ಅಮಾಯಕರನ್ನು ಬಂಧಿಸಿರುವುದು‌ ನಿಜ, ಚಾರ್ಜ್​ಶೀಟ್​​ನಲ್ಲಿ ‌ಅವರ ಹೆಸರು ಕೈಬಿಡಲು ಸೂಚನೆ: ಚಲುವರಾಯಸ್ವಾಮಿ

ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ ಕೇಸ್​ಗೆ ಸಂಬಂಧಿಸಿದಂತೆ ಇಂದು ನಾಗಮಂಗಲದಲ್ಲಿ ಶಾಂತಿಸಭೆ ಮಾಡಲಾಗಿದೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಅಮಾಯಕರನ್ನು ಬಂಧಿಸಿರುವುದು‌ ನಿಜ. ಚಾರ್ಜ್​ಶೀಟ್​​ನಲ್ಲಿ ‌ಅವರ ಹೆಸರು ಕೈಬಿಡಲು ಸೂಚನೆ ‌ನೀಡಿದ್ದೇನೆ ಎಂದು ಹೇಳಿದ್ದಾರೆ.

ಅಮಾಯಕರನ್ನು ಬಂಧಿಸಿರುವುದು‌ ನಿಜ, ಚಾರ್ಜ್​ಶೀಟ್​​ನಲ್ಲಿ ‌ಅವರ ಹೆಸರು ಕೈಬಿಡಲು ಸೂಚನೆ: ಚಲುವರಾಯಸ್ವಾಮಿ
ಅಮಾಯಕರನ್ನು ಬಂಧಿಸಿರುವುದು‌ ನಿಜ, ಚಾರ್ಜ್​ಶೀಟ್​​ನಲ್ಲಿ ‌ಅವರ ಹೆಸರು ಕೈಬಿಡಲು ಸೂಚನೆ: ಚಲುವರಾಯಸ್ವಾಮಿ
Edited By:

Updated on: Sep 14, 2024 | 3:42 PM

ಮಂಡ್ಯ, ಸೆಪ್ಟೆಂಬರ್ 14: ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಗಲಭೆ ಕೇಸ್​​ನಲ್ಲಿ ಅಮಾಯಕರನ್ನು ಬಂಧಿಸಿರುವುದು‌ ನಿಜ. ಚಾರ್ಜ್​ಶೀಟ್​​ನಲ್ಲಿ ‌ಅವರ ಹೆಸರು ಕೈಬಿಡಲು ಸೂಚನೆ ‌ನೀಡಿದ್ದೇನೆ ಎಂದು ಸಚಿವ ಚಲುವರಾಯಸ್ವಾಮಿ (Chaluvaraya Swamy) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಘಟನೆಗೆ ಕಾರಣರಾದವರನ್ನು ಪತ್ತೆ ಹಚ್ಚಿ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

ಯಾರನ್ನೂ‌ ರಕ್ಷಣೆ ಮಾಡುವ ಕೆಲಸ ಮಾಡಿಲ್ಲ

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಹೆಸರು ಕೈಬಿಟ್ಟಿರುವ ವಿಚಾರವಾಗಿ ಮಾತನಾಡಿದ್ದು, ಗಲಭೆಯಲ್ಲಿ ರಾಜೇಶ್ ಭಾಗವಹಿಸಿರಲಿಲ್ಲ. ಸಿಸಿಟಿವಿ ಆಧರಿಸಿ ಅರೆಸ್ಟ್ ಮಾಡಿದರೆ 500 ಜನರು ಆಗುತ್ತಾರೆ. ಮೆರವಣಿಗೆ ‌ಟೀಂನಲ್ಲಿ ರಾಜೇಶ್ ಪುತ್ರ ಇದ್ದಿದ್ದಕ್ಕೆ ಬಂಧಿಸಿದ್ದಾರೆ. ಯಾರನ್ನೂ‌ ರಕ್ಷಣೆ ಮಾಡುವ ಕೆಲಸ ಮಾಡಿಲ್ಲ. ಆ ಮೂಲಕ ತಮ್ಮ ಆಪ್ತನನ್ನು ಚಲುವರಾಯಸ್ವಾಮಿ ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ಮಂಡ್ಯ ಗಲಭೆ: ನಾಗಮಂಗಲಕ್ಕೆ ಬಾರದಂತೆ ಪ್ರಮೋದ್ ಮುತಾಲಿಕ್​ಗೆ ನಿರ್ಬಂಧ

ರಾಜ್ಯಕ್ಕೆ ನಾಗಮಂಗಲ ಯಥಾಸ್ಥಿತಿಗೆ ತಲುಪಿದ ಬಗ್ಗೆ ಸಂದೇಶ ಕೊಡಬೇಕು. ಒಂದು ಬಾರಿ ಅರೆಸ್ಟ್ ಆದರೆ ಜಾಮೀನು ಪಡೆಯಲೇಬೇಕು. ಅಮಾಯಕರೆಂದು ಖಚಿತವಾದರೆ ಜಾರ್ಜ್‌ಶೀಟ್ ವೇಳೆ ಕೈಬಿಡುತ್ತೇವೆ. ಗುಂಪು ಘರ್ಷಣೆಗಳಾದ ಕೆಲವೊಮ್ಮೆ ಕೆಲವರನ್ನ ವಶಕ್ಕೆ ಪಡೆಲಾಗುತ್ತದೆ. ಸಿಸಿಟವಿ ನೋಡಿಯೋ, ಗುಂಪಲ್ಲಿದ್ದರು ಅನ್ನೋ‌ ಕಾರಣಕ್ಕೋ ಬಂಧಿಸಿರುತ್ತಾರೆ. ಅಮಾಯಕರಿದ್ದರೆ ಖಂಡಿತವಾಗಿ ಜಾರ್ಜ್‌ಶೀಟ್ ವೇಳೆ ಕೈಬಿಡುತ್ತೇವೆ ಎಂದಿದ್ದಾರೆ.

ನಾಗಮಂಗಲದಲ್ಲಿ ಮತ್ತೆ ಶಾಂತಿ ಸ್ಥಾಪನೆ ಕುರಿತು ಚರ್ಚೆ ಮಾಡಿದ್ದೇವೆ. ನಾಳೆಯಿಂದ ನಾಗಮಂಗಲದಲ್ಲಿ ಗಣಪತಿ ಉತ್ಸವ ನಡೆಯಲಿದೆ. ಶಾಂತಿ ಸ್ಥಾಪನೆಗೆ ಎಲ್ಲ ಪಕ್ಷ, ಸಂಸ್ಥೆ, ಸಾರ್ವಜನಿಕರು ಸಹಕರಿಸಬೇಕು ಎಂದು ತಿಳಿಸಿದ್ದಾರೆ.

ಸೋಮವಾರ ಮುಸ್ಲಿಂರ ಹಬ್ಬವಿರುವುದರಿಂದ ಗಣಪತಿ ವಿಸರ್ಜನೆ ಬೇಡ ಎಂದಿದ್ದೇವೆ. ನಾಗಮಂಗಲದಲ್ಲಿ ನಡೆದ ಘಟನೆ ಕೆಟ್ಟ ಘಳಿಗೆ, ಯಾರ ಕಣ್ಣು ಬಿದ್ದಿತ್ತೊ ಗೊತ್ತಿಲ್ಲ. ನಂಬಲು ಸಾಧ್ಯವಾಗದ ಘಟನೆ ನಡೆದು ಹೋಗಿದೆ. ರಾಜಕಾರಣಿಗಳು, ಸಂಘಟನೆಗಳು ಈ ವಿಚಾರ ಇನ್ಮುಂದೆ ಪ್ರಸ್ತಾಪ ಮಾಡುವುದನ್ನ ನಿಲ್ಲಿಸಿ. ಬಿಜೆಪಿ, ಜೆಡಿಎಸ್, ಕಾಂಗ್ರೆಸ್‌ ಸ್ನೇಹಿತರಿದ್ದಾರೆ. ನಮ್ಮೆಲ್ಲರ ಉದ್ದೇಶ ಕರ್ನಾಟಕ ಶಾಂತಿ ಆಗಿರಬೇಕು. ಜನರು ನೆಮ್ಮದಿ ಬದುಕು ಬದುಕಬೇಕು. ನಾಗಮಂಗಲ ಯಥಾಸ್ಥಿತಿಗೆ ಬಂದಿದೆ ಎಂದರು.

ಇದನ್ನೂ ಓದಿ: Mandya Violence: ನಾಗಮಂಗಲ ಗಲಭೆ ಸಂತ್ರಸ್ತರಿಗೆ 2 ಲಕ್ಷ ರೂ.ವರೆಗೆ ಪರಿಹಾರ ನೀಡಿದ ಹೆಚ್​ಡಿ ಕುಮಾರಸ್ವಾಮಿ

ಈ ಘಟನೆ ಹಿಂದೆ ಯಾರ ಕೈವಾಡವಿದೆ ತಿಳಿಯಲು ವಿಶೇಷ ತನಿಖೆ ನಡೆಸಲಾಗುವುದು. ನಷ್ಟ ಪ್ರಮಾಣ ವರದಿ ಸಿದ್ದವಾಗಲಿದೆ. ಸರ್ಕಾರಕ್ಕೆ ಕಳುಹಿಸಿ ಪರಿಹಾರಕ್ಕೆ ಕ್ರಮವಹಿಸಲಾಗುವುದು. ಕುಮಾರಸ್ವಾಮಿ ಹೇಳಿಕೆ ಏನೇ ಇದ್ದರು ನೊಂದವರಿಗೆ ಪರಿಹಾರ ಕೊಟ್ಟಿದ್ದಾರೆ, ಅಭಿನಂದನೆ ಸಲ್ಲಿಸುತ್ತೇನೆ. ಈ ಸಮಯದಲ್ಲಿ ರಾಜಕೀಯ ಬೇಡ ಎಂದು ಮನವಿ ಮಾಡುತ್ತೇನೆ. ಈ ಘಟನೆ ಇಲ್ಲಿಗೆ ನಿಲ್ಲಲು ಮಾಧ್ಯಮದವರ ಸಹಕಾರಬೇಕು ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
Follow Us