AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಳ್ಯದಲ್ಲಿ ಪಿಎಫ್​ಐ ಕಾರ್ಯಕರ್ತರಿಗೆ ತರಬೇತಿ: ಗೃಹಸಚಿವ ಆರಗ ಜ್ಞಾನೇಂದ್ರ

ಪಿಎಫ್​​ಐ ತನ್ನ ಕಾರ್ಯಕರ್ತರಿಗೆ ತರಬೇತಿ ನೀಡುತ್ತಿದ್ದ ಜಾಗದ ಮಾಹಿತಿ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನಲ್ಲಿ ತರಬೇತಿ ನೀಡುತ್ತಿದ್ದರು ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಸುಳ್ಯದಲ್ಲಿ ಪಿಎಫ್​ಐ ಕಾರ್ಯಕರ್ತರಿಗೆ ತರಬೇತಿ: ಗೃಹಸಚಿವ ಆರಗ ಜ್ಞಾನೇಂದ್ರ
ಪಿಎಫ್​​ಐ ತನ್ನ ಕಾರ್ಯಕರ್ತರಿಗೆ ತರಬೇತಿ ನೀಡುತ್ತಿದ್ದ ಜಾಗದ ಮಾಹಿತಿ ಸಿಕ್ಕಿದೆ ಎಂದ ಗೃಹಸಚಿವ ಆರಗ ಜ್ಞಾನೇಂದ್ರ
TV9 Web
| Edited By: |

Updated on:Oct 07, 2022 | 2:23 PM

Share

ಬೆಂಗಳೂರು: ಪಿಎಫ್​​ಐ ತನ್ನ ಕಾರ್ಯಕರ್ತರಿಗೆ ತರಬೇತಿ ನೀಡುತ್ತಿದ್ದ ಜಾಗದ ಮಾಹಿತಿ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನಲ್ಲಿ ತರಬೇತಿ ನೀಡುತ್ತಿದ್ದರು. ಈ ಬಗ್ಗೆ ಕೆಲವು ಮಾಹಿತಿ ಸಿಕ್ಕಿದ್ದು, ಸಂಪೂರ್ಣ ತನಿಖೆ ನಡೆಸಲಾಗುತ್ತಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ದೇಶಾದ್ಯಂತ ಪಿಎಫ್​ಐ ಕಚೇರಿ ಹಾಗೂ ಮುಖಂಡರ ಮೇಲೆ ಎನ್​ಐಎ ಮತ್ತು ಪೊಲೀಸರು ನಡೆಸಿದ ದಾಳಿಯಲ್ಲಿ ಅನೇಕರನ್ನು ಬಂಧಿಸಲಾಗಿದ್ದು, ಕೇಂದ್ರ ಸರ್ಕಾರ ಐದು ವರ್ಷ ಸಂಘಟನೆಯನ್ನು ನಿಷೇಧಿಸಿದೆ. ಅಲ್ಲದೆ ಬಂಧಿತ ಆರೋಪಿಗಳನ್ನು ತೀವ್ರವಾಗಿ ವಿಚಾರಣೆ ನಡೆಸಲಾಗುತ್ತಿದ್ದು, ಆಘಾತಕಾರಿ ಮಾಹಿತಿಗಳು ಒಂದೊಂದಾಗಿಯೇ ಹೊರಬೀಳುತ್ತಿದೆ. ಈ ಪೈಕಿ ಕಾರ್ಯಕರ್ತರಿಗೆ ಉಗ್ರ ಮಾದರಿಯ ತರಬೇತಿ ನೀಡುತ್ತಿದ್ದ ಸಂಗತಿಯೂ ಒಂದಾಗಿದೆ.

ಪರೇಶ್ ಮೇಸ್ತ ಸಾವು ಪ್ರಕರಣದಲ್ಲಿ ಸಿಬಿಐ ಬಿ ರಿಪೋರ್ಟ್​​ ಸಲ್ಲಿಸಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಗೃಹಸಚಿವರು, ಪರೇಶ್ ತಂದೆ ಕೋರ್ಟ್​​ ಮೊರೆ ಹೋಗುವುದಾಗಿ ಹೇಳಿದ್ದಾರೆ. ಮಗನನ್ನು ಕೊಂದು ತಂದು ಹಾಕಿದ್ದಾರೆ ಅಂತ ಹೇಳಿದ್ದಾರೆ. ಪರೇಶ್ ಮೇಸ್ತ ಪ್ರಕರಣದ ಬಗ್ಗೆ ಮತ್ತೆ ತನಿಖೆ ನಡೆಯಲಿದೆ ಎಂದು ಹೇಳಿದ್ದಾರೆ.

ಸೆಲ್ಯುಲಾರ್ ಜೈಲ್ ಅನ್ನ ಒಮ್ಮೆ ಎಲ್ಲರೂ ನೋಡಿ

ವೀರ ಸಾವರ್ಕರ್ ಅವರ ನೆನಪಿಗಾಗಿ ಅರಮನೆ ಮೈದಾನದಲ್ಲಿ ಸೆಲ್ಯುಲಾರ್ ಜೈಲ್ ನಿರ್ಮಾಣ ಮಾಡಿದ್ದಾರೆ. ಸಾವರ್ಕರ್ ಜೈಲಿನಲ್ಲಿ ಹೇಗೆ ಇದ್ದರು ಎಂಬುದನ್ನು ಕಾರ್ಯಕರ್ತರು ಜೈಲು ನಿರ್ಮಾಣ ಮಾಡಿ ತೋರಿಸುತ್ತಿದ್ದಾರೆ. ಸೆಲ್ಯುಲಾರ್ ಜೈಲ್ ಅನ್ನ ಒಮ್ಮೆ ಎಲ್ಲರೂ ನೋಡುವಂತೆ ಗೃಹಸಚಿವರು ಮನವಿ ಮಾಡಿದ್ದಾರೆ. ಅವರು ಶಿಕ್ಷೆ ಅನುಭವಿಸಿದ ಜೈಲು ನೋಡಿದರೆ ಕರಳು ಹಿಚಕುತ್ತದೆ. ಅವರ ತ್ಯಾಗ ಬಲಿದಾನದಿಂದ ಇಂದು ನಾವು ಸ್ವಾತಂತ್ರ್ಯವಾಗಿದ್ದೇವೆ. ಸಾವರ್ಕರ್ ಬಗ್ಗೆ ಲಘುವಾಗಿ ಮಾತನಾಡುವುದು ಸರಿಯಲ್ಲ. ಮುಸ್ಲಿಂ ಕಾಲೋನಿಯಲ್ಲಿ ಯಾಕೆ ಹಾಕಿದ್ದೀರಿ ಎಂದು ಹೇಳುವುದು ಅಪಚಾರ, ಮಾನಸಿಕ ವಿರೋಧಿತನವಾಗಿದೆ. ಇಂತಹ ಸ್ವಾತಂತ್ರ್ಯ ಹೋರಾಟಗಾರನನ್ನ ಗೌರವಿಸಬೇಕು ಎಂದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:23 pm, Fri, 7 October 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?