AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ ಬಹಳ ಸುಲಭವಾಗಿ ಸಿಗಲಿದೆ ಸರ್ಕಾರಿ ಆ್ಯಂಬುಲೆನ್ಸ್ ಸೇವೆ! ದೇಶದಲ್ಲೇ ಪ್ರಥಮ ವಿನೂತನ ಕಮಾಂಡ್ ಸೆಂಟರ್ ಲೋಕಾರ್ಪಣೆ

ಬೆಂಗಳೂರಿನ ಬಸವೇಶ್ವರ ನಗರದಲ್ಲಿ ದೇಶದ ಮೊದಲ ಅತ್ಯಾಧುನಿಕ 108 ಆ್ಯಂಬುಲೆನ್ಸ್ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ಅನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದು, ಇನ್ಮುಂದೆ ಎಲ್ಲಾ ಪ್ರಮುಖ ತುರ್ತು ಸಹಾಯವಾಣಿಗಳು ಒಂದೇ ಸೂರಿನಡಿ ಕಾರ್ಯನಿರ್ವಹಿಸಲಿವೆ. ಸರ್ಕಾರಿ ಆ್ಯಂಬುಲೆನ್ಸ್ ಸೇವೆ ಜನರಿಗೆ ಸುಲಭವಾಗಿ ದೊರೆಯಲಿದೆ.

ಇನ್ಮುಂದೆ ಬಹಳ ಸುಲಭವಾಗಿ ಸಿಗಲಿದೆ ಸರ್ಕಾರಿ ಆ್ಯಂಬುಲೆನ್ಸ್ ಸೇವೆ! ದೇಶದಲ್ಲೇ ಪ್ರಥಮ ವಿನೂತನ ಕಮಾಂಡ್ ಸೆಂಟರ್ ಲೋಕಾರ್ಪಣೆ
ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ರೂಂ ಲೋಕಾರ್ಪಣೆImage Credit source: Karnataka Govt
ವಿನಯ್​ ಕಾಶಪ್ಪನವರ್​
| Edited By: |

Updated on:May 26, 2026 | 7:39 AM

Share

ಬೆಂಗಳೂರು, ಮೇ 26: ಸಾರ್ವಜನಿಕರಿಗೆ ಇನ್ನು ಮುಂದೆ ತುರ್ತು ಆರೋಗ್ಯ ಸೇವೆಗಳು ಅತ್ಯಂತ ಸುಲಭವಾಗಿ ಮತ್ತು ತ್ವರಿತವಾಗಿ ಲಭ್ಯವಾಗಲಿವೆ. ಆ್ಯಂಬುಲೆನ್ಸ್ (Ambulance) ಸಿಗದೆ ರೋಗಿಗಳು ಪರದಾಡುವ ಸ್ಥಿತಿಗೆ ಮುಕ್ತಿಹಾಡಲು ಮುಂದಾಗಿರುವ ಕರ್ನಾಟಕ ಸರ್ಕಾರ, 108 ಆರೋಗ್ಯ ಕವಚ ಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಿದೆ. ಬೆಂಗಳೂರಿನ (Bengaluru) ಬಸವೇಶ್ವರ ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ, ದೇಶದಲ್ಲೇ ಪ್ರಥಮ ಮಾದರಿಯ ‘ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ರೂಂ’ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 25ರ ಸೋಮವಾರದಂದು ಅಧಿಕೃತವಾಗಿ ಲೋಕಾರ್ಪಣೆಗೊಳಿಸಿದರು. ‘ಒಂದು ಕರೆ ನಮಗೆ, ತುರ್ತು ಸೇವೆ ನಿಮಗೆ’ ಎಂಬ ಧ್ಯೇಯವಾಕ್ಯದೊಂದಿಗೆ ಪ್ರಾರಂಭವಾಗಿರುವ ಈ ವ್ಯವಸ್ಥೆಯು ರಾಜ್ಯದ ಆರೋಗ್ಯ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲಾಗಿದೆ.

ಮುಖ್ಯಾಂಶಗಳು

  • ಒಂದೇ ಸೂರಿನಡಿ ಲಭ್ಯವಾಗಲಿವೆ ರಾಜ್ಯದ ಎಲ್ಲಾ ಪ್ರಮುಖ ತುರ್ತು ಸಹಾಯವಾಣಿಗಳು.
  • ಎಲ್ಲ ಭಾಗ್ಯಗಳಿಗಿಂತ ಜನರ ಆರೋಗ್ಯ ಭಾಗ್ಯವೇ ನಮಗೆ ಅತಿ ಮುಖ್ಯ ಎಂದ ಸಿಎಂ.
  • ಬಜೆಟ್ ಭರವಸೆಯಂತೆ ಸರ್ಕಾರದಿಂದಲೇ ಜವಾಬ್ದಾರಿ ಹೊತ್ತು ಹೈಟೆಕ್ ಕೇಂದ್ರ ಸ್ಥಾಪನೆ.

ತ್ವರಿತ ಮತ್ತು ವಿಶ್ವಾಸಾರ್ಹ ತುರ್ತು ಸೇವೆ

ಈ ನೂತನ ಕಮಾಂಡ್ ಸೆಂಟರ್ ಸಾರ್ವಜನಿಕರತುರ್ತು ಅಗತ್ಯಗಳಿಗೆ ಒಂದೇ ಕಂಟ್ರೋಲ್ ರೂಂ ಮೂಲಕ ತಕ್ಷಣ ಸ್ಪಂದಿಸಲಿದೆ. ಗಂಭೀರ ಹಾಗೂ ಸಾಮಾನ್ಯ ತುರ್ತು ಪರಿಸ್ಥಿತಿಗಳನ್ನು ಸಮರ್ಥವಾಗಿ ನಿಭಾಯಿಸಲು ಅಡ್ವಾನ್ಸ್ಡ್ ಲೈಫ್ ಸಪೋರ್ಟ್ (ALS) ಮತ್ತು ಬೇಸಿಕ್ ಲೈಫ್ ಸಪೋರ್ಟ್ (BLS) ಆ್ಯಂಬುಲೆನ್ಸ್ ಕಾರ್ಯಾಚರಣೆಯನ್ನು ಇದು ನಿಯಂತ್ರಿಸಲಿದೆ. ಅಪಘಾತದ ಪ್ರಕರಣಗಳು, ಗರ್ಭಿಣಿಯರ ಆರೈಕೆ ಮತ್ತು ತೀವ್ರ ನಿಗಾ ಅಗತ್ಯವಿರುವ ರೋಗಿಗಳನ್ನು ಒಂದು ಆಸ್ಪತ್ರೆಯಿಂದ ಮತ್ತೊಂದು ಉನ್ನತ ಆರೋಗ್ಯ ಸಂಸ್ಥೆಗೆ ಸುರಕ್ಷಿತವಾಗಿ ರವಾನಿಸಲು ಈ ತಂತ್ರಜ್ಞಾನ ಸಹಕಾರಿಯಾಗಲಿದೆ.

ಸಿದ್ದರಾಮಯ್ಯರಿಂದ ಲೋಕಾರ್ಪಣೆ

ಇದನ್ನೂ ಓದಿ: ನಮ್ಮ ಮೆಟ್ರೋ ಬ್ಲೂ ಲೈನ್ ನಿರ್ವಹಣೆಯನ್ನು ಖಾಸಗಿ ಕಂಪನಿಗೆ ನೀಡಲು ಪ್ಲಾನ್!

ಈ ಹಿಂದೆ ತಾಂತ್ರಿಕ ಅಡಚಣೆಗಳಿಂದಾಗಿ 108 ವ್ಯವಸ್ಥೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿತ್ತು. ಇದನ್ನು ಸುಧಾರಿಸುವಂತೆ ಸಿಎಂ ನೀಡಿದ್ದ ಖಡಕ್ ಸೂಚನೆಯ ಮೇರೆಗೆ ಆರೋಗ್ಯ ಇಲಾಖೆ ಸ್ವತಃ ಜವಾಬ್ದಾರಿ ಹೊತ್ತು ಈ ಹೈಟೆಕ್ ಕೇಂದ್ರವನ್ನು ಸಿದ್ಧಪಡಿಸಿದೆ. ಅತ್ಯಾಧುನಿಕ ಜಿಪಿಎಸ್ ಮತ್ತು ಡಿಜಿಟಲ್ ನೆಟ್‌ವರ್ಕ್ ಹೊಂದಿರುವ ಈ ಹೊಸ ಕಂಟ್ರೋಲ್ ರೂಂ, ಸಾರ್ವಜನಿಕರ ಕರೆ ಬಂದ ತಕ್ಷಣ ಹತ್ತಿರದ ಆ್ಯಂಬುಲೆನ್ಸ್ ಅನ್ನು ಸ್ಥಳಕ್ಕೆ ರವಾನಿಸುವ ಮೂಲಕ ಅಮೂಲ್ಯ ಪ್ರಾಣಗಳನ್ನು ಉಳಿಸಲು ನೆರವಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:23 am, Tue, 26 May 26

Follow Us
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ
ಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶನ; ಓರ್ವನ ಬಂಧನ
ಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶನ; ಓರ್ವನ ಬಂಧನ
RSS ನೋಂದಣಿ ಆಗಿಲ್ಲ, ಆಗೋದು ಇಲ್ಲ: ಪ್ರಿಯಾಂಕ್ ಖರ್ಗೆ ಸಂತೋಷ್​​ ತಿರುಗೇಟು
RSS ನೋಂದಣಿ ಆಗಿಲ್ಲ, ಆಗೋದು ಇಲ್ಲ: ಪ್ರಿಯಾಂಕ್ ಖರ್ಗೆ ಸಂತೋಷ್​​ ತಿರುಗೇಟು
'ವಂದೇ ಮಾತರಂ' ಗೀತೆಗೆ ಅವಮಾನಿಸಿದರೇ ಸೋನಿಯಾ ಗಾಂಧಿ?
'ವಂದೇ ಮಾತರಂ' ಗೀತೆಗೆ ಅವಮಾನಿಸಿದರೇ ಸೋನಿಯಾ ಗಾಂಧಿ?
ನಾನು ಮಾತಾಡಲ್ಲ ಅಂದ್ರೆ ಸೈಲೆಂಟ್ ಆಗಿದ್ದೀನಿ ಅಂತಾ ಅರ್ಥ ಅಲ್ಲ ಎಂದ ಸಿದ್ದು
ನಾನು ಮಾತಾಡಲ್ಲ ಅಂದ್ರೆ ಸೈಲೆಂಟ್ ಆಗಿದ್ದೀನಿ ಅಂತಾ ಅರ್ಥ ಅಲ್ಲ ಎಂದ ಸಿದ್ದು
ಸ್ವಾತಂತ್ರ್ಯ ದಿನಾಚರಣೆ ವೇಳೆ ಅಸ್ವಸ್ಥಗೊಂಡ ಆಂಧ್ರ ಸಚಿವ
ಸ್ವಾತಂತ್ರ್ಯ ದಿನಾಚರಣೆ ವೇಳೆ ಅಸ್ವಸ್ಥಗೊಂಡ ಆಂಧ್ರ ಸಚಿವ
6ನೇ ತರಗತಿಯಿಂದ AI ಶಿಕ್ಷಣ, AI ವಿಶ್ವವಿದ್ಯಾಲಯ: ಸಿಎಂ ಮಹತ್ವದ ಘೋಷಣೆ
6ನೇ ತರಗತಿಯಿಂದ AI ಶಿಕ್ಷಣ, AI ವಿಶ್ವವಿದ್ಯಾಲಯ: ಸಿಎಂ ಮಹತ್ವದ ಘೋಷಣೆ
ಸರ್ಕಾರದ ಅಭಿವೃದ್ಧಿ ಯೋಜನೆಗಳ ಬಗ್ಗೆ ಸಿಎಂ ಡಿಕೆ ಶಿವಕುಮಾರ ಏನಂದ್ರು?
ಸರ್ಕಾರದ ಅಭಿವೃದ್ಧಿ ಯೋಜನೆಗಳ ಬಗ್ಗೆ ಸಿಎಂ ಡಿಕೆ ಶಿವಕುಮಾರ ಏನಂದ್ರು?