AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್​ ಪ್ರಕರಣಗಳಲ್ಲಿ ನಮ್ಮನ್ನು ಟಾರ್ಗೆಟ್​ ಮಾಡಲಾಗುತ್ತಿದೆ; ಭಾರತೀಯರೂ ನಮ್ಮನ್ನು ಹೊರದಬ್ಬುತ್ತಿದ್ದಾರೆ: ನೈಜೀರಿಯಾ ಪ್ರಜೆಗಳ ಅಸಮಾಧಾನ

ಆಫ್ರಿಕಾದಲ್ಲಿಯೂ ಆಫ್ರಿಕನ್ ಪ್ರಜೆಗಳಿಗೆ ನೆಲೆಯಿಲ್ಲದಂತಾಗಿದೆ. ಆಫ್ರಿಕನ್ ರಾಷ್ಟ್ರವಾಗಿದ್ದರೂ ಘಾನಾ ದೇಶದಲ್ಲಿ ನೈಜೀರಿಯನ್ನರನ್ನ ಹೊರಕಳುಹಿಸಲಾಯ್ತು, ಭಾರತವೂ ಆಫ್ರಿಕಾ ಪ್ರಜೆಗಳನ್ನು ಹೊರದಬ್ಬುತ್ತಿದೆ. ದಾಖಲಾತಿ ಪರಿಶೀಲನೆ ನೆಪದಲ್ಲಿ ಆಫ್ರಿಕನ್ ಪ್ರಜೆಗಳ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಅಸಮಾಧಾನ.

ಡ್ರಗ್​ ಪ್ರಕರಣಗಳಲ್ಲಿ ನಮ್ಮನ್ನು ಟಾರ್ಗೆಟ್​ ಮಾಡಲಾಗುತ್ತಿದೆ; ಭಾರತೀಯರೂ ನಮ್ಮನ್ನು ಹೊರದಬ್ಬುತ್ತಿದ್ದಾರೆ: ನೈಜೀರಿಯಾ ಪ್ರಜೆಗಳ ಅಸಮಾಧಾನ
ಸಾಂಕೇತಿಕ ಚಿತ್ರ
TV9 Web
| Updated By: Skanda|

Updated on: Jul 17, 2021 | 8:17 AM

Share

ಬೆಂಗಳೂರು: ಬೆಂಗಳೂರಿನಾದ್ಯಂತ ಡ್ರಗ್ಸ್ ಪ್ರಕರಣದಲ್ಲಿ (Drug Case) ಹೆಚ್ಚಾಗಿ ಆಫ್ರಿಕನ್ ಪ್ರಜೆಗಳೇ ಸಿಕ್ಕಿಬೀಳುತ್ತಿದ್ದು, ಬೆಂಗಳೂರು ಪೊಲೀಸರು (Bengaluru Police) ಎಷ್ಟೇ ಎಚ್ಚರಿಕೆ ನೀಡಿದರೂ ಅವರು ಪುಂಡಾಟ ನಿಲ್ಲಿಸುತ್ತಿಲ್ಲ. ಬೆಂಗಳೂರಿನ ಹಲವೆಡೆ ಅಕ್ರಮವಾಗಿ ವಾಸ್ತವ್ಯ ಹೂಡಿರುವ ಆಫ್ರಿಕಾದ (Africa) ಹಲವು ದೇಶದ ಪ್ರಜೆಗಳು, ಮಾದಕ ವಸ್ತು ಜಾಲದಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದಾರೆ. ಈ ಹಿಂದೆ ಒಮ್ಮೆ ಆಫ್ರಿಕನ್ನರನ್ನ ಒಗ್ಗೂಡಿಸಿ ಭೇಟಿಯಾಗಿದ್ದ ಬೆಂಗಳೂರು ಪೊಲೀಸರು, ಅಪರಾಧ ಕೃತ್ಯದಲ್ಲಿ ಭಾಗಿಯಾಗದಂತೆ ಎಚ್ಚರಿಕೆ ಜತೆಗೆ ಮನವಿ ಸಹ ಮಾಡಿದ್ದರು. ಅಷ್ಟಾದ ನಂತರವೂ ಅವರು ತಪ್ಪು ತಿದ್ದುಕೊಳ್ಳದ ಕಾರಣ ವಿಶೇಷ ಕಾರ್ಯಾಚರಣೆ ನಡೆಸಿದ್ದ 100 ಕ್ಕೂ ಹೆಚ್ಚು ಸಿಸಿಬಿ ಅಧಿಕಾರಿಗಳು ಮತ್ತು ಪೊಲೀಸರು ವೀಸಾ ಅವಧಿ ಮುಗಿದ ಬಳಿಕವೂ ವಾಸವಿದ್ದ 100 ಜನರನ್ನು ಪತ್ತೆ ಮಾಡಿದ್ದರು, ದಾಳಿ ವೇಳೆ 90 ಎಕ್ಸ್ಟೇಸಿ ಟ್ಯಾಬ್ಲೆಟ್, 25 ಗ್ರಾಂ ಗಾಂಜಾ ಸಹ ಪತ್ತೆಯಾಗಿತ್ತು. ಆದರೆ, ಈ ಕಾರ್ಯಾಚರಣೆ ವಿರುದ್ಧ ಇದೀಗ ನೈಜೀರಿಯಾದ ಸಾಮಾಜಿಕ ಕಾರ್ಯಕರ್ತರು (Social Activists) ಧ್ವನಿ ಎತ್ತಿದ್ದಾರೆ.

ಮಾದಕ ವಸ್ತು ಜಾಲದಲ್ಲಿ ಪದೇ ಪದೇ ಕಾಣಿಸಿಕೊಳ್ಳುತ್ತಿರುವ ನೈಜೀರಿಯನ್​ ಪ್ರಜೆಗಳನ್ನು ಬೇಕಂತಲೇ ಗುರಿಯಾಗಿಸಿ ದಾಳಿ ಮಾಡಲಾಗುತ್ತಿದೆ ಎಂದು ನೈಜೀರಿಯಾದ ಸಾಮಾಜಿಕ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನೈಜೀರಿಯಾದಲ್ಲೇ ಕುಳಿತು ಸಾಮಾಜಿಕ ಜಾಲತಾಣಗಳ ಮೂಲಕ ಈ ಬಗ್ಗೆ ಪೋಸ್ಟ್ ಹಂಚಿಕೊಳ್ಳುತ್ತಿರುವ ಅವರು, ಆಫ್ರಿಕನ್ ಪ್ರಜೆಗಳೇ ಪೊಲೀಸ್ ಕಾರ್ಯಾಚರಣೆಯಲ್ಲಿ ಮುಖ್ಯ ಭೂಮಿಕೆಗೆ ಬರುತ್ತಿರುವುದು ಏಕೆ? ಆಫ್ರಿಕರನ್ನು ಬೇಕಂತಲೇ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಭಾರತದಲ್ಲಿ ಚೀನಾ, ಪಾಕ್​, ಅಮೆರಿಕ, ಆಫ್ಘನ್​, ಯುರೋಪ್​ ಸೇರಿದಂತೆ ಬೇರೆ ಬೇರೆ ದೇಶದವರಿದ್ದಾರೆ. ಆದರೆ ಭಾರತೀಯರು ಹೊರದಬ್ಬುತ್ತಿರುವುದು ಆಫ್ರಿಕನ್ನರನ್ನು. ಆಫ್ರಿಕಾದಲ್ಲಿಯೂ ಆಫ್ರಿಕನ್ ಪ್ರಜೆಗಳಿಗೆ ನೆಲೆಯಿಲ್ಲದಂತಾಗಿದೆ. ಆಫ್ರಿಕನ್ ರಾಷ್ಟ್ರವಾಗಿದ್ದರೂ ಘಾನಾ ದೇಶದಲ್ಲಿ ನೈಜೀರಿಯನ್ನರನ್ನ ಹೊರಕಳುಹಿಸಲಾಯ್ತು, ಭಾರತವೂ ಆಫ್ರಿಕಾ ಪ್ರಜೆಗಳನ್ನು ಹೊರದಬ್ಬುತ್ತಿದೆ. ದಾಖಲಾತಿ ಪರಿಶೀಲನೆ ನೆಪದಲ್ಲಿ ಆಫ್ರಿಕನ್ ಪ್ರಜೆಗಳ ಟಾರ್ಗೆಟ್ ಮಾಡಲಾಗುತ್ತಿದ್ದು, ವಿಶ್ವದಲ್ಲಿ ನಮ್ಮ ಕಾಳಜಿ ವಹಿಸುವವರು ಯಾರೂ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಪೊಲೀಸರ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸಾಮಾಜಿಕ ಕಾರ್ಯಕರ್ತರು, ಆಫ್ರಿಕರನ್ನು ಎಲ್ಲರೂ ಬೇಕಂತಲೇ ಗುರಿಯಾಗಿಸಿ ದಾಳಿ ನಡೆಸುತ್ತಿದ್ದಾರೆ. ಆಫ್ರಿಕನ್ ಪ್ರಜೆಗಳೇ ಪೊಲೀಸ್ ಕಾರ್ಯಾಚರಣೆಯಲ್ಲಿ ಕಾಣಿಸಿಕೊಳ್ಳುವುದರ ಹಿಂದೆ ನಮ್ಮನ್ನು ಉದ್ದೇಶಪೂರ್ವಕವಾಗಿ ಹೊರದಬ್ಬುವ ಯೋಜನೆ ಅಡಗಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಮಾದಕ ದ್ರವ್ಯ ಜಾಲದಲ್ಲಿ ಸಕ್ರಿಯರಾಗಿದ್ದ ನಾಲ್ವರು ನೈಜೀರಿಯಾ ಪ್ರಜೆಗಳ ಬಂಧನ 

ನಮ್ಮ ಜವಾಬ್ದಾರಿ ಕೇವಲ ಡ್ರಗ್ ಪೆಡ್ಲರ್​ಗಳ ಬಂಧನವಲ್ಲ, ಮಾದಕ ವಸ್ತು ಜಾಲ ನಿರ್ಮೂಲನೆ ಮಾಡಲು ನಾವು ಸಿದ್ಧ; ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್

ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?
ಗೇಟ್​ ಹತ್ತಿ ಹಾರಿ ಜಮ್ಮು ಕಾಶ್ಮೀರದ ಸಿಎಂ ಒಮರ್ ಹೋಗಿದ್ದೆಲ್ಲಿಗೆ?
ಗೇಟ್​ ಹತ್ತಿ ಹಾರಿ ಜಮ್ಮು ಕಾಶ್ಮೀರದ ಸಿಎಂ ಒಮರ್ ಹೋಗಿದ್ದೆಲ್ಲಿಗೆ?