AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ ಬಹಳ ಸುಲಭವಾಗಿ ಸಿಗಲಿದೆ ಸರ್ಕಾರಿ ಆ್ಯಂಬುಲೆನ್ಸ್ ಸೇವೆ! ದೇಶದಲ್ಲೇ ಪ್ರಥಮ ವಿನೂತನ ಕಮಾಂಡ್ ಸೆಂಟರ್ ಲೋಕಾರ್ಪಣೆ

ಬೆಂಗಳೂರಿನ ಬಸವೇಶ್ವರ ನಗರದಲ್ಲಿ ದೇಶದ ಮೊದಲ ಅತ್ಯಾಧುನಿಕ 108 ಆ್ಯಂಬುಲೆನ್ಸ್ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ಅನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದು, ಇನ್ಮುಂದೆ ಎಲ್ಲಾ ಪ್ರಮುಖ ತುರ್ತು ಸಹಾಯವಾಣಿಗಳು ಒಂದೇ ಸೂರಿನಡಿ ಕಾರ್ಯನಿರ್ವಹಿಸಲಿವೆ. ಸರ್ಕಾರಿ ಆ್ಯಂಬುಲೆನ್ಸ್ ಸೇವೆ ಜನರಿಗೆ ಸುಲಭವಾಗಿ ದೊರೆಯಲಿದೆ.

ಇನ್ಮುಂದೆ ಬಹಳ ಸುಲಭವಾಗಿ ಸಿಗಲಿದೆ ಸರ್ಕಾರಿ ಆ್ಯಂಬುಲೆನ್ಸ್ ಸೇವೆ! ದೇಶದಲ್ಲೇ ಪ್ರಥಮ ವಿನೂತನ ಕಮಾಂಡ್ ಸೆಂಟರ್ ಲೋಕಾರ್ಪಣೆ
ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ರೂಂ ಲೋಕಾರ್ಪಣೆImage Credit source: Karnataka Govt
Vinay Kashappanavar
| Edited By: |

Updated on:May 26, 2026 | 7:39 AM

Share

ಬೆಂಗಳೂರು, ಮೇ 26: ಸಾರ್ವಜನಿಕರಿಗೆ ಇನ್ನು ಮುಂದೆ ತುರ್ತು ಆರೋಗ್ಯ ಸೇವೆಗಳು ಅತ್ಯಂತ ಸುಲಭವಾಗಿ ಮತ್ತು ತ್ವರಿತವಾಗಿ ಲಭ್ಯವಾಗಲಿವೆ. ಆ್ಯಂಬುಲೆನ್ಸ್ (Ambulance) ಸಿಗದೆ ರೋಗಿಗಳು ಪರದಾಡುವ ಸ್ಥಿತಿಗೆ ಮುಕ್ತಿಹಾಡಲು ಮುಂದಾಗಿರುವ ಕರ್ನಾಟಕ ಸರ್ಕಾರ, 108 ಆರೋಗ್ಯ ಕವಚ ಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಿದೆ. ಬೆಂಗಳೂರಿನ (Bengaluru) ಬಸವೇಶ್ವರ ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ, ದೇಶದಲ್ಲೇ ಪ್ರಥಮ ಮಾದರಿಯ ‘ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ರೂಂ’ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 25ರ ಸೋಮವಾರದಂದು ಅಧಿಕೃತವಾಗಿ ಲೋಕಾರ್ಪಣೆಗೊಳಿಸಿದರು. ‘ಒಂದು ಕರೆ ನಮಗೆ, ತುರ್ತು ಸೇವೆ ನಿಮಗೆ’ ಎಂಬ ಧ್ಯೇಯವಾಕ್ಯದೊಂದಿಗೆ ಪ್ರಾರಂಭವಾಗಿರುವ ಈ ವ್ಯವಸ್ಥೆಯು ರಾಜ್ಯದ ಆರೋಗ್ಯ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲಾಗಿದೆ.

ಮುಖ್ಯಾಂಶಗಳು

  • ಒಂದೇ ಸೂರಿನಡಿ ಲಭ್ಯವಾಗಲಿವೆ ರಾಜ್ಯದ ಎಲ್ಲಾ ಪ್ರಮುಖ ತುರ್ತು ಸಹಾಯವಾಣಿಗಳು.
  • ಎಲ್ಲ ಭಾಗ್ಯಗಳಿಗಿಂತ ಜನರ ಆರೋಗ್ಯ ಭಾಗ್ಯವೇ ನಮಗೆ ಅತಿ ಮುಖ್ಯ ಎಂದ ಸಿಎಂ.
  • ಬಜೆಟ್ ಭರವಸೆಯಂತೆ ಸರ್ಕಾರದಿಂದಲೇ ಜವಾಬ್ದಾರಿ ಹೊತ್ತು ಹೈಟೆಕ್ ಕೇಂದ್ರ ಸ್ಥಾಪನೆ.

ತ್ವರಿತ ಮತ್ತು ವಿಶ್ವಾಸಾರ್ಹ ತುರ್ತು ಸೇವೆ

ಈ ನೂತನ ಕಮಾಂಡ್ ಸೆಂಟರ್ ಸಾರ್ವಜನಿಕರತುರ್ತು ಅಗತ್ಯಗಳಿಗೆ ಒಂದೇ ಕಂಟ್ರೋಲ್ ರೂಂ ಮೂಲಕ ತಕ್ಷಣ ಸ್ಪಂದಿಸಲಿದೆ. ಗಂಭೀರ ಹಾಗೂ ಸಾಮಾನ್ಯ ತುರ್ತು ಪರಿಸ್ಥಿತಿಗಳನ್ನು ಸಮರ್ಥವಾಗಿ ನಿಭಾಯಿಸಲು ಅಡ್ವಾನ್ಸ್ಡ್ ಲೈಫ್ ಸಪೋರ್ಟ್ (ALS) ಮತ್ತು ಬೇಸಿಕ್ ಲೈಫ್ ಸಪೋರ್ಟ್ (BLS) ಆ್ಯಂಬುಲೆನ್ಸ್ ಕಾರ್ಯಾಚರಣೆಯನ್ನು ಇದು ನಿಯಂತ್ರಿಸಲಿದೆ. ಅಪಘಾತದ ಪ್ರಕರಣಗಳು, ಗರ್ಭಿಣಿಯರ ಆರೈಕೆ ಮತ್ತು ತೀವ್ರ ನಿಗಾ ಅಗತ್ಯವಿರುವ ರೋಗಿಗಳನ್ನು ಒಂದು ಆಸ್ಪತ್ರೆಯಿಂದ ಮತ್ತೊಂದು ಉನ್ನತ ಆರೋಗ್ಯ ಸಂಸ್ಥೆಗೆ ಸುರಕ್ಷಿತವಾಗಿ ರವಾನಿಸಲು ಈ ತಂತ್ರಜ್ಞಾನ ಸಹಕಾರಿಯಾಗಲಿದೆ.

ಸಿದ್ದರಾಮಯ್ಯರಿಂದ ಲೋಕಾರ್ಪಣೆ

ಇದನ್ನೂ ಓದಿ: ನಮ್ಮ ಮೆಟ್ರೋ ಬ್ಲೂ ಲೈನ್ ನಿರ್ವಹಣೆಯನ್ನು ಖಾಸಗಿ ಕಂಪನಿಗೆ ನೀಡಲು ಪ್ಲಾನ್!

ಈ ಹಿಂದೆ ತಾಂತ್ರಿಕ ಅಡಚಣೆಗಳಿಂದಾಗಿ 108 ವ್ಯವಸ್ಥೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿತ್ತು. ಇದನ್ನು ಸುಧಾರಿಸುವಂತೆ ಸಿಎಂ ನೀಡಿದ್ದ ಖಡಕ್ ಸೂಚನೆಯ ಮೇರೆಗೆ ಆರೋಗ್ಯ ಇಲಾಖೆ ಸ್ವತಃ ಜವಾಬ್ದಾರಿ ಹೊತ್ತು ಈ ಹೈಟೆಕ್ ಕೇಂದ್ರವನ್ನು ಸಿದ್ಧಪಡಿಸಿದೆ. ಅತ್ಯಾಧುನಿಕ ಜಿಪಿಎಸ್ ಮತ್ತು ಡಿಜಿಟಲ್ ನೆಟ್‌ವರ್ಕ್ ಹೊಂದಿರುವ ಈ ಹೊಸ ಕಂಟ್ರೋಲ್ ರೂಂ, ಸಾರ್ವಜನಿಕರ ಕರೆ ಬಂದ ತಕ್ಷಣ ಹತ್ತಿರದ ಆ್ಯಂಬುಲೆನ್ಸ್ ಅನ್ನು ಸ್ಥಳಕ್ಕೆ ರವಾನಿಸುವ ಮೂಲಕ ಅಮೂಲ್ಯ ಪ್ರಾಣಗಳನ್ನು ಉಳಿಸಲು ನೆರವಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:23 am, Tue, 26 May 26

Follow Us
Vinay Kashappanavar
Vinay Kashappanavar
ರೇವತಿ ನಕ್ಷತ್ರಕ್ಕೆ ಶನಿ ಎಂಟ್ರಿ!
ರೇವತಿ ನಕ್ಷತ್ರಕ್ಕೆ ಶನಿ ಎಂಟ್ರಿ!
ಇಂದು ಹನುಮನಿಗೆ ಬೆಲ್ಲದ ದೀಪ ಹಚ್ಚಿದರೆ ಈ ರಾಶಿಯವರಿಗೆ ಭರ್ಜರಿ ಅದೃಷ್ಟ!
ಇಂದು ಹನುಮನಿಗೆ ಬೆಲ್ಲದ ದೀಪ ಹಚ್ಚಿದರೆ ಈ ರಾಶಿಯವರಿಗೆ ಭರ್ಜರಿ ಅದೃಷ್ಟ!
ಉತ್ತರ ಪ್ರದೇಶದ ಬುಲಂದ್‌ಶಹರ್ ಕಾರ್ಖಾನೆಯಲ್ಲಿ ಬೆಂಕಿ ದುರಂತ
ಉತ್ತರ ಪ್ರದೇಶದ ಬುಲಂದ್‌ಶಹರ್ ಕಾರ್ಖಾನೆಯಲ್ಲಿ ಬೆಂಕಿ ದುರಂತ
ಪ್ರಪೋಸಲ್ ನಿರಾಕರಿಸಿದ್ದಕ್ಕೆ ಯುವತಿಯ ಮನೆ ಮೇಲೆ ಪ್ರೇಮಿಯಿಂದ ಬಾಂಬ್ ದಾಳಿ
ಪ್ರಪೋಸಲ್ ನಿರಾಕರಿಸಿದ್ದಕ್ಕೆ ಯುವತಿಯ ಮನೆ ಮೇಲೆ ಪ್ರೇಮಿಯಿಂದ ಬಾಂಬ್ ದಾಳಿ
ಈಗ ಸ್ವಲ್ಪ ಕನ್ನಡ ಬರುತ್ತೆ, ಮುಂದಿನ ಸಲ ಜಾಸ್ತಿ ಮಾತಾಡುವೆ: ರಾಮ್ ಚರಣ್
ಈಗ ಸ್ವಲ್ಪ ಕನ್ನಡ ಬರುತ್ತೆ, ಮುಂದಿನ ಸಲ ಜಾಸ್ತಿ ಮಾತಾಡುವೆ: ರಾಮ್ ಚರಣ್
ಗುಲ್ಮಾರ್ಗ್‌ನಲ್ಲಿ ಆಕಾಶದ ಮಧ್ಯೆ ಸಿಲುಕಿದ 300 ಪ್ರವಾಸಿಗರು!
ಗುಲ್ಮಾರ್ಗ್‌ನಲ್ಲಿ ಆಕಾಶದ ಮಧ್ಯೆ ಸಿಲುಕಿದ 300 ಪ್ರವಾಸಿಗರು!
ಧರ್ಮೇಂದ್ರ ಪರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ನಟಿ ಹೇಮಾ ಮಾಲಿನಿ
ಧರ್ಮೇಂದ್ರ ಪರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ನಟಿ ಹೇಮಾ ಮಾಲಿನಿ
ಕೊಯಮತ್ತೂರು ಬಾಲಕಿ ಹತ್ಯೆ ಕುರಿತ ಸುದ್ದಿಗೋಷ್ಠಿಯಲ್ಲಿ ನಕ್ಕ ಮಹಿಳಾ ಪೊಲೀಸ್!
ಕೊಯಮತ್ತೂರು ಬಾಲಕಿ ಹತ್ಯೆ ಕುರಿತ ಸುದ್ದಿಗೋಷ್ಠಿಯಲ್ಲಿ ನಕ್ಕ ಮಹಿಳಾ ಪೊಲೀಸ್!
SIR ಸಭೆಗೆ ಗೈರಾದ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ‘ಕೈ’ ಕೊಕ್
SIR ಸಭೆಗೆ ಗೈರಾದ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ‘ಕೈ’ ಕೊಕ್
ಶಿವಮೊಗ್ಗ KSCA ಮೈದಾನದಲ್ಲಿ ಕ್ರಿಕೆಟ್ ಆಟಗಾರ ಅಕ್ಷಯ್ ಅಂತಿಮ ದರ್ಶನ
ಶಿವಮೊಗ್ಗ KSCA ಮೈದಾನದಲ್ಲಿ ಕ್ರಿಕೆಟ್ ಆಟಗಾರ ಅಕ್ಷಯ್ ಅಂತಿಮ ದರ್ಶನ