AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲು ಪ್ರಯಾಣಿಕರೇ ಗಮನಿಸಿ; ಡಾನಾ ಚಂಡಮಾರುತದಿಂದ ಕರ್ನಾಟಕದ ಈ 10 ರೈಲು ಸಂಚಾರ ರದ್ದು

ದೇಶಾದ್ಯಂತ ಹಲವು ಭಾಗಗಳಿಗೆ ಸಂಪರ್ಕಿಸುವ ಒಟ್ಟು 190ಕ್ಕೂ ಹೆಚ್ಚು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಅದರಲ್ಲಿ ಕರ್ನಾಟಕದಲ್ಲಿ ಚಲಿಸುವ 10 ರೈಲುಗಳ ಸಂಚಾರ ಕೂಡ ಸೇರಿದೆ. ಈ ಮಾರ್ಗಗಳಲ್ಲಿ ನೀವೇನಾದರೂ ಪ್ರಯಾಣಿಸಲು ಪ್ಲಾನ್ ಮಾಡಿದ್ದರೆ ಅಥವಾ ಟಿಕೆಟ್ ಬುಕ್ ಮಾಡಿದ್ದರೆ ನಿಮ್ಮ ಪ್ರಯಾಣವನ್ನು ಮುಂದೂಡುವುದು ಉತ್ತಮ.

ರೈಲು ಪ್ರಯಾಣಿಕರೇ ಗಮನಿಸಿ; ಡಾನಾ ಚಂಡಮಾರುತದಿಂದ ಕರ್ನಾಟಕದ ಈ 10 ರೈಲು ಸಂಚಾರ ರದ್ದು
ರೈಲು
ಸುಷ್ಮಾ ಚಕ್ರೆ
|

Updated on:Oct 22, 2024 | 10:34 PM

Share

ಬೆಂಗಳೂರು: ಅಕ್ಟೋಬರ್ 24ರ ರಾತ್ರಿ ಅಥವಾ ಮುಂಜಾನೆ ಒಡಿಶಾದಲ್ಲಿ ಹಾಗೂ ಪಶ್ಚಿಮ ಬಂಗಾಳದಲ್ಲಿ ಡಾನಾ ಚಂಡಮಾರುತದಿಂದ ಭಾರೀ ಭೂಕುಸಿತವಾಗುವ ನಿರೀಕ್ಷೆಯಿದೆ. ಹೀಗಾಗಿ, ಕೆಲವು ಸೂಕ್ಷ್ಮ ಮಾರ್ಗಗಳ ರೈಲು ಸಂಚಾರವನ್ನು ರೈಲ್ವೆ ಇಲಾಖೆ ರದ್ದುಗೊಳಿಸಿದೆ. ಅಕ್ಟೋಬರ್ 23ರಿಂದ 25ರವರೆಗೆ ಕರ್ನಾಟಕದ 10 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಆ ಬಗ್ಗೆ ಮಾಹಿತಿ ಇಲ್ಲಿದೆ.

ಭಾರತೀಯ ಹವಾಮಾನ ಇಲಾಖೆ (IMD) ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶವು ಅಕ್ಟೋಬರ್ 23 ರ ವೇಳೆಗೆ ತೀವ್ರ ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯಿದೆ. ಅಕ್ಟೋಬರ್ 24ರಂದು ಒಡಿಶಾ ಮತ್ತು ಪಶ್ಚಿಮ ಬಂಗಾಳ ಕರಾವಳಿಯನ್ನು ಅಪ್ಪಳಿಸುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ. ಕರಾವಳಿಯಲ್ಲಿ ಗಾಳಿಯ ವೇಗ ಗಂಟೆಗೆ 60 ಕಿಲೋಮೀಟರ್ ತಲುಪುವ ಸಾಧ್ಯತೆಯಿದೆ ಮತ್ತು ಅಕ್ಟೋಬರ್ 24ರ ರಾತ್ರಿಯಿಂದ ಅಕ್ಟೋಬರ್ 25 ರ ಬೆಳಿಗ್ಗೆ ವರೆಗೆ ಗಂಟೆಗೆ 120 ಕಿಮೀ ವೇಗದಲ್ಲಿ 100-110 ಕಿಮೀ ವೇಗದಲ್ಲಿ ಬೀಸುತ್ತದೆ ಎಂದು ಐಎಂಡಿ ತಿಳಿಸಿದೆ.

ಇದನ್ನೂ ಓದಿ: ಬಂಗಾಳ, ಒಡಿಶಾಗೆ ಅಪ್ಪಳಿಸಲಿದೆ ಡಾನಾ ಚಂಡಮಾರುತ; ಹವಾಮಾನ ಇಲಾಖೆಯಿಂದ ಹೈ ಅಲರ್ಟ್

ಡಾನಾ ಚಂಡಮಾರುತದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ರದ್ದುಗೊಂಡ ರೈಲುಗಳ ಸಂಪೂರ್ಣ ಪಟ್ಟಿಯನ್ನು ಕೆಳಗೆ ನೀಡಲಾಗಿದೆ…

ಅಕ್ಟೋಬರ್ 23ರಂದು ಕಾಮಾಕ್ಯ-ಬೆಂಗಳೂರು, ಬೆಂಗಳೂರು- ಹೌರಾ, ಹೌರಾ-ಬೆಂಗಳೂರು, ಬೆಂಗಳೂರು- ಗುವಾಹಟಿ, ಅಕ್ಟೋಬರ್ 24ರಂದು ಹೌರಾ- ಬೆಂಗಳೂರು, ಬೆಂಗಳೂರು- ಮುಜಾಫರ್​ಪುರ, ಬೆಂಗಳೂರು- ಹೌರಾ ಮಾರ್ಗದ 2 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಅಕ್ಟೋಬರ್ 25ರಂದು ಭುವನೇಶ್ವರ- ಬೆಂಗಳೂರು, ಅಕ್ಟೋಬರ್ 26ರಂದು ಬೆಂಗಳೂರು- ಕಾಮಾಕ್ಯ ಮಾರ್ಗದ ರೈಲುಗಳ ಸಂಚಾರ ಸ್ಥಗಿತಗೊಂಡಿದೆ.

ಇನ್ನಷ್ಟು ಕರ್ನಾಟಕದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:33 pm, Tue, 22 October 24

Follow Us
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ