AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರ್ತಾ ಆಯುಕ್ತರಿಂದ ವಿಷ್ಣುವರ್ಧನ್ ಸ್ಮಾರಕ ಸ್ಥಳದ ಪರಿಶೀಲನೆ

ಸುಮಾರು 11 ಕೋಟಿ ರೂಪಾಯಿ ಯೋಜನೆ ಇದಾಗಿದ್ದು , 5 ಎಕರೆ ವಿಶಾಲ ಪ್ರದೇಶದಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಷ್ಣು ಸ್ಮಾರಕವನ್ನು ಅತ್ಯಂತ ಕ್ಷಿಪ್ರವಾಗಿ ಹಾಗೂ ಉತ್ಕೃಷ್ಟವಾಗಿ ನಾಡಿಗೆ ನೀಡುವ ಸಂಕಲ್ಪಕ್ಕೆ ವಾರ್ತಾ ಇಲಾಖೆ ಕಟಿಬದ್ಧವಾಗಿದೆ ಎಂದು ಹರ್ಷ ತಿಳಿಸಿದ್ದಾರೆ.

ವಾರ್ತಾ ಆಯುಕ್ತರಿಂದ ವಿಷ್ಣುವರ್ಧನ್ ಸ್ಮಾರಕ ಸ್ಥಳದ ಪರಿಶೀಲನೆ
ಸ್ಥಳ ಪರಿಶಿಲನೆ ನಡೆಸುತ್ತಿರುವ ಪ್ರಚಾರ ಇಲಾಖೆ ಆಯುಕ್ತರಾದ ಡಾ. ಪಿ. ಎಸ್. ಹರ್ಷ
preethi shettigar
| Updated By: ರಶ್ಮಿ ಕಲ್ಲಕಟ್ಟ|

Updated on: Jan 08, 2021 | 7:06 PM

Share

ಮೈಸೂರು: ಜಿಲ್ಲೆಯಿಂದ ಸುಮಾರು 6 ಕಿ. ಮೀ ಅಂತರದಲ್ಲಿರುವ ಹಾಲಾಳು ಗ್ರಾಮದಲ್ಲಿ ನಿರ್ಮಾಣಗೊಳ್ಳುತ್ತಿರುವ ಖ್ಯಾತ ನಟ, ಸಾಹಸ ಸಿಂಹ ವಿಷ್ಣುವರ್ಧನ್ ಸ್ಮಾರಕ ಸ್ಥಳಕ್ಕೆ ವಾರ್ತಾ ಮತ್ತು ಪ್ರಚಾರ ಇಲಾಖೆ ಆಯುಕ್ತರಾದ ಡಾ. ಪಿ. ಎಸ್. ಹರ್ಷ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇಮೇಜ್ ಗ್ಯಾಲರಿ ಮತ್ತು ಸಭಾಂಗಣದ ಕಾಮಗಾರಿ ಆರಂಭಗೊಂಡಿದ್ದು, ವಿಶ್ವ ದರ್ಜೆಯ ಸ್ಮಾರಕ ಸ್ಥಳ ಇದಾಗಬೇಕೆಂಬ ಆಶಯ ತಮ್ಮದಾಗಿದೆ ಎಂದು ಡಾ. ಹರ್ಷ ತಿಳಿಸಿದ್ದು, ರಾಜ್ಯ ಸರ್ಕಾರವೂ ಸಹ ಈ ನಿಟ್ಟಿನಲ್ಲಿ ಅತೀವ ಆಸಕ್ತಿ ವಹಿಸುತ್ತಿದೆ ಎಂದು ಹೇಳಿದರು.

ಸುಮಾರು 11 ಕೋಟಿ ರೂಪಾಯಿ ಯೋಜನೆ ಇದಾಗಿದ್ದು , 5 ಎಕರೆ ವಿಶಾಲ ಪ್ರದೇಶದಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಷ್ಣು ಸ್ಮಾರಕವನ್ನು ಅತ್ಯಂತ ಕ್ಷಿಪ್ರವಾಗಿ ಹಾಗೂ ಉತ್ಕೃಷ್ಟವಾಗಿ ನಾಡಿಗೆ ನೀಡುವ ಸಂಕಲ್ಪಕ್ಕೆ ವಾರ್ತಾ ಇಲಾಖೆ ಕಟ್ಟುಬದ್ಧವಾಗಿದೆ ಎಂದು ಹರ್ಷ ತಿಳಿಸಿದ್ದಾರೆ.

ಸ್ಥಳ ಪರಿಶೀಲನೆ ನಡೆಸುತ್ತಿರುವ ಅಧಿಕಾರಿಗಳು

ಪೊಲೀಸ್ ಗೃಹ ನಿರ್ಮಾಣ ಸಂಸ್ಥೆ ಕೈಗೆತ್ತಿಕೊಂಡಿರುವ ಈ ಕಾಮಗಾರಿಯ ನಿರ್ವಹಣೆಯನ್ನು ರೇವನಿ ಪ್ರಸಾದ್ ಕನ್ಸ್ಟ್ರಕ್ಷನ್ ಕಂಪನಿ ಮಾಡುತ್ತಿದ್ದು, 11 ತಿಂಗಳ ಒಳಗಾಗಿ ಕನ್ನಡ ನಾಡಿಗೆ ಸಾಹಸ ಸಿಂಹ ವಿಷ್ಣುವರ್ಧನ್ ಸ್ಮಾರಕ ಸಮರ್ಪಣೆ ಮಾಡಲಿದೆ ಎಂದು ಹೇಳಿದರು.

ವಾರ್ತಾ ಆಯುಕ್ತರ ಈ ಪರಿಶೀಲನಾ ಭೇಟಿಯ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಹಾಯಕ ಇಂಜಿನಿಯರುಗಳಾದ ಮಂಜುನಾಥ್ ಸ್ಮಾರಕದ ರೂಪುರೇಷೆಗಳನ್ನು ನಕ್ಷೆಯೊಂದಿಗೆ ವಿವರಿಸಿದ್ದು, ವಾರ್ತಾ ಅಧಿಕಾರಿ ವಿಜಯಾನಂದ್ ಹಾಗೂ ಅಶೋಕ್ ಕುಮಾರ್ ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು.

ಡಾ.ವಿಷ್ಣು ಅಭಿಮಾನಿಗಳಿಗೆ ಸಿಹಿ ಸುದ್ದಿ: ಧ್ವಂಸವಾದ ಜಾಗದಲ್ಲೇ ಮತ್ತೆ ತಲೆ ಎತ್ತಲಿದೆ ಸಾಹಸಸಿಂಹನ ಪ್ರತಿಮೆ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!