AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲು ಪ್ರಯಾಣಿಕರೇ ಗಮನಿಸಿ; ಡಾನಾ ಚಂಡಮಾರುತದಿಂದ ಕರ್ನಾಟಕದ ಈ 10 ರೈಲು ಸಂಚಾರ ರದ್ದು

ದೇಶಾದ್ಯಂತ ಹಲವು ಭಾಗಗಳಿಗೆ ಸಂಪರ್ಕಿಸುವ ಒಟ್ಟು 190ಕ್ಕೂ ಹೆಚ್ಚು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಅದರಲ್ಲಿ ಕರ್ನಾಟಕದಲ್ಲಿ ಚಲಿಸುವ 10 ರೈಲುಗಳ ಸಂಚಾರ ಕೂಡ ಸೇರಿದೆ. ಈ ಮಾರ್ಗಗಳಲ್ಲಿ ನೀವೇನಾದರೂ ಪ್ರಯಾಣಿಸಲು ಪ್ಲಾನ್ ಮಾಡಿದ್ದರೆ ಅಥವಾ ಟಿಕೆಟ್ ಬುಕ್ ಮಾಡಿದ್ದರೆ ನಿಮ್ಮ ಪ್ರಯಾಣವನ್ನು ಮುಂದೂಡುವುದು ಉತ್ತಮ.

ರೈಲು ಪ್ರಯಾಣಿಕರೇ ಗಮನಿಸಿ; ಡಾನಾ ಚಂಡಮಾರುತದಿಂದ ಕರ್ನಾಟಕದ ಈ 10 ರೈಲು ಸಂಚಾರ ರದ್ದು
ರೈಲು
ಸುಷ್ಮಾ ಚಕ್ರೆ
|

Updated on:Oct 22, 2024 | 10:34 PM

Share

ಬೆಂಗಳೂರು: ಅಕ್ಟೋಬರ್ 24ರ ರಾತ್ರಿ ಅಥವಾ ಮುಂಜಾನೆ ಒಡಿಶಾದಲ್ಲಿ ಹಾಗೂ ಪಶ್ಚಿಮ ಬಂಗಾಳದಲ್ಲಿ ಡಾನಾ ಚಂಡಮಾರುತದಿಂದ ಭಾರೀ ಭೂಕುಸಿತವಾಗುವ ನಿರೀಕ್ಷೆಯಿದೆ. ಹೀಗಾಗಿ, ಕೆಲವು ಸೂಕ್ಷ್ಮ ಮಾರ್ಗಗಳ ರೈಲು ಸಂಚಾರವನ್ನು ರೈಲ್ವೆ ಇಲಾಖೆ ರದ್ದುಗೊಳಿಸಿದೆ. ಅಕ್ಟೋಬರ್ 23ರಿಂದ 25ರವರೆಗೆ ಕರ್ನಾಟಕದ 10 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಆ ಬಗ್ಗೆ ಮಾಹಿತಿ ಇಲ್ಲಿದೆ.

ಭಾರತೀಯ ಹವಾಮಾನ ಇಲಾಖೆ (IMD) ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶವು ಅಕ್ಟೋಬರ್ 23 ರ ವೇಳೆಗೆ ತೀವ್ರ ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯಿದೆ. ಅಕ್ಟೋಬರ್ 24ರಂದು ಒಡಿಶಾ ಮತ್ತು ಪಶ್ಚಿಮ ಬಂಗಾಳ ಕರಾವಳಿಯನ್ನು ಅಪ್ಪಳಿಸುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ. ಕರಾವಳಿಯಲ್ಲಿ ಗಾಳಿಯ ವೇಗ ಗಂಟೆಗೆ 60 ಕಿಲೋಮೀಟರ್ ತಲುಪುವ ಸಾಧ್ಯತೆಯಿದೆ ಮತ್ತು ಅಕ್ಟೋಬರ್ 24ರ ರಾತ್ರಿಯಿಂದ ಅಕ್ಟೋಬರ್ 25 ರ ಬೆಳಿಗ್ಗೆ ವರೆಗೆ ಗಂಟೆಗೆ 120 ಕಿಮೀ ವೇಗದಲ್ಲಿ 100-110 ಕಿಮೀ ವೇಗದಲ್ಲಿ ಬೀಸುತ್ತದೆ ಎಂದು ಐಎಂಡಿ ತಿಳಿಸಿದೆ.

ಇದನ್ನೂ ಓದಿ: ಬಂಗಾಳ, ಒಡಿಶಾಗೆ ಅಪ್ಪಳಿಸಲಿದೆ ಡಾನಾ ಚಂಡಮಾರುತ; ಹವಾಮಾನ ಇಲಾಖೆಯಿಂದ ಹೈ ಅಲರ್ಟ್

ಡಾನಾ ಚಂಡಮಾರುತದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ರದ್ದುಗೊಂಡ ರೈಲುಗಳ ಸಂಪೂರ್ಣ ಪಟ್ಟಿಯನ್ನು ಕೆಳಗೆ ನೀಡಲಾಗಿದೆ…

ಅಕ್ಟೋಬರ್ 23ರಂದು ಕಾಮಾಕ್ಯ-ಬೆಂಗಳೂರು, ಬೆಂಗಳೂರು- ಹೌರಾ, ಹೌರಾ-ಬೆಂಗಳೂರು, ಬೆಂಗಳೂರು- ಗುವಾಹಟಿ, ಅಕ್ಟೋಬರ್ 24ರಂದು ಹೌರಾ- ಬೆಂಗಳೂರು, ಬೆಂಗಳೂರು- ಮುಜಾಫರ್​ಪುರ, ಬೆಂಗಳೂರು- ಹೌರಾ ಮಾರ್ಗದ 2 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಅಕ್ಟೋಬರ್ 25ರಂದು ಭುವನೇಶ್ವರ- ಬೆಂಗಳೂರು, ಅಕ್ಟೋಬರ್ 26ರಂದು ಬೆಂಗಳೂರು- ಕಾಮಾಕ್ಯ ಮಾರ್ಗದ ರೈಲುಗಳ ಸಂಚಾರ ಸ್ಥಗಿತಗೊಂಡಿದೆ.

ಇನ್ನಷ್ಟು ಕರ್ನಾಟಕದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:33 pm, Tue, 22 October 24

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ