AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಕೊರೊನಾ ಭೀತಿ: ಆಸ್ಪತ್ರೆ ನಿರ್ವಹಣೆಗೆ ಮುಂದಾದ ಸುಧಾಮೂರ್ತಿ

ಬೆಂಗಳೂರು: ಸಾಮಾಜಿಕ ಕಾರ್ಯಗಳಲ್ಲಿ ಸದಾ ತೊಡಗಿಸಿಕೊಂಡಿರುವ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರು ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ನೆರವು ನೀಡಲು ಮುಂದಾಗಿದ್ದಾರೆ. ಈ ಸಂಬಂಧ ಸಚಿವ ಸುರೇಶ್‌ ಕುಮಾರ್ ಫೇಸ್‌ಬುಕ್ ಪೋಸ್ಟ್​ ಮಾಡಿದ್ದಾರೆ. ನಿನ್ನೆ ಬೆಳಗ್ಗೆ ನನಗೆ ಇನ್ಫೋಸಿಸ್ ಫೌಂಡೇಷನ್​ನಿಂದ ಕರೆ ಬಂದಿತ್ತು.‌ ಸುಧಾಮೂರ್ತಿ ಅವರು ಮಾತನಾಡಿ ದೇಶ-ವಿದೇಶಗಳಲ್ಲಿ ಆತಂಕ ತಂದಿರುವ ಕೊರೊನಾ ವೈರಸ್ ವ್ಯಾಪಕವಾಗಿ ಹರಡದಂತೆ ನಮ್ಮ ರಾಜ್ಯದಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಿದರು. ಒಂದು ಆಸ್ಪತ್ರೆಯನ್ನು ತಮಗೆ ವಹಿಸಿದರೆ ಅದನ್ನು […]

ರಾಜ್ಯದಲ್ಲಿ ಕೊರೊನಾ ಭೀತಿ: ಆಸ್ಪತ್ರೆ ನಿರ್ವಹಣೆಗೆ ಮುಂದಾದ ಸುಧಾಮೂರ್ತಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Mar 13, 2020 | 9:11 AM

Share

ಬೆಂಗಳೂರು: ಸಾಮಾಜಿಕ ಕಾರ್ಯಗಳಲ್ಲಿ ಸದಾ ತೊಡಗಿಸಿಕೊಂಡಿರುವ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರು ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ನೆರವು ನೀಡಲು ಮುಂದಾಗಿದ್ದಾರೆ. ಈ ಸಂಬಂಧ ಸಚಿವ ಸುರೇಶ್‌ ಕುಮಾರ್ ಫೇಸ್‌ಬುಕ್ ಪೋಸ್ಟ್​ ಮಾಡಿದ್ದಾರೆ.

ನಿನ್ನೆ ಬೆಳಗ್ಗೆ ನನಗೆ ಇನ್ಫೋಸಿಸ್ ಫೌಂಡೇಷನ್​ನಿಂದ ಕರೆ ಬಂದಿತ್ತು.‌ ಸುಧಾಮೂರ್ತಿ ಅವರು ಮಾತನಾಡಿ ದೇಶ-ವಿದೇಶಗಳಲ್ಲಿ ಆತಂಕ ತಂದಿರುವ ಕೊರೊನಾ ವೈರಸ್ ವ್ಯಾಪಕವಾಗಿ ಹರಡದಂತೆ ನಮ್ಮ ರಾಜ್ಯದಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಿದರು.

ಒಂದು ಆಸ್ಪತ್ರೆಯನ್ನು ತಮಗೆ ವಹಿಸಿದರೆ ಅದನ್ನು ಚಿಕಿತ್ಸೆಗಾಗಿ ತಮ್ಮ ಸಂಸ್ಥೆಯ ವೆಚ್ಚದಲ್ಲಿ ಪೂರ್ಣಪ್ರಮಾಣದಲ್ಲಿ ಸಜ್ಜುಗೊಳಿಸುವುದಾಗಿ, ಅಗತ್ಯ ಉಪಕರಣಗಳನ್ನೂ ಒದಗಿಸುವುದಾಗಿ ಹೇಳಿದರು. ಅಷ್ಟೇ ಅಲ್ಲ, ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್, ಆರೋಗ್ಯ ಸಚಿವ ಶ್ರೀರಾಮುಲು ಅವರೊಂದಿಗೂ ತಮ್ಮ ಈ ಪಾತ್ರದ ಕುರಿತು ಚರ್ಚಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿಗಳಿಗೂ ಈ ಬಗ್ಗೆ ಪತ್ರ ಬರೆದಿದ್ದಾರೆ. ಸದ್ಯದಲ್ಲಿಯೇ ಈ ಕುರಿತು ಉನ್ನತಮಟ್ಟದ ಸಭೆ ನಡೆಯಲಿದೆ.‌

ಮಕ್ಕಳ ಹಿತವನ್ನು‌ ಗಮನದಲ್ಲಿಟ್ಟುಕೊಂಡು ಶಾಲೆಗಳಿಗೆ ರಜೆ ಘೋಷಿಸಿರುವ ಕ್ರಮ ವಿವರಿಸಿದೆ. ಇಷ್ಟು ಬೇಗ ಕ್ರಮ ತೆಗೆದುಕೊಂಡಿರುವ ಬಗ್ಗೆ ಸುಧಾಮೂರ್ತಿ ಅವರು ಸಂತಸ ವ್ಯಕ್ತಪಡಿಸಿದರು‌‌. ಈ ಹೃದಯವಂತಿಕೆ ನನ್ನ ಹೃದಯ ತುಂಬಿತು.‌ ನಿಜವಾದ ಮಾತೃಕಾಳಜಿ ಈ ಮಹಾತಾಯಿಯದು ಎಂದು ಸುರೇಶ್‌ ಕುಮಾರ್ ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದಾರೆ.

Published On - 9:10 am, Fri, 13 March 20

Follow Us
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK