Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ದರ ಏರಿಕೆಯಿಂದ ಕೈಗಾರಿಕೆಗಳಿಗೆ ಶಾಕ್: ಸುಪ್ರೀಂ ಮೆಟ್ಟಿಲೇರಲು‌ ಕೈಗಾರಿಕೋದ್ಯಮಿಗಳ ನಿರ್ಧಾರ

ಕರ್ನಾಟಕದಲ್ಲಿ ವಿದ್ಯುತ್ ದರ ಹೆಚ್ಚಳದಿಂದ ಕೈಗಾರಿಕೆಗಳು ವಿಲ ವಿಲ ಒದ್ದಾಡುವಂತಾಗಿದೆ. ಪವರ್ ಸ್ಟ್ರೋಕ್​ನಿಂದ ಕೈಗಾರಿಕೆಗಳು ತತ್ತರಿಸಿವೆ. ಪಿಂಚಣಿ, ಗ್ರಾಚ್ಯುಟಿ ಹೆಸರಿನಲ್ಲಿ ಇಂಧನ ಇಲಾಖೆ ದರ ಹೆಚ್ಚಳ ಮಾಡಿರುವ ಬಗ್ಗೆ ಅಸಮಾಧಾನ ಸ್ಫೋಟಗೊಂಡಿದೆ. ದರ ಏರಿಕೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು‌ ಕೈಗಾರಿಕೋದ್ಯಮಿಗಳು ನಿರ್ಧರಿಸಿದ್ದಾರೆ.

ವಿದ್ಯುತ್ ದರ ಏರಿಕೆಯಿಂದ ಕೈಗಾರಿಕೆಗಳಿಗೆ ಶಾಕ್: ಸುಪ್ರೀಂ ಮೆಟ್ಟಿಲೇರಲು‌ ಕೈಗಾರಿಕೋದ್ಯಮಿಗಳ ನಿರ್ಧಾರ
ಸಾಂದರ್ಭಿಕ ಚಿತ್ರ
Follow us
Kiran Surya
| Updated By: Ganapathi Sharma

Updated on: Mar 28, 2025 | 7:39 AM

ಬೆಂಗಳೂರು, ಮಾರ್ಚ್ 28: ವಿದ್ಯುತ್ ದರ ಹೆಚ್ಚಳದಿಂದ (Electricity Price Hike) ಜನ ಮಾತ್ರವಲ್ಲ, ಈಗ ಬೆಂಗಳೂರಿನ ಕೈಗಾರಿಕೆಗಳು ಕೂಡ ಕಂಗಲಾಗಿವೆ. ಪಿಂಚಣಿ ಹಾಗೂ ಗ್ರಾಚ್ಯುಟಿಗಾಗಿ ದರ ಏರಿಕೆ ಮಾಡಿದ್ದ ಇಂಧನ ಇಲಾಖೆ, ಈಗ ಮತ್ತೆ ವಾರ್ಷಿಕ ದರ ಏರಿಕೆಗೂ ಸಜ್ಜಾಗಿದೆ. ಇದರ ಪರಿಣಾಮವಾಗಿ ಕೈಗಾರಕೆಗಳು ಸಿಬ್ಬಂದಿಗೆ‌ ಕೋಕ್ ಕೊಡುವ ಪರಿಸ್ಥಿತಿ ಉದ್ಭವಿಸಿದೆ ಎಂದು ಕೈಗಾರಿಕೋದ್ಯಮಿಗಳು (Industrialists) ಅಳಲು ತೋಡಿಕೊಂಡಿದ್ದಾರೆ. ಈಗಾಗಲೇ ಅನೇಕ ಕೈಗಾರಿಕೆಗಳು ಅನ್ಯ ರಾಜ್ಯಕ್ಕೆ ವಲಸೆ ಹೋಗಿದ್ದು, ಪರಿಸ್ಥಿತಿ ಹೀಗೆ ಮುಂದುವರೆದರೆ ಬಹುತೇಕ ಕೈಗಾರಿಕೆಗಳು ವಲಸೆ ಹೋಗಲಿವೆ ಎಂದು ಕೈಗಾರಿಕೋದ್ಯಮಿಗಳು ಹೇಳಿದ್ದಾರೆ. ಪಿಂಚಣಿ, ಗ್ರಾಚ್ಯುಟಿಗಾಗಿ ಗ್ರಾಹಕರಿಗೆ ದರ ಏರಿಕೆ ಮಾಡಿದ್ದು, ಕೈಗಾರಿಕೋದ್ಯಮಿಗಳ ಸಿಟ್ಟಿಗೆ ಕಾರಣವಾಗಿದೆ. ಹೀಗಾಗಿ ಈ ಅವೈಜ್ಞಾನಿಕ ನೀತಿಯನ್ನು ಸುಪ್ರೀಂ ಕೋರ್ಟ್​​​ನಲ್ಲಿ (Supreme Court) ಪ್ರಶ್ನೆ ಮಾಡಲಿದ್ದೇವೆ ಎಂದು ಕೈಗಾರಿಕೋದ್ಯಮಿಗಳು ಹೇಳಿದ್ದಾರೆ. ಈ ಬಗ್ಗೆ ಎಫ್​​ಕೆಸಿಸಿಐ ಅಧ್ಯಕ್ಷ ಬಾಲಕೃಷ್ಣ ಮಾಹಿತಿ ನೀಡಿದ್ದಾರೆ.

ದರ ಏರಿಕೆಯ ಬಾಣಲೆಯಲ್ಲಿ ಜನರ ಜೊತೆ ಈಗ ಕೈಗಾರಿಕೆಗಳು ಕೂಡ ಬೆಂದು ಹೋಗಿದೆ. ರಾಜ್ಯದಲ್ಲಿ 5.54 ಲಕ್ಷ ಎಂಎಸ್ಎಂಇ ಗಳಿವೆ. ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ವಾರ್ಷಿಕವಾಗಿ 13110 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ ಮಾಡುತ್ತದೆ. ಇಷ್ಟು ದಿನ ಇದರ ವೆಚ್ಚ 13,110 ಕೋಟಿ ರೂಪಾಯಿ ಆಗ್ತಿತ್ತು. ಆದರೆ ಸದ್ಯ 0.36 ಪೈಸೆ ವಿದ್ಯುತ್ ದರ ಹೆಚ್ಚಳದಿಂದ ವಾರ್ಷಿಕವಾಗಿ 1200 ಕೋಟಿ ರೂ ಹೆಚ್ಚುವರಿ ಹೊರೆಯಾಗಿದೆ ಎಂದು ಪೀಣ್ಯ ಕೈಗಾರಿಕಾ ಪ್ರದೇಶ ಅಧ್ಯಕ್ಷ ಆರ್. ಶಿವಕುಮಾರ್ ಹೇಳಿದ್ದಾರೆ.

ವಿದ್ಯುತ್‌ ದರ ಹೆಚ್ಚಳ ಬಗ್ಗೆ ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗ (ಕೆಇಆರ್‌ಸಿ) ಮಾರ್ಚ್ 27ರಂದು ಅಧಿಕೃತ ಆದೇಶ ಹೊರಡಿಸಿದೆ. ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳ ಮಾಡಲಾಗಿದೆ. ಪರಿಷ್ಕೃತ ವಿದ್ಯುತ್ ದರ ಏಪ್ರಿಲ್‌ 1ರಿಂದಲೇ ಅನ್ವಯವಾಗಲಿದೆ. ಮುಂದಿನ ಮೂರು ವರ್ಷಗಳಿಗೆ ದರ ಏರಿಕೆ ಮಾಡಲಾಗಿದೆ.

ಇದನ್ನೂ ಓದಿ
Image
ಬೆಂಗಳೂರು: ಫ್ಲೈಓವರ್​ಗಳಲ್ಲಿ ರಾತ್ರಿ ಸಂಚಾರಕ್ಕೆ ನಿರ್ಬಂಧ
Image
ಪತ್ನಿಯನ್ನ ತುಂಡರಿಸಿ ಸೂಟ್ ಕೇಸ್​ನಲ್ಲಿ ತುಂಬಿಟ್ಟ ಪತಿ!
Image
ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್‌ ದರ ಹೆಚ್ಚಳ!
Image
ಕನ್ನಡ ಮಾತನಾಡಿ ಎಂದಿದ್ದಕ್ಕೆ ಬಾತ್ರೂಮ್​ ಸ್ಪಚ್ಚಗೊಳಿಸದೇ ಹೋದ ಸಿಬ್ಬಂದಿ

ಇದನ್ನೂ ಓದಿ: ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್‌ ದರ ಹೆಚ್ಚಳ..ಯೂನಿಟ್​​ಗೆ ಎಷ್ಟು ಗೊತ್ತಾ?

ಒಟ್ಟಿನಲ್ಲಿ ವಿದ್ಯುತ್ ದರ ಎರೆಡೆರಡು ಬಾರಿ ಏರಿಕೆಯಾಗಿ ಜನರಿಗೆ ಭರ್ಜರಿ ಶಾಕ್ ಕೊಟ್ಟಿದ್ದರೆ, ಅತ್ತ ಕೈಗಾರಿಕೋದ್ಯಮ ಸದ್ಯ ತತ್ತರಿಸಿ‌ ಹೋಗಿದೆ. ಇಂಧನ ಇಲಾಖೆ ಏನಾದರೂ ದರ ಕಡಿಮೆ ಮಾಡುತ್ತಾ ಎಂದು ಕಾದು ನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ