AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೂರ್ಗ್, ಚಿಕ್ಕಮಗಳೂರು ಕಾಫಿ, ಮೈಸೂರು ಸೋಪ್, ಸಿಲ್ಕ್, ಅಗರಬತ್ತಿ ಸೇರಿ ಕರ್ನಾಟಕದ 10 ವಿಶೇಷ ಅಂಚೆ ಲಕೋಟೆ ಬಿಡುಗಡೆ

ಈ-ಪೋಸ್ಟ್ ಆಫೀಸ್​ಗಳಲ್ಲಿ (www.indiapost.gov.in) ಕರ್ನಾಟಕದ 10 ವಿಶೇಷ ಭೌಗೋಳಿಕ ಉತ್ಪನ್ನಗಳ ವಿಶೇಷ ಅಂಚೆ ಲಕೋಟೆ ಲಭ್ಯವಿರುತ್ತದೆ.

ಕೂರ್ಗ್, ಚಿಕ್ಕಮಗಳೂರು ಕಾಫಿ, ಮೈಸೂರು ಸೋಪ್, ಸಿಲ್ಕ್, ಅಗರಬತ್ತಿ ಸೇರಿ ಕರ್ನಾಟಕದ 10 ವಿಶೇಷ ಅಂಚೆ ಲಕೋಟೆ ಬಿಡುಗಡೆ
ಭಾರತೀಯ ಅಂಚೆ
TV9 Web
| Edited By: |

Updated on:Aug 31, 2021 | 9:58 PM

Share

ಬೆಂಗಳೂರು: ಕರ್ನಾಟಕದ ವಿವಿಧ ಪ್ರಾದೇಶಿಕತೆ  ಮತ್ತು ಭೌಗೋಳಿಕತೆಗೆ ಸಂಬಂಧಿಸಿ ವಿಶೇಷತೆಗಳನ್ನು ಹೊಂದಿರುವ (ಪ್ರಾದೇಶಿಕ ಸೂಚ್ಯಂಕ)  ಉತ್ಪನ್ನಗಳ ಕುರಿತು ಜಾಗೃತಿ ಮೂಡಿಸಲು ಹತ್ತು ಅಂಚೆ ಲಕೋಟೆಗಳನ್ನು ಬಿಡುಗಡೆ ಮಾಡಲಾಗಿದೆ. ಕೂರ್ಗ್ ಅರೇಬಿಕಾ ಕಾಫಿ, ಚಿಕ್ಕಮಗಳೂರು ಅರೇಬಿಕಾ ಕಾಫಿ, ಬಾಬಾಬುಡನ್​ಗಿರಿ ಕಾಫಿ, ಮೈಸೂರು ಸಿಲ್ಕ್, ದೇವನಹಳ್ಳಿ ಪೊಮೆಲೊ, ಬೆಂಗಳೂರು ಬ್ಲೂ ಗ್ರೇಪ್ಸ್, ಬೆಂಗಳೂರು ರೋಜ್ ಆನಿಯನ್, ಮೈಸೂರು ಸ್ಯಾಂಡಲ್ ಸೋಪ್, ಕೊಲ್ಹಾಪುರಿ ಚಪ್ಪಲ್, ಮೈಸೂರು ಅಗರಬತ್ತಿಗಳ ವಿಶೇಷ ಅಂಚೆ ಲಕೋಟೆಗಳನ್ನು ಇಂದು (ಆಗಸ್ಟ್ 31) ಬಿಡುಗಡೆ ಮಾಡಲಾಗಿದೆ.

ಈ ಅಂಚೆ ಲಕೋಟೆಗಳು ಫಿಲಾಟೆಲಿ ಬ್ಯೂರೋ ಬೆಂಗಳೂರು, ಜಿ.ಪಿ.ಓ, ಮಂಗಳೂರು ಮುಖ್ಯ ಅಂಚೆ ಕಚೇರಿ, ಮೈಸೂರು ಅಂಚೆ ಕಚೇರಿ, ಬೆಳಗಾವಿ ಮುಖ್ಯ ಅಂಚೆ ಕಚೇರಿ ಮತ್ತು ಈ-ಪೋಸ್ಟ್ ಆಫೀಸ್​ಗಳಲ್ಲಿ (www.indiapost.gov.in) ಕರ್ನಾಟಕದ 10 ವಿಶೇಷ ಭೌಗೋಳಿಕ ಉತ್ಪನ್ನಗಳ ವಿಶೇಷ ಅಂಚೆ ಲಕೋಟೆ ಲಭ್ಯವಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಕರ್ನಾಟಕ ವೃತ್ತದ ಮುಖ್ಯ ಪೋಸ್ಟ್ ಮಾಸ್ಟರ್ ಶಾರದಾ ಸಂಪತ್, ಕರ್ನಾಟಕ ಸರ್ಕಾರದ ತೋಟಗಾರಿಕಾ ಸಚಿವ ಮುನಿರತ್ನ ನಾಯ್ಡು ಅವರು ಈ ಅಂಚೆ ಲಕೋಟೆಗಳನ್ನುಇಂದಷ್ಟೇ (ಆಗಸ್ಟ್ 31) ಬಿಡುಗಡೆ ಮಾಡಿದ್ದಾರೆ. ಕರ್ನಾಟಕದ ಉತ್ಪನ್ನಗಳಿಗೆ ಸಂಬಂಧಿಸಿದ 10 ವಿಶೇಷ ಲಕೋಟೆಗಳನ್ನು ಬಿಡುಗಡೆ ಮಾಡುತ್ತಿರುವುದು ಇದೇ ಮೊದಲು ಎಂದು ಹೇಳಲಾಗಿದೆ. ಅಲ್ಲದೇ ಕರ್ನಾಟಕದ ವಿಶಿಷ್ಟ ಉತ್ಪನ್ನಗಳು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿಗೆ ಬರಲು ಈ ಅಂಚೆ ಲಕೋಟೆಗಳು ಸಹಕಾರಿಯಾಗಲಿವೆ

ಇದನ್ನೂ ಓದಿ: 

India Pak: ಭಾರತ ಪಾಕಿಸ್ತಾನದ ನಡುವೆ ಶುರುವಾಗಿದೆ ಅಕ್ಕಿಯ ಕಲಹ; ಇಲ್ಲಿದೆ ವಿವರ

ಕೊರೊನಾ ಕಾಲದಲ್ಲಿ ರೈತರಿಗೆ ಅಂಚೆ ಇಲಾಖೆ ಸಾಥ್​​; ಕೋಲಾರದ ಮಾವಿನ ಹಣ್ಣನ್ನು ಆನ್​ಲೈನ್ ಮೂಲಕ ಕೊಳ್ಳಲು ಅವಕಾಶ

(Indian Postal Department releases 10 special Postal envelope including Coorg and Chikkamagaluru Coffee Mysore Soap Silk Agarbatti)

Published On - 5:09 pm, Tue, 31 August 21

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ