AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಾಟ: ಮುಂದಿನ ನಾಲ್ಕು ವಾರ ಜಾಗೃತರಾಗಿರಿ- ಭಾರತೀಯ ವಿಜ್ಞಾನ ಸಂಸ್ಥೆ ಸೂಚನೆ

ಕರ್ನಾಟಕದಲ್ಲಿ ಕೊವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಭಾರತೀಯ ವಿಜ್ಞಾನ ಸಂಸ್ಥೆ ಅಧ್ಯಯನ ನಡೆಸಿದ್ದು ಮುಂದಿನ ನಾಲ್ಕು ವಾರದವರೆಗೆ ಜಾಗರೂಕರಾಗಿರಿ ಎಂದು ಸೂಚನೆ ನೀಡಿದೆ. ಈ ಕುರಿತಂತೆ ತಾಂತ್ರಿಕ ಸಲಹಾ ಸಮಿತಿ ಸದಸ್ಯ ಡಾ. ಗಿರಿಧರ್​ ಬಾಬು ಮಾಹಿತಿ ಹಂಚಿಕೊಂಡಿದ್ದಾರೆ.

ಕೊರೊನಾ ಕಾಟ: ಮುಂದಿನ ನಾಲ್ಕು ವಾರ ಜಾಗೃತರಾಗಿರಿ- ಭಾರತೀಯ ವಿಜ್ಞಾನ ಸಂಸ್ಥೆ ಸೂಚನೆ
ಸೌಜನ್ಯ : ಅಂತರ್ಜಾಲ
shruti hegde
|

Updated on: Apr 05, 2021 | 12:31 PM

Share

ಬೆಂಗಳೂರು: ನಗರದಲ್ಲಿ ದಿನ ಸಾಗುತ್ತಿದ್ದಂತೆ ಕೊರೊನಾ ಪ್ರಕರಣಗಳ ಸಂಖ್ಯೆ ಏರುತ್ತಲೇ ಇದೆ. ನಗರದಲ್ಲಿ 198 ವಾರ್ಡ್​ಗಳ ಪೈಕಿ 150 ವಾರ್ಡ್​ಗಳಲ್ಲಿ ತಲಾ 50 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಇನ್ನಿತರ ವಾರ್ಡ್​ಗಳಲ್ಲಿ 50ಕ್ಕಿಂತ ಕಡಿಮೆ ಸೋಂಕಿತರು ಇದ್ದಾರೆ. ನಗರದಲ್ಲಿ ಒಟ್ಟು 28,098 ಸಕ್ರಿಯ ಪ್ರಕರಣಗಳಿದ್ದು, ಇದೆ ರೀತಿ ಮುಂದುವರೆದರೆ ಮುಂದಿನ ಐದಾರು ದಿನದಲ್ಲಿ ಸೋಂಕಿತರ ಸಂಖ್ಯೆ ದುಪ್ಪಟ್ಟು ಆಗುವ ಸಾಧ್ಯತೆ ಇದೆ ಎಂದು ಬಿಬಿಎಂಪಿ ಅಂದಾಜಿಸಿದೆ.

ಮಹಾರಾಷ್ಟ್ರದಲ್ಲಿ ಈಗಾಗಲೇ ಕೊರೊನಾ ಪ್ರಕರಣ ಸಂಖ್ಯೆ ದಿನ ಸಾಗುತ್ತಿದ್ದಂತೆ ಹೆಚ್ಚುತ್ತಲೇ ಇದೆ. ಕರ್ನಾಟಕ ಎರಡನೇ ಮಹಾಷ್ಟ್ರ ಆಗುತ್ತಾ? ಎಂಬ ಪ್ರಶ್ನೆ ಈಗಾಗಲೇ ಎದುರಾಗಿದೆ. ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ವಿಜ್ಞಾನ ಸಂಸ್ಥೆ ಅಧ್ಯಯನ ನಡೆಸಿದೆ ಎಂದು ತಾಂತ್ರಿಕ ಸಲಹಾ ಸಮಿತಿಯ ಸದಸ್ಯ ಡಾ. ಗಿರಿಧರ್​ ಬಾಬು ಟಿವಿ9ಗೆ ಮಾಹಿತಿ ನೀಡಿದ್ದಾರೆ.

ಅಧ್ಯಯನದ ಪ್ರಕಾರ, ಮುಂಬರುವ ದಿನಗಳಲ್ಲಿ ಕೊವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂಬುದು ತಿಳಿದು ಬಂದಿದೆ. ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿಯೇ ಪ್ರತಿ ದಿನ ಆರು ಸಾವಿರಕ್ಕೂ ಹೆಚ್ಚು ಕೊವಿಡ್ ಕೇಸ್ ದಾಖಲಾಗಲಿವೆ. ಕಳೆದ ಎರಡು ವಾರಗಳಿಂದ ಪ್ರಕರಣಗಳ ಸಂಖ್ಯೆ ಏರುತ್ತಲೇ ಇದೆ. ಇಪ್ಪತ್ತು ದಿನದಲ್ಲಿ ಸೋಂಕಿತರ ಸಂಖ್ಯೆ ಗರಿಷ್ಟ ಮಟ್ಟಕ್ಕೆ ತಲುಪಲಿದೆ. ಮುಂದಿನ ನಾಲ್ಕು ವಾರ ಎಚ್ಚರವಹಿಸಿ ಎಂದು ಭಾರತೀಯ ವಿಜ್ಞಾನ ಸಂಸ್ಥೆ ಸೂಚನೆ ನೀಡಿದೆ.

ನಾಲ್ಕು ಗೋಡೆ ಮಧ್ಯೆ ಹೆಚ್ಚು ಜನ ಸೇರುವುದನ್ನು ನಿಯಂತ್ರಿಸಬೇಕು. ಮದುವೆ, ಶುಭ ಸಮಾರಂಭ, ಜಿಮ್, ಸ್ವಿಮಿಂಗ್ ಪೂಲ್, ಮಾರ್ಕೆಟ್, ಚಿತ್ರಮಂದಿರ ಇಂತಹ ಸ್ಥಳದಲ್ಲಿ ಸೋಂಕು ಹರಡುವ ಸಾಧ್ಯತೆ ಇದೆ. ಆಸ್ಪತ್ರೆಯಲ್ಲಿ ದಾಖಲಾಗುತ್ತಿರುವ ಸಂಖ್ಯೆ ಹೆಚ್ಚುತ್ತಿದ್ದು, ಬೆಡ್​ಗಳ ಸಮಸ್ಯೆ ಉಂಟಾಗುತ್ತಿದೆ ಎಂದು ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ.

ಮುಂದಿನ ನಾಲ್ಕು ವಾರ ಜಾಗೃತರಾಗಿಬೇಕು. ಆರು ಸಾವಿರ ಕೇಸ್ ಬರೋವಾಗ ಶೇ 10 ಮಂದಿ ಗಂಭೀರ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಇದೆ. ಶೇ 10 ರಷ್ಟು ಜನರಿಗೆ ಸೋಂಕು ಬಹಿರಂಗವಾಗಿ ಗೋಚರಿಸಲಿದೆ. ಹೀಗಾಗಿ ಸರ್ಕಾರ ಕೂಡಲೇ ಆಸ್ಪತ್ರೆಗಳಲ್ಲಿ ಬೆಡ್​ಗಳ ವ್ಯವಸ್ಥೆ ಮಾಡಿಕೊಳ್ಳಬೇಕು. ಎಲ್ಲರೂ ಕಡ್ಡಾಯವಾಗಿ ಲಸಿಕೆ ಪಡೆದು, ಕೊರೊನಾ ನಿಯಂತ್ರಣ ಕ್ರಮಗಳನ್ನು ಪಾಲಿಸಲು ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Ramesh Jarkiholi Corona Positive​: ರಮೇಶ್​ ಜಾರಕಿಹೊಳಿಗೆ ಕೊರೊನಾ ಪಾಸಿಟಿವ್​; ಗೋಕಾಕ್​ ಆರೋಗ್ಯಾಧಿಕಾರಿ ಸ್ಪಷ್ಟನೆ

ಫ್ರಂಟ್​ಲೈನ್​ ವಾರಿಯರ್ಸ್​ ಅಲ್ಲದಿದ್ದರೂ ಕೊವಿಡ್​ ಲಸಿಕೆಗೆ ಹೆಸರು ನೋಂದಣಿ; ಪ್ರಕ್ರಿಯೆಯನ್ನೇ ತಡೆಹಿಡಿಯಲು ರಾಜ್ಯಸರ್ಕಾರಗಳಿಗೆ ಸೂಚನೆ

Follow Us
shruti hegde
shruti hegde
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ