AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲು ಪ್ರಯಾಣಿಕರೇ ಗಮನಿಸಿ: ಆಗಸ್ಟ್ 23, 24 ರಂದು ಕೆಲವು ರೈಲುಗಳು ರದ್ದು, ಸಂಚಾರ ಸಮಯ ಬದಲಾವಣೆ; ವಿವರ ಇಲ್ಲಿದೆ

ಆಗಸ್ಟ್ 24 ರಂದು ಸಿಗ್ನಲಿಂಗ್ ಮತ್ತು ಇತರ ನಿರ್ವಹಣಾ ಕಾಮಗಾರಿಯ ಕಾರಣ ಕರ್ನಾಟಕದ ಹಲವು ರೈಲುಗಳ ಸಂಚಾರ ಒಂದು ದಿನದ ಮಟ್ಟಿಗೆ ರದ್ದಾಗಿದ್ದು, ಕೆಲವು ರೈಲುಗಳ ಸಂಚಾರ ಭಾಗಶಃ ರದ್ದು ಹಾಗೂ ಇನ್ನು ಕೆಲವು ರೈಲುಗಳ ಪ್ರಯಾಣ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಆ ಕುರಿತು ನೈಋತ್ಯ ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರದ್ದಾದ ಹಾಗೂ ಭಾಗಶಃ ರದ್ದಾದ ರೈಲುಗಳ, ಪ್ರಯಾಣ ಸಮಯ ಬದಲಾವಣೆಯಾಗಿರುವ ರೈಲುಗಳ ವಿವರ ಇಲ್ಲಿದೆ.

ರೈಲು ಪ್ರಯಾಣಿಕರೇ ಗಮನಿಸಿ: ಆಗಸ್ಟ್ 23, 24 ರಂದು ಕೆಲವು ರೈಲುಗಳು ರದ್ದು, ಸಂಚಾರ ಸಮಯ ಬದಲಾವಣೆ; ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
ಸಂಜಯ್ಯಾ ಚಿಕ್ಕಮಠ
| Updated By: Ganapathi Sharma|

Updated on: Aug 19, 2025 | 7:26 AM

Share

ಹುಬ್ಬಳ್ಳಿ, ಆಗಸ್ಟ್ 19: ಆಗಸ್ಟ್ 24ರಂದು ಅರಸೀಕೆರೆ-ಬಾಣಾವರ ಹಾಗೂ ಅರಸೀಕೆರೆ-ಹಬ್ಬನಘಟ್ಟ ನಿಲ್ದಾಣಗಳ ನಡುವೆ ಪ್ರಮುಖ ಸಿಗ್ನಲಿಂಗ್ ಮತ್ತು ಬ್ಲಾಕ್ ಇನ್‌ಸ್ಟ್ರುಮೆಂಟ್ ಬದಲಾವಣೆ ಕಾಮಗಾರಿಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ, ಅಂದು ಕೆಲವು ರೈಲು ಸೇವೆಗಳನ್ನು (Train Service) ರದ್ದುಗೊಳಿಸಲಾಗಿದೆ. ಇನ್ನು ಕೆಲವು ರೈಲುಗಳ ಸಂಚಾರ ಭಾಗಶಃ ರದ್ದುಗೊಳಿಸಲಾಗಿದೆ. ಕೆಲವು ರೈಲುಗಳ ಪ್ರಯಾಣದ ಸಮಯ ಮರು ನಿಗದಿಪಡಿಸಲಾಗುತ್ತದೆ ಮತ್ತು ನಿಯಂತ್ರಿಸಲಾಗಿದೆ ಎಂದು ಭಾರತೀಯ ರೈಲ್ವೆಯ (Indian Railways) ನೈರುತ್ಯ ರೈಲ್ವೆ (South Western Railway) ವಲಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಯಾವೆಲ್ಲ ರೈಲುಗಳು ರದ್ದು?

ಆಗಸ್ಟ್ 23ರಂದು, ರೈಲು ಸಂಖ್ಯೆ 06270 ಎಸ್ಎಂವಿಟಿ ಬೆಂಗಳೂರು–ಮೈಸೂರು ಡೈಲಿ ಪ್ಯಾಸೆಂಜರ್ ರೈಲು ರದ್ದುಗೊಳ್ಳಲಿದೆ. ಆಗಸ್ಟ್ 24ರಂದು, ಮೈಸೂರು–ಎಸ್ಎಂವಿಟಿ ಬೆಂಗಳೂರು ಡೈಲಿ ಪ್ಯಾಸೆಂಜರ್ (06269), ಶಿವಮೊಗ್ಗ ಟೌನ್–ಮೈಸೂರು ಡೈಲಿ ಎಕ್ಸ್‌ಪ್ರೆಸ್ (16226), ಮೈಸೂರು–ಶಿವಮೊಗ್ಗ ಟೌನ್ ಡೈಲಿ ಎಕ್ಸ್‌ಪ್ರೆಸ್ (16225), ಅರಸೀಕೆರೆ–ಮೈಸೂರು ಡೈಲಿ ಪ್ಯಾಸೆಂಜರ್ (56267), ಮೈಸೂರು–ಅರಸೀಕೆರೆ ಡೈಲಿ ಪ್ಯಾಸೆಂಜರ್ (56268), ಮೈಸೂರು–ಅರಸೀಕೆರೆ ಡೈಲಿ ಪ್ಯಾಸೆಂಜರ್ (56266) ಮತ್ತು ಅರಸೀಕೆರೆ–ಮೈಸೂರು ಡೈಲಿ ಪ್ಯಾಸೆಂಜರ್ (56265) ರೈಲುಗಳ ಸಂಚಾರ ಒಂದು ದಿನದ ಮಟ್ಟಿಗೆ ರದ್ದಾಗಲಿದೆ.

ಯಾವೆಲ್ಲ ರೈಲುಗಳ ಸಂಚಾರ ಭಾಗಶಃ ರದ್ದು?

ಆಗಸ್ಟ್ 24ರಂದು ರೈಲು ಸಂಖ್ಯೆ 56271 ಶಿವಮೊಗ್ಗ ಟೌನ್–ಚಿಕ್ಕಮಗಳೂರು ಡೈಲಿ ಪ್ಯಾಸೆಂಜರ್ ರೈಲು ಶಿವಮೊಗ್ಗ ಟೌನ್ ಮತ್ತು ಬೀರೂರು ನಡುವೆ ಭಾಗಶಃ ರದ್ದುಗೊಳ್ಳಲಿದೆ. ಈ ರೈಲು ಬೀರೂರಿನಿಂದ ನಿಗದಿತ ಸಮಯದಲ್ಲಿ ಪ್ರಯಾಣ ಆರಂಭಿಸಲಿದೆ.

ಇದನ್ನೂ ಓದಿ
Image
ಭಾರತೀಯ ರೈಲ್ವೆ, 45 ಪೈಸೆಗೆ 10 ಲಕ್ಷ ರೂ ಇನ್ಷೂರೆನ್ಸ್
Image
ರೈಲುಗಳಲ್ಲಿ ಸಿಸಿಟಿವಿ ಕ್ಯಾಮರಾ, ವೈಫೈ ಅಳವಡಿಕೆ
Image
ಕಾನ್ಪುರದ ಬಳಿ ಹಳಿ ತಪ್ಪಿದ ಸಬರಮತಿ ಎಕ್ಸ್‌ಪ್ರೆಸ್ ರೈಲು
Image
ಓಡಿ ಬಂದು ರೈಲ್ವೆ ಹಳಿ ಮೇಲೆ ಮಲಗೇ ಬಿಟ್ಟ, ರೈಲು ಹೋಗೇಬಿಡ್ತು

ರೈಲು ಸಂಚಾರ ಸಮಯ ಬದಲಾವಣೆ ವಿವರ

ಆಗಸ್ಟ್ 24ರಂದು ಹೊರಡುವ ಈ ಕೆಳಗಿನ ರೈಲುಗಳ ಪ್ರಯಾಣ ಸಮಯದಲ್ಲಿ ಬದಲಾವಣೆ ಮಾಡಲಾಗಿರುತ್ತದೆ. ರೈಲು ಸಂಖ್ಯೆ 16587 ಯಶವಂತಪುರ–ಬಿಕಾನೇರ್ ದ್ವಿ-ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಯಶವಂತಪುರದಿಂದ 60 ನಿಮಿಷ ತಡವಾಗಿ ಹೊರಡಲಿದೆ ಮತ್ತು ಮಾರ್ಗಮಧ್ಯೆ 90 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.

ಇದನ್ನೂ ಓದಿ: ಆರೆಂಜ್ ಲೈನ್​ಗಾಗಿ 6500 ಮರ ಕಡಿಯಲು ಮುಂದಾದ ನಮ್ಮ ಮೆಟ್ರೋ: ಪರಿಸರ ಹೋರಾಟಗಾರರ ಜತೆ ಅಧಿಕಾರಿಗಳ ಸಭೆ

ರೈಲು ಸಂಖ್ಯೆ 18112 ಯಶವಂತಪುರ–ಟಾಟಾನಗರ ಸಾಪ್ತಾಹಿಕ ಎಕ್ಸ್‌ಪ್ರೆಸ್, 12649 ಯಶವಂತಪುರ–ಹಜರತ್ ನಿಜಾಮುದ್ದೀನ್ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್, ಮತ್ತು 12725 ಕೆಎಸ್ಆರ್ ಬೆಂಗಳೂರು–ಧಾರವಾಡ ಸಿದ್ಧಗಂಗಾ ದೈನಿಕ ಎಕ್ಸ್‌ಪ್ರೆಸ್ ರೈಲುಗಳನ್ನು ಮಾರ್ಗಮಧ್ಯೆ 60–75 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ ಮತ್ತು ರೈಲು ಸಂಖ್ಯೆ 17325 ಬೆಳಗಾವಿ–ಮೈಸೂರು ವಿಶ್ವಮಾನವ ದೈನಿಕ ಎಕ್ಸ್‌ಪ್ರೆಸ್ ಮಾರ್ಗಮಧ್ಯೆ 90 ನಿಮಿಷಗಳ ಕಾಲ ನಿಯಂತ್ರಣವಾಗಲಿದೆ ಎಂದು ನೈಋತ್ಯ ರೈಲ್ವೆ ವಲಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ