ಇಂದಿರಾ ಕ್ಯಾಂಟೀನ್​ಗೆ ನಾಡಪ್ರಭು ಕೆಂಪೇಗೌಡರ ಹೆಸರು?

ಬೆಂಗಳೂರು: ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಲು ಚಿಂತನೆ ನಡೆಸಲಾಗುತ್ತಿದೆ. ಇಂದಿರಾ ಕ್ಯಾಂಟೀನ್ ಬದಲು ಕೆಂಪೇಗೌಡ ಕ್ಯಾಂಟೀನ್ ಎಂದು ಮರುನಾಮಕರಣ ಮಾಡುವುದಾಗಿ ಬಿಬಿಎಂಪಿ ಉಪಮೇಯರ್ ರಾಮ್‌ಮೋಹನ್ ರಾಜ್ ಹೇಳಿದ್ದಾರೆ. ಇಂದಿರಾ ಕ್ಯಾಂಟೀನ್‌ ಎಂದರೇನೆ ಜನ ಊಟಕ್ಕೆ ಹೋಗ್ತಿಲ್ಲ. ಹೀಗಾಗಿ ನಾಡಪ್ರಭು ಕೆಂಪೇಗೌಡರ ಹೆಸರಿಡಲು ಚಿಂತಿಸಿದ್ದೇವೆ. ಈ ಸಂಬಂಧ ಶೀಘ್ರದಲ್ಲೇ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಸದ್ಯ ಇಂದಿರಾ ಕ್ಯಾಂಟೀನ್‌ಗೆ ರೀ ಟೆಂಡರ್ ಆಹ್ವಾನಿಸಲಾಗಿದೆ. ನಾಡಪ್ರಭು ಕೆಂಪೇಗೌಡರ ಹೆಸರು ಮರು ನಾಮಕರಣ ಕುರಿತು ಮೇಯರ್ ಹಾಗೂ ನಾನು ಸರ್ಕಾರಕ್ಕೆ ಪ್ರಸ್ತಾವನೆ […]

ಇಂದಿರಾ ಕ್ಯಾಂಟೀನ್​ಗೆ ನಾಡಪ್ರಭು ಕೆಂಪೇಗೌಡರ ಹೆಸರು?
ಸಾಧು ಶ್ರೀನಾಥ್​

Updated on: Nov 14, 2019 | 8:34 AM

ಬೆಂಗಳೂರು: ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಲು ಚಿಂತನೆ ನಡೆಸಲಾಗುತ್ತಿದೆ. ಇಂದಿರಾ ಕ್ಯಾಂಟೀನ್ ಬದಲು ಕೆಂಪೇಗೌಡ ಕ್ಯಾಂಟೀನ್ ಎಂದು ಮರುನಾಮಕರಣ ಮಾಡುವುದಾಗಿ ಬಿಬಿಎಂಪಿ ಉಪಮೇಯರ್ ರಾಮ್‌ಮೋಹನ್ ರಾಜ್ ಹೇಳಿದ್ದಾರೆ.

ಇಂದಿರಾ ಕ್ಯಾಂಟೀನ್‌ ಎಂದರೇನೆ ಜನ ಊಟಕ್ಕೆ ಹೋಗ್ತಿಲ್ಲ. ಹೀಗಾಗಿ ನಾಡಪ್ರಭು ಕೆಂಪೇಗೌಡರ ಹೆಸರಿಡಲು ಚಿಂತಿಸಿದ್ದೇವೆ. ಈ ಸಂಬಂಧ ಶೀಘ್ರದಲ್ಲೇ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಸದ್ಯ ಇಂದಿರಾ ಕ್ಯಾಂಟೀನ್‌ಗೆ ರೀ ಟೆಂಡರ್ ಆಹ್ವಾನಿಸಲಾಗಿದೆ. ನಾಡಪ್ರಭು ಕೆಂಪೇಗೌಡರ ಹೆಸರು ಮರು ನಾಮಕರಣ ಕುರಿತು ಮೇಯರ್ ಹಾಗೂ ನಾನು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತೇವೆ ಎಂದು ರಾಮ್‌ಮೋಹನ್ ರಾಜ್ ತಿಳಿಸಿದ್ದಾರೆ.

ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಕಾಂಗ್ರೆಸ್​ ಸರ್ಕಾರದ ಅವಧಿಯಲ್ಲಿ ಸಿದ್ದರಾಮಯ್ಯ ಜಾರಿಗೆ ತಂದಿದ್ದರು.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us