AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ವರ್ಷದಿಂದ ಲಿಕ್ವಿಡ್ ನ್ಯಾನೋ ಡಿಎಪಿ ಉತ್ಪಾದನೆ: ಕೇಂದ್ರ ಸಚಿವ ಭಗವಂತ ಖೂಬಾ

ಗೊಬ್ಬರದ ವಿಚಾರದಲ್ಲಿ ರಾಜಕಾರಣ ಮಾಡುವ ಅವಶ್ಯಕತೆ ನಮಗಿಲ್ಲ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದ್ದಾರೆ.

ಮುಂದಿನ ವರ್ಷದಿಂದ ಲಿಕ್ವಿಡ್ ನ್ಯಾನೋ ಡಿಎಪಿ ಉತ್ಪಾದನೆ: ಕೇಂದ್ರ ಸಚಿವ ಭಗವಂತ ಖೂಬಾ
ಭಗವಂತ ಖೂಬಾ
TV9 Web
| Edited By: |

Updated on: Oct 27, 2021 | 3:00 PM

Share

ಬೆಂಗಳೂರು: ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಡಿಎಪಿ ರಸಗೊಬ್ಬರ ಕೊರತೆಯಾಗುವುದಿಲ್ಲ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಹೇಳಿದ್ದಾರೆ. 5 ಲಕ್ಷ ಟನ್ ಗೊಬ್ಬರ ಉತ್ಪಾದಿಸಲು ಕಾರ್ಖಾನೆಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. ಕರ್ನಾಟಕದಲ್ಲಿ ಪ್ರಸ್ತುತ 22.33 ಲಕ್ಷ ಟನ್ ಯೂರಿಯಾ ಲಭ್ಯವಿದೆ. ನವೆಂಬರ್ ತಿಂಗಳಿಗೆ ಬೇಕಿರುವಷ್ಟು ಗೊಬ್ಬರ ಸರಬರಾಜು ಮಾಡುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ಗೊಬ್ಬರದ ವಿಚಾರದಲ್ಲಿ ರಾಜಕಾರಣ ಮಾಡುವ ಅವಶ್ಯಕತೆ ನಮಗಿಲ್ಲ. ರಾಜ್ಯದಲ್ಲಿ ರಸಗೊಬ್ಬರ ಕೊರತೆಯಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಈ ಹಿಂದೆ ಕೇಂದ್ರದಲ್ಲಿ ಬೇಜವಾಬ್ದಾರಿ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ರಾಜ್ಯಗಳಿಗೆ ಗೊಬ್ಬರ ಪೂರೈಕೆಯಲ್ಲಿ ಹಲವು ಸಮಸ್ಯೆಗಳು ಎದುರಾಗುತ್ತಿದ್ದವು. ಸಿದ್ದರಾಮಯ್ಯ ಅದನ್ನು ನೆನಪು ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.

ರಾಜಕಾರಿಣಿಗಳ ಗಾಳಿಮಾತಿನಿಂದ ರೈತರು ಆತಂಕಕ್ಕೀಡಾದರೆ ಮುಂದಿನ ದಿನಗಳಲ್ಲಿ ಕೃತಕ ಅಭಾವ ಸೃಷ್ಟಿ ಆಗುವ ಅಪಾಯವಿದೆ. ಹೀಗಾಗಿ ಸಿದ್ದರಾಮಯ್ಯ ಅವರು ಜನರಲ್ಲಿ ಭಯ ಹುಟ್ಟಿಸುವ ಕೆಲಸ ಮಾಡಬಾರದು ಎಂದರು. ಹಾನಗಲ್ ಮತ್ತು ಸಿಂದಗಿಯಲ್ಲಿ ಕಾಂಗ್ರೆಸ್​ಗೆ ಸೋಲಿನ ಆತಂಕ ಎದುರಾಗಿದೆ. ಹೀಗಾಗಿಯೇ ಸೋಲುವ ಹತಾಶೆಯಿಂದ ಸಿದ್ದರಾಮಯ್ಯ ಮತ ಗಳಿಸಲು ಪ್ರಯತ್ನ ಮಾಡುತ್ತಿದ್ದಾರೆ. ಇಂಥ ಪ್ರಯತ್ನಗಳಿಗೆ ಹಾನಗಲ್ ಮತ್ತು ಸಿಂದಗಿಯ ಜನರು ಗಮನಕೊಡಬಾರದು ಎಂದು ಸಲಹೆ ಮಾಡಿದರು.

ಭಾರತದಲ್ಲಿ ಮುಂದಿನ ವರ್ಷ ಲಿಕ್ವಿಡ್ ನ್ಯಾನೋ ಡಿಎಪಿ ತಯಾರಾಗಲಿದೆ. ಕಳೆದ ಜೂನ್​ನಿಂದೀಚೆಗೆ ಹಲವು ಕ್ರಾಂತಿಕಾರಿ ಹೆಜ್ಜೆಗಳನ್ನು ಇಡಲಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲಬೆಲೆಗಳು ಹೆಚ್ಚಾಗಿವೆ. ಯುಪಿಎ ಸರ್ಕಾರ ಮಾಡಿದ್ದ ಆಯಿಲ್ ಬಾಂಡ್ ಸಾಲವನ್ನು ನಮ್ಮ ಸರ್ಕಾರ ತೀರಿಸಿದೆ ಎಂದು ವಿವರಿಸಿದರು.

ಬೆಲೆ ಏರಿಕೆ ಕುರಿತು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಹಣದುಬ್ಬರ ಎಷ್ಟು ಹೆಚ್ಚಾಗಿದೆ ಎನ್ನುವುದನ್ನು ಮೊದಲು ಗಮನಿಸಬೇಕು. ಕಾಂಗ್ರೆಸ್​ಗೆ ಮಾತ್ರ ಬೆಲೆ ಏರಿಕೆ ಬಗ್ಗೆ ಆಕ್ರೋಶವಿದೆ. ಜನರಲ್ಲಿ ಎಲ್ಲಿದೆ ಬೆಲೆ ಏರಿಕೆಯ ಆಕ್ರೋಶ? ಜನರಿಗೆ ಬೆಲೆ ಏರಿಕೆಯಿಂದ ಹೊರೆಯೇ ಆಗ್ತಿಲ್ಲ ಎಂದು ಉತ್ತರಿಸಿದರು.

ಇದನ್ನೂ ಓದಿ: ಏಳು ವರ್ಷದಲ್ಲಿ ಎಲ್ಲಿಯೂ ಗೊಬ್ಬರ ಕೊರತೆಯಾಗಿಲ್ಲ; ಕೊರತೆ ಇದ್ದ ಕಡೆ ಗೊಬ್ಬರ ಪೂರೈಸುತ್ತೇವೆ ಇದನ್ನೂ ಓದಿ: ಕರ್ನಾಟಕದಲ್ಲಿ ಯಾವುದೇ ರೀತಿ ರಸಗೊಬ್ಬರ ಕೊರತೆ ಇಲ್ಲ: ಕೃಷಿ ಇಲಾಖೆ ಮಾಧ್ಯಮ ಪ್ರಕಟಣೆ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ