CAA ವಿರುದ್ಧ ಸಿದ್ದರಾಮಯ್ಯ ಬೇಕಿದ್ದರೆ ಹಕ್ಕುಚ್ಯುತಿ ಮಂಡಿಸಲಿ: ಸಿ.ಸಿ.ಪಾಟೀಲ್

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯಿದೆಯಲ್ಲಿ ಯಾವ ನ್ಯೂನತೆ ಬಗ್ಗೆ ಮಾಜಿ ಸಿ ಎಂ ಸಿದ್ದರಾಮಯ್ಯನವರಿಗೆ ಯಾವ ಆಕ್ಷೇಪವಿದೆಯೋ ಗೊತ್ತಿಲ್ಲ. ಸಿದ್ದರಾಮಯ್ಯನವರಿಗೆ ಹಕ್ಕುಚ್ಯುತಿ ಮಂಡಿಸುವ ಹಕ್ಕು ಇದೆ. ಬೇಕಿದ್ದರೆ ಸಿದ್ದರಾಮಯ್ಯ ಹಕ್ಕುಚ್ಯುತಿಯನ್ನು ಮಂಡನೆ ಮಾಡಲಿ. ಆದರೆ ರಾಜ್ಯದ ಮುಗ್ಧ ಜನರ ದಾರಿ ತಪ್ಪಿಸುವ ಕೆಲಸ ಮಾಡಬಾರದು ಎಂದು ಬೆಂಗಳೂರಿನ BJP ಕಚೇರಿಯಲ್ಲಿ ಸಚಿವ ಸಿ.ಸಿ. ಪಾಟೀಲ್ ಹೇಳಿದ್ದಾರೆ. ಪ್ರತಿಪಕ್ಷ ನಾಯಕರನ್ನು ಮಂಗಳೂರಿಗೆ ಹೋಗದಂತೆ ತಡೆದಿದ್ದು ಏಕೆ ಎಂಬ ಸಿದ್ದರಾಮಯ್ಯ ಪ್ರಶ್ನೆಗೆ ನಾನು ಈಗ ಉತ್ತರಿಸಲು ಹೋಗುವುದಿಲ್ಲ. ರಾಜ್ಯ ಸಹಜ […]

CAA ವಿರುದ್ಧ ಸಿದ್ದರಾಮಯ್ಯ ಬೇಕಿದ್ದರೆ ಹಕ್ಕುಚ್ಯುತಿ ಮಂಡಿಸಲಿ: ಸಿ.ಸಿ.ಪಾಟೀಲ್
ಸಾಧು ಶ್ರೀನಾಥ್​

Updated on: Dec 21, 2019 | 2:43 PM

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯಿದೆಯಲ್ಲಿ ಯಾವ ನ್ಯೂನತೆ ಬಗ್ಗೆ ಮಾಜಿ ಸಿ ಎಂ ಸಿದ್ದರಾಮಯ್ಯನವರಿಗೆ ಯಾವ ಆಕ್ಷೇಪವಿದೆಯೋ ಗೊತ್ತಿಲ್ಲ. ಸಿದ್ದರಾಮಯ್ಯನವರಿಗೆ ಹಕ್ಕುಚ್ಯುತಿ ಮಂಡಿಸುವ ಹಕ್ಕು ಇದೆ. ಬೇಕಿದ್ದರೆ ಸಿದ್ದರಾಮಯ್ಯ ಹಕ್ಕುಚ್ಯುತಿಯನ್ನು ಮಂಡನೆ ಮಾಡಲಿ. ಆದರೆ ರಾಜ್ಯದ ಮುಗ್ಧ ಜನರ ದಾರಿ ತಪ್ಪಿಸುವ ಕೆಲಸ ಮಾಡಬಾರದು ಎಂದು ಬೆಂಗಳೂರಿನ BJP ಕಚೇರಿಯಲ್ಲಿ ಸಚಿವ ಸಿ.ಸಿ. ಪಾಟೀಲ್ ಹೇಳಿದ್ದಾರೆ.

ಪ್ರತಿಪಕ್ಷ ನಾಯಕರನ್ನು ಮಂಗಳೂರಿಗೆ ಹೋಗದಂತೆ ತಡೆದಿದ್ದು ಏಕೆ ಎಂಬ ಸಿದ್ದರಾಮಯ್ಯ ಪ್ರಶ್ನೆಗೆ ನಾನು ಈಗ ಉತ್ತರಿಸಲು ಹೋಗುವುದಿಲ್ಲ. ರಾಜ್ಯ ಸಹಜ ಪರಿಸ್ಥಿತಿಗೆ ಮರಳುತ್ತಿದೆ. ಜವಾಬ್ದಾರಿಯುತ ಮಂತ್ರಿ ಸ್ಥಾನದಲ್ಲಿರುವ ಕಾರಣಕ್ಕೆ ನಾನು ಬೇರೆ ಪಕ್ಷದವರಂತೆ ಮನಸ್ಸಿಗೆ ಬಂದಂತೆ ಹೇಳಿಕೆ ನೀಡಲು ಸಾಧ್ಯವಿಲ್ಲ ಎಂದು ಸಚಿವ ಸಿ.ಸಿ. ಪಾಟೀಲ್ ತಿಳಿಸಿದರು.

Published On - 2:26 pm, Sat, 21 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us