲ್ಲಿ ರಸಗೊಬ್ಬರ ಕೊರತೆಯಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಈ ಹಿಂದೆ ಕೇಂದ್ರದಲ್ಲಿ ಬೇಜವಾಬ್ದಾರಿ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ರಾಜ್ಯಗಳಿಗೆ ಗೊಬ್ಬರ ಪೂರೈಕೆಯಲ್ಲಿ ಹಲವು ಸಮಸ್ಯೆಗಳು ಎದುರಾಗುತ್ತಿದ್ದವು. ಸಿದ್ದರಾಮಯ್ಯ ಅದನ್ನು ನೆನಪು ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.

ರಾಜಕಾರಿಣಿಗಳ ಗಾಳಿಮಾತಿನಿಂದ ರೈತರು ಆತಂಕಕ್ಕೀಡಾದರೆ ಮುಂದಿನ ದಿನಗಳಲ್ಲಿ ಕೃತಕ ಅಭಾವ ಸೃಷ್ಟಿ ಆಗುವ ಅಪಾಯವಿದೆ. ಹೀಗಾಗಿ ಸಿದ್ದರಾಮಯ್ಯ ಅವರು ಜನರಲ್ಲಿ ಭಯ ಹುಟ್ಟಿಸುವ ಕೆಲಸ ಮಾಡಬಾರದು ಎಂದರು. ಹಾನಗಲ್ ಮತ್ತು ಸಿಂದಗಿಯಲ್ಲಿ ಕಾಂಗ್ರೆಸ್​ಗೆ ಸೋಲಿನ ಆತಂಕ ಎದುರಾಗಿದೆ. ಹೀಗಾಗಿಯೇ ಸೋಲುವ ಹತಾಶೆಯಿಂದ ಸಿದ್ದರಾಮಯ್ಯ ಮತ ಗಳಿಸಲು ಪ್ರಯತ್ನ ಮಾಡುತ್ತಿದ್ದಾರೆ. ಇಂಥ ಪ್ರಯತ್ನಗಳಿಗೆ ಹಾನಗಲ್ ಮತ್ತು ಸಿಂದಗಿಯ ಜನರು ಗಮನಕೊಡಬಾರದು ಎಂದು ಸಲಹೆ ಮಾಡಿದರು.

ಭಾರತದಲ್ಲಿ ಮುಂದಿನ ವರ್ಷ ಲಿಕ್ವಿಡ್ ನ್ಯಾನೋ ಡಿಎಪಿ ತಯಾರಾಗಲಿದೆ. ಕಳೆದ ಜೂನ್​ನಿಂದೀಚೆಗೆ ಹಲವು ಕ್ರಾಂತಿಕಾರಿ ಹೆಜ್ಜೆಗಳನ್ನು ಇಡಲಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲಬೆಲೆಗಳು ಹೆಚ್ಚಾಗಿವೆ. ಯುಪಿಎ ಸರ್ಕಾರ ಮಾಡಿದ್ದ ಆಯಿಲ್ ಬಾಂಡ್ ಸಾಲವನ್ನು ನಮ್ಮ ಸರ್ಕಾರ ತೀರಿಸಿದೆ ಎಂದು ವಿವರಿಸಿದರು.

ಬೆಲೆ ಏರಿಕೆ ಕುರಿತು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಹಣದುಬ್ಬರ ಎಷ್ಟು ಹೆಚ್ಚಾಗಿದೆ ಎನ್ನುವುದನ್ನು ಮೊದಲು ಗಮನಿಸಬೇಕು. ಕಾಂಗ್ರೆಸ್​ಗೆ ಮಾತ್ರ ಬೆಲೆ ಏರಿಕೆ ಬಗ್ಗೆ ಆಕ್ರೋಶವಿದೆ. ಜನರಲ್ಲಿ ಎಲ್ಲಿದೆ ಬೆಲೆ ಏರಿಕೆಯ ಆಕ್ರೋಶ? ಜನರಿಗೆ ಬೆಲೆ ಏರಿಕೆಯಿಂದ ಹೊರೆಯೇ ಆಗ್ತಿಲ್ಲ ಎಂದು ಉತ್ತರಿಸಿದರು.

ಇದನ್ನೂ ಓದಿ: ಏಳು ವರ್ಷದಲ್ಲಿ ಎಲ್ಲಿಯೂ ಗೊಬ್ಬರ ಕೊರತೆಯಾಗಿಲ್ಲ; ಕೊರತೆ ಇದ್ದ ಕಡೆ ಗೊಬ್ಬರ ಪೂರೈಸುತ್ತೇವೆ ಇದನ್ನೂ ಓದಿ: ಕರ್ನಾಟಕದಲ್ಲಿ ಯಾವುದೇ ರೀತಿ ರಸಗೊಬ್ಬರ ಕೊರತೆ ಇಲ್ಲ: ಕೃಷಿ ಇಲಾಖೆ ಮಾಧ್ಯಮ ಪ್ರಕಟಣೆ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ