AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲಿನಲ್ಲಿ ಲಗೇಜ್ ಕಳೆದುಕೊಂಡಿದ್ದ ಪ್ರಯಾಣಿಕಳಿಗೆ ರೈಲ್ವೆ ಇಲಾಖೆಯಿಂದ 17.5 ಲಕ್ಷ ರೂ. ಪರಿಹಾರ!

Indian Railway | 2017ರಲ್ಲಿ ಹೈದರಾಬಾದ್​ನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಶೀತಲ್ ಕುಲಕರ್ಣಿ ಎಂಬ ಮಹಿಳೆಯ ಚಿನ್ನ ಮತ್ತು ಹಣವನ್ನು ಕಳುವು ಮಾಡಲಾಗಿತ್ತು. ಅದಕ್ಕೆ ಪರಿಹಾರವಾಗಿ 17.5 ಲಕ್ಷ ರೂ. ನೀಡುವಂತೆ ಗ್ರಾಹಕರ ಆಯೋಗ ರೈಲ್ವೆ ಇಲಾಖೆಗೆ ಸೂಚಿಸಿದೆ.

ರೈಲಿನಲ್ಲಿ ಲಗೇಜ್ ಕಳೆದುಕೊಂಡಿದ್ದ ಪ್ರಯಾಣಿಕಳಿಗೆ ರೈಲ್ವೆ ಇಲಾಖೆಯಿಂದ 17.5 ಲಕ್ಷ ರೂ. ಪರಿಹಾರ!
ಭಾರತೀಯ ರೈಲ್ವೆ
TV9 Web
| Updated By: ಸುಷ್ಮಾ ಚಕ್ರೆ|

Updated on: Aug 09, 2021 | 7:55 PM

Share

ನವದೆಹಲಿ: ಹೈದರಾಬಾದ್​ನಿಂದ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ತಮ್ಮ ಚಿನ್ನದ ಸರಗಳು, ಹಣವನ್ನು ಕಳೆದುಕೊಂಡಿದ್ದರು. ಹೀಗಾಗಿ, ಆ ನಷ್ಟಕ್ಕೆ ಪರಿಹಾರವಾಗಿ ಪ್ರಯಾಣಿಕಳಿಗೆ 17.5 ಲಕ್ಷ ರೂ. ಹಣ ನೀಡಬೇಕೆಂದು ಭಾರತೀಯ ರೈಲ್ವೆಗೆ ಹೈದರಾಬಾದ್​ನ ಜಿಲ್ಲಾ ಗ್ರಾಹಕರ ಆಯೋಗ ಆದೇಶ ನೀಡಿದೆ.

2017ರಲ್ಲಿ ಹೈದರಾಬಾದ್​ನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಶೀತಲ್ ಕುಲಕರ್ಣಿ ಎಂಬ ಮಹಿಳೆಯ ಚಿನ್ನ ಮತ್ತು ಹಣವನ್ನು ಕಳುವು ಮಾಡಲಾಗಿತ್ತು. ಹೈದರಾಬಾದ್​ನಲ್ಲಿ ವಾಸವಾಗಿರುವ ಆಕೆ ಈ ಬಗ್ಗೆ ಗ್ರಾಹಕರ ಆಯೋಗದಲ್ಲಿ ದೂರು ಸಲ್ಲಿಸಿದ್ದರು. ನಾನು 15 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 3 ಲಕ್ಷ ರೂ. ಹಣವನ್ನು ಬೆಂಗಳೂರಿಗೆ ರೈಲಿನಲ್ಲಿ ತೆಗೆದುಕೊಂಡು ಹೋಗುತ್ತಿದ್ದೆ. ನಮ್ಮ ಊರಿನಲ್ಲಿ ಎಂಗೇಜ್​ಮೆಂಟ್​ ಇದ್ದುದರಿಂದ ಚಿನ್ನ ಹಾಗೂ ಹಣವನ್ನು ತೆಗೆದುಕೊಂಡು ಹೋಗುತ್ತಿದ್ದೆ ಎಂದು ಶೀತಲ್ ಹೇಳಿದ್ದಾರೆ.

ನಿಮ್ಮ ಲಗೇಜುಗಳಿಗೆ ನೀವೇ ಜವಾಬ್ದಾರರು ಎಂದು ರೈಲ್ವೆ ಅಧಿಕಾರಿಗಳು ಈ ಕುರಿತು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಹೀಗಾಗಿ, ಗ್ರಾಹಕರ ಹಕ್ಕುಗಳ ಆಯೋಗಕ್ಕೆ ಶೀತಲ್ ಕುಲಕರ್ಣಿ ದೂರು ನೀಡಿದ್ದರು. ಅದರಂತೆ ಆಯೋಗವು ಆ ಪ್ರಯಾಣಿಕಳಿಗೆ ಪರಿಹಾರವಾಗಿ ಆಕೆ ಕಳೆದುಕೊಂಡ ಚಿನ್ನಕ್ಕೆ 14,01,078 ರೂ. ಮತ್ತು ಬೆಳ್ಳಿಯ ವಸ್ತುಗಳಿಗೆ 50,000 ರೂ. ಸೇರಿದಂತೆ ಆಕೆಯ ಮಾನಸಿಕ ಒತ್ತಡ ಹಾಗೂ ಕಾನೂನಿನ ಖರ್ಚಿಗೆ 5,000 ರೂ. ಜೊತೆಗೆ ಆಕೆ ಕಳೆದುಕೊಂಡ 3 ಲಕ್ಷ ರೂ. ಹಣವನ್ನು ಸೇರಿಸಿ ನೀಡಬೇಕೆಂದು ಆದೇಶಿಸಿದೆ.

2017ರ ಆಗಸ್ಟ್​ 12ರಂದು ಶೀತಲ್ ತನ್ನ ಕುಟುಂಬಸ್ಥರೊಂದಿಗೆ ಕಚೇಗುಡ- ಯಶವಂತಪುರ ಎ್ಸ್​ಪ್ರೆಸ್​ ರೈಲಿನಲ್ಲಿ ಬೆಂಗಳೂರಿಗೆ ಹೊರಟಿದ್ದರು. ಮನೆಗೆ ಹೋಗಿ ನೋಡಿದಾಗ ಅವರ ಬ್ಯಾಗ್​ನಲ್ಲಿದ್ದ ಹಣ ಹಾಗೂ ಚಿನ್ನ, ಬೆಳ್ಳಿ ವಸ್ತುಗಳು ಕಳ್ಳತನವಾಗಿರುವುದು ಗೊತ್ತಾಗಿತ್ತು. ಈ ಬಗ್ಗೆ ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಅವರು ದೂರು ನೀಡಿದ್ದರು. ಆದರೆ, ಪೊಲೀಸರು ಯಾವ ಆಸಕ್ತಿಯನ್ನೂ ತೋರಲಿಲ್ಲ. ಹೀಗಾಗಿ, ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದರು.

ರೈಲಿನಲ್ಲಿ ರಿಸರ್ವೇಷನ್​ ಮಾಡಿಸಿದ್ದ ಕಂಪಾರ್ಟ್​ಮೆಂಟ್​ನಲ್ಲಿಯೇ ಈ ಕಳ್ಳತನ ನಡೆದಿರುವುದಕ್ಕೆ ರೈಲ್ವೆ ಇಲಾಖೆಯೇ ಹೊಣೆ. ಎಸ್​ಸಿಆರ್ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಈ ಕಳ್ಳತನ ನಡೆದಿದೆ ಎಂದು ಆ ಮಹಿಳೆ ದೂರು ನೀಡಿದ್ದರು. ಆಕೆಯ ದೂರಿಗೆ ಯಾವುದೇ ಕ್ರಮ ಕೈಗೊಳ್ಳದ ಪೊಲೀಸರ ವರ್ತನೆ ಹಾಗೂ ರೈಲ್ವೆ ಅಧಿಕಾರಿಗಳ ಬೇಜವಾಬ್ದಾರಿಯನ್ನು ಗಮನಿಸಿದ ಗ್ರಾಹಕರ ಆಯೋಗ ಸಂತ್ರಸ್ತೆಗೆ ರೈಲ್ವೆ ಇಲಾಖೆಯಿಂದ 17.5 ಲಕ್ಷ ಪರಿಹಾರ ನೀಡಲು ಸೂಚಿಸಿದೆ.

ಇದನ್ನೂ ಓದಿ: Bengaluru Metro: ಗಮನಿಸಿ, ಆಗಸ್ಟ್ 11,12 ರಂದು ವಿಜಯನಗರ-ಮೈಸೂರು ರಸ್ತೆಯ ಮೆಟ್ರೋ ಮಾರ್ಗದಲ್ಲಿ ಸೇವೆ ಇರದು

Bengaluru Night Curfew: ಆಗಸ್ಟ್​ 16ರವರೆಗೆ ಬೆಂಗಳೂರಿನಲ್ಲಿ ನೈಟ್​ ಕರ್ಫ್ಯೂ ಜಾರಿ; ವಿವರ ಇಲ್ಲಿದೆ

(Indian Railways ordered to pay Rs 17.5 lakh to passenger for stolen luggage in Hyderabad-Bengaluru Train)

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ