AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೂರ್ಗ್, ಚಿಕ್ಕಮಗಳೂರು ಕಾಫಿ, ಮೈಸೂರು ಸೋಪ್, ಸಿಲ್ಕ್, ಅಗರಬತ್ತಿ ಸೇರಿ ಕರ್ನಾಟಕದ 10 ವಿಶೇಷ ಅಂಚೆ ಲಕೋಟೆ ಬಿಡುಗಡೆ

ಈ-ಪೋಸ್ಟ್ ಆಫೀಸ್​ಗಳಲ್ಲಿ (www.indiapost.gov.in) ಕರ್ನಾಟಕದ 10 ವಿಶೇಷ ಭೌಗೋಳಿಕ ಉತ್ಪನ್ನಗಳ ವಿಶೇಷ ಅಂಚೆ ಲಕೋಟೆ ಲಭ್ಯವಿರುತ್ತದೆ.

ಕೂರ್ಗ್, ಚಿಕ್ಕಮಗಳೂರು ಕಾಫಿ, ಮೈಸೂರು ಸೋಪ್, ಸಿಲ್ಕ್, ಅಗರಬತ್ತಿ ಸೇರಿ ಕರ್ನಾಟಕದ 10 ವಿಶೇಷ ಅಂಚೆ ಲಕೋಟೆ ಬಿಡುಗಡೆ
ಭಾರತೀಯ ಅಂಚೆ
TV9 Web
| Updated By: guruganesh bhat|

Updated on:Aug 31, 2021 | 9:58 PM

Share

ಬೆಂಗಳೂರು: ಕರ್ನಾಟಕದ ವಿವಿಧ ಪ್ರಾದೇಶಿಕತೆ  ಮತ್ತು ಭೌಗೋಳಿಕತೆಗೆ ಸಂಬಂಧಿಸಿ ವಿಶೇಷತೆಗಳನ್ನು ಹೊಂದಿರುವ (ಪ್ರಾದೇಶಿಕ ಸೂಚ್ಯಂಕ)  ಉತ್ಪನ್ನಗಳ ಕುರಿತು ಜಾಗೃತಿ ಮೂಡಿಸಲು ಹತ್ತು ಅಂಚೆ ಲಕೋಟೆಗಳನ್ನು ಬಿಡುಗಡೆ ಮಾಡಲಾಗಿದೆ. ಕೂರ್ಗ್ ಅರೇಬಿಕಾ ಕಾಫಿ, ಚಿಕ್ಕಮಗಳೂರು ಅರೇಬಿಕಾ ಕಾಫಿ, ಬಾಬಾಬುಡನ್​ಗಿರಿ ಕಾಫಿ, ಮೈಸೂರು ಸಿಲ್ಕ್, ದೇವನಹಳ್ಳಿ ಪೊಮೆಲೊ, ಬೆಂಗಳೂರು ಬ್ಲೂ ಗ್ರೇಪ್ಸ್, ಬೆಂಗಳೂರು ರೋಜ್ ಆನಿಯನ್, ಮೈಸೂರು ಸ್ಯಾಂಡಲ್ ಸೋಪ್, ಕೊಲ್ಹಾಪುರಿ ಚಪ್ಪಲ್, ಮೈಸೂರು ಅಗರಬತ್ತಿಗಳ ವಿಶೇಷ ಅಂಚೆ ಲಕೋಟೆಗಳನ್ನು ಇಂದು (ಆಗಸ್ಟ್ 31) ಬಿಡುಗಡೆ ಮಾಡಲಾಗಿದೆ.

ಈ ಅಂಚೆ ಲಕೋಟೆಗಳು ಫಿಲಾಟೆಲಿ ಬ್ಯೂರೋ ಬೆಂಗಳೂರು, ಜಿ.ಪಿ.ಓ, ಮಂಗಳೂರು ಮುಖ್ಯ ಅಂಚೆ ಕಚೇರಿ, ಮೈಸೂರು ಅಂಚೆ ಕಚೇರಿ, ಬೆಳಗಾವಿ ಮುಖ್ಯ ಅಂಚೆ ಕಚೇರಿ ಮತ್ತು ಈ-ಪೋಸ್ಟ್ ಆಫೀಸ್​ಗಳಲ್ಲಿ (www.indiapost.gov.in) ಕರ್ನಾಟಕದ 10 ವಿಶೇಷ ಭೌಗೋಳಿಕ ಉತ್ಪನ್ನಗಳ ವಿಶೇಷ ಅಂಚೆ ಲಕೋಟೆ ಲಭ್ಯವಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಕರ್ನಾಟಕ ವೃತ್ತದ ಮುಖ್ಯ ಪೋಸ್ಟ್ ಮಾಸ್ಟರ್ ಶಾರದಾ ಸಂಪತ್, ಕರ್ನಾಟಕ ಸರ್ಕಾರದ ತೋಟಗಾರಿಕಾ ಸಚಿವ ಮುನಿರತ್ನ ನಾಯ್ಡು ಅವರು ಈ ಅಂಚೆ ಲಕೋಟೆಗಳನ್ನುಇಂದಷ್ಟೇ (ಆಗಸ್ಟ್ 31) ಬಿಡುಗಡೆ ಮಾಡಿದ್ದಾರೆ. ಕರ್ನಾಟಕದ ಉತ್ಪನ್ನಗಳಿಗೆ ಸಂಬಂಧಿಸಿದ 10 ವಿಶೇಷ ಲಕೋಟೆಗಳನ್ನು ಬಿಡುಗಡೆ ಮಾಡುತ್ತಿರುವುದು ಇದೇ ಮೊದಲು ಎಂದು ಹೇಳಲಾಗಿದೆ. ಅಲ್ಲದೇ ಕರ್ನಾಟಕದ ವಿಶಿಷ್ಟ ಉತ್ಪನ್ನಗಳು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿಗೆ ಬರಲು ಈ ಅಂಚೆ ಲಕೋಟೆಗಳು ಸಹಕಾರಿಯಾಗಲಿವೆ

ಇದನ್ನೂ ಓದಿ: 

India Pak: ಭಾರತ ಪಾಕಿಸ್ತಾನದ ನಡುವೆ ಶುರುವಾಗಿದೆ ಅಕ್ಕಿಯ ಕಲಹ; ಇಲ್ಲಿದೆ ವಿವರ

ಕೊರೊನಾ ಕಾಲದಲ್ಲಿ ರೈತರಿಗೆ ಅಂಚೆ ಇಲಾಖೆ ಸಾಥ್​​; ಕೋಲಾರದ ಮಾವಿನ ಹಣ್ಣನ್ನು ಆನ್​ಲೈನ್ ಮೂಲಕ ಕೊಳ್ಳಲು ಅವಕಾಶ

(Indian Postal Department releases 10 special Postal envelope including Coorg and Chikkamagaluru Coffee Mysore Soap Silk Agarbatti)

Published On - 5:09 pm, Tue, 31 August 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ