ಬೆಂಗಳೂರಿನಿಂದ ಹೈದರಾಬಾದ್‌ಗೆ ಇನ್ನು ಮೂರೇ ಗಂಟೆಗಳಲ್ಲಿ ಪ್ರಯಾಣ, 30 ಸಾವಿರ ಕೋಟಿ ರೂ. ವೆಚ್ಚದಲ್ಲಿ ಹೊಸ ರೈಲು ಹಳಿ ಸ್ಥಾಪನೆ

Indian Railways: ಆಧುನಿಕ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಪಿಎಂ ಗತಿ ಶಕ್ತಿ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ತಿಳಿದ ವಿಷವೇ. ಇದರ ಭಾಗವಾಗಿ, ರಸ್ತೆಗಳು, ರೈಲ್ವೆಗಳು, ವಿಮಾನಯಾನ ಮತ್ತು ಬಂದರುಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ.

ಬೆಂಗಳೂರಿನಿಂದ ಹೈದರಾಬಾದ್‌ಗೆ ಇನ್ನು ಮೂರೇ ಗಂಟೆಗಳಲ್ಲಿ ಪ್ರಯಾಣ, 30 ಸಾವಿರ ಕೋಟಿ ರೂ. ವೆಚ್ಚದಲ್ಲಿ ಹೊಸ ರೈಲು ಹಳಿ ಸ್ಥಾಪನೆ
ಬೆಂಗಳೂರಿನಿಂದ ಹೈದರಾಬಾದ್‌ಗೆ ಇನ್ನು ಮೂರೇ ಗಂಟೆಗಳಲ್ಲಿ ಪ್ರಯಾಣ, 30 ಸಾವಿರ ಕೋಟಿ ರೂ. ವೆಚ್ಚದಲ್ಲಿ ಹೊಸ ರೈಲು ಹಳಿ ಸ್ಥಾಪನೆ
Follow us
| Updated By: ಸಾಧು ಶ್ರೀನಾಥ್​

Updated on: Aug 13, 2022 | 6:55 PM

ಆಧುನಿಕ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಪಿಎಂ ಗತಿ ಶಕ್ತಿ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ತಿಳಿದ ವಿಷವೇ. ಇದರ ಭಾಗವಾಗಿ, ರಸ್ತೆಗಳು, ರೈಲ್ವೆಗಳು, ವಿಮಾನಯಾನ ಮತ್ತು ಬಂದರುಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಸುಧಾರಿತ ಸಾರಿಗೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಇದರ ಭಾಗವಾಗಿ ಭಾರತೀಯ ರೈಲ್ವೆ ಹೊಸ ಯೋಜನೆಯನ್ನು ರೂಪಿಸುತ್ತಿದೆ. ಸೆಮಿ ಹೈ ಸ್ಪೀಡ್ ಟ್ರ್ಯಾಕ್ ( high-speed rail line) ನಿರ್ಮಿಸುವ ಯೋಜನೆ ರೂಪಿಸಲಾಗುತ್ತಿದೆ.

ಈ ಯೋಜನೆಯ ಭಾಗವಾಗಿ ಸಿಕಂದರಾಬಾದ್‌ನಿಂದ ಬೆಂಗಳೂರಿಗೆ 30 ಸಾವಿರ ಕೋಟಿ ರೂ. ಅಂದಾಜು ವೆಚ್ಚದಲ್ಲಿ ರೈಲ್ವೆ ಟ್ರ್ಯಾಕ್ ನಿರ್ಮಾಣವಾಗಲಿದೆ (Hyderabad–Bengaluru high-speed rail corridor). ಈ ಹಳಿಯಲ್ಲಿ 200 ಕಿ.ಮೀ ವೇಗದಲ್ಲಿ ರೈಲು ಸಂಚರಿಸಲಿದೆ. ವಾಸ್ತವವಾಗಿ, ಸಿಕಂದರಾಬಾದ್ ಮತ್ತು ಬೆಂಗಳೂರು ನಡುವಿನ ಅಂತರವು 622 ಕಿಮೀ ಆಗಿದ್ದರೆ, ಈ ಟ್ರ್ಯಾಕ್‌ನ ಉದ್ದವು 503 ಕಿಮೀ ಆಗಿರುತ್ತದೆ. ಇದಕ್ಕಾಗಿ ಶಂಶಾಬಾದ್ ಬಳಿಯ ವಾಜನಗರ ರೈಲು ನಿಲ್ದಾಣದಿಂದ ಬೆಂಗಳೂರು ಸಮೀಪದ ಯಲಹಂಕ ನಿಲ್ದಾಣದವರೆಗೆ ಈ ಟ್ರ್ಯಾಕ್ ನಿರ್ಮಾಣವಾಗುತ್ತಿದೆ.

ಈ ಸೆಮಿ-ಹೈ ಸ್ಪೀಡ್ ಟ್ರ್ಯಾಕ್‌ಗಾಗಿ ಭಾರತೀಯ ರೈಲ್ವೆ ಪ್ರತಿ ಕಿಲೋ ಮೀಟರ್‌ಗೆ 60 ಕೋಟಿ ರೂ. ವೆಚ್ಚ ಮಾಡಲಿದೆ. ಈ ಟ್ರ್ಯಾಕ್‌ನ ಎರಡೂ ಬದಿಯಲ್ಲಿ 1.5 ಮೀಟರ್ ಉದ್ದದ ಗೋಡೆಯನ್ನೂ ನಿರ್ಮಿಸಲಾಗುವುದು. ಮತ್ತೊಂದೆಡೆ… ದೆಹಲಿ -ಮೀರತ್ ಮತ್ತು ಮುಂಬೈ-ಅಹಮದಾಬಾದ್ ನಡುವೆ ಬುಲೆಟ್ ರೈಲು ಹಳಿ ನಿರ್ಮಾಣಕ್ಕಾಗಿ ಪ್ರತಿ ಕಿಲೋ ಮೀಟರ್‌ಗೆ 300 ಕೋಟಿ ರೂ ವ್ಯಯಿಸಲಾಗುವುದು. ಪ್ರಸ್ತುತ ರೈಲ್ವೆ ವತಿಯಿಂದ ದೆಹಲಿ-ಮುಂಬೈ ಮತ್ತು ದೆಹಲಿ-ಹೌರಾ ರಸ್ತೆಗಳನ್ನು ಆಧುನೀಕರಿಸಲಾಗುತ್ತಿದೆ. ಈ ಟ್ರ್ಯಾಕ್‌ಗಳಲ್ಲಿ ರೈಲುಗಳು ಗಂಟೆಗೆ 160 ಕಿ.ಮೀ ವೇಗದಲ್ಲಿ ಚಲಿಸುತ್ತವೆ. ಪ್ರಸ್ತುತ, ಸಿಕಂದರಾಬಾದ್ ಮತ್ತು ಬೆಂಗಳೂರು ನಡುವೆ ಪ್ರತಿ ಗಂಟೆಗೆ 200 ಕಿ.ಮೀ ವೇಗದಲ್ಲಿ ಸಂಚರಿಸುವಂತೆ ಟ್ರ್ಯಾಕ್ ನಿರ್ಮಿಸಲಾಗುವುದು. ಗತಿ ಶಕ್ತಿ ಯೋಜನೆಯ ಭಾಗವಾಗಿ ಈ ಎರಡೂ ಐಟಿ ದಿಗ್ಗಜ ಪಟ್ಟಣಗಳ ನಡುವೆ ಹೈ ಸ್ಪೀಡ್ ಟ್ರ್ಯಾಕ್ ನಿರ್ಮಿಸಲು ಯೋಜಿಸಲಾಗಿದೆ (National High Speed Rail Corporation Limited).

ರೈಲ್ವೆ ವ್ಯವಸ್ಥೆಯನ್ನು ಆಧುನೀಕರಿಸುವ ಸಲುವಾಗಿ, ಭಾರತೀಯ ರೈಲ್ವೆಯು ಸುಧಾರಿತ ವ್ಯವಸ್ಥೆಯನ್ನು ಬಳಸುತ್ತದೆ. ಇದರ ಭಾಗವಾಗಿ ರೈಲುಗಳ ಸಂಪರ್ಕ ವ್ಯವಸ್ಥೆಯನ್ನು ಮೇಲ್ದರ್ಜೆಗೇರಿಸಲಾಗುವುದು. ಈ ಟ್ರ್ಯಾಕ್ ಲಭ್ಯವಾದರೆ ಕೇವಲ ಮೂರು ಗಂಟೆಗಳಲ್ಲಿ ಹೈದರಾಬಾದ್ ನಿಂದ ಬೆಂಗಳೂರು ತಲುಪಲು ಸಾಧ್ಯವಾಗಲಿದೆ ಎನ್ನಲಾಗಿದೆ. ಏತನ್ಮಧ್ಯೆ, ಭಾರತೀಯ ರೈಲ್ವೇ ಈಗಾಗಲೇ 106 ಕಿಮೀ ವೇಗದಲ್ಲಿ ಚಲಿಸಬಲ್ಲ 302 ವಂದೇ ಭಾರತ್ ಟ್ರೈನ್​ ಅನ್ನು ಲಭ್ಯಗೊಳಿಸಿದೆ ಎಂದು ತಿಳಿದುಬಂದಿದೆ. ದೆಹಲಿ ಮತ್ತು ಮೀರತ್ ನಡುವಿನ ಆರ್‌ಆರ್‌ಎಎಸ್ ಕಾರಿಡಾರ್ ಅಥವಾ ಮುಂಬೈ-ಅಹಮದಾಬಾದ್ ಬುಲೆಟ್ ಟ್ರೈನ್‌ನಂತಹ ವಯಡಕ್ಟ್‌ಗಳನ್ನು ಹೊಂದಿರುವ ಎತ್ತರದ ಮಾರ್ಗವನ್ನು ಪ್ರತಿ ಕಿಲೋಮೀಟರ್‌ಗೆ ಸುಮಾರು 300 ಕೋಟಿ ರೂಪಾಯಿ ವೆಚ್ಚ ಮಾಡಲು ನಿರ್ಧರಿಸಲಾಗಿದೆ.

To read more in Telugu Click Here

‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’