AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಸ್​ಪೆಕ್ಟರ್​ ನಂದೀಶ್​ ಸಾವು ಪ್ರಕರಣ: ಆರೋಪ-ಪ್ರತ್ಯಾರೋಪದ ಬಗ್ಗೆ ಪೊಲೀಸ್ ಮಹಾನಿರ್ದೇಶಕರು ಹೇಳಿದ್ದೇನು?

ಇನ್ಸ್​ಪೆಕ್ಟರ್ ನಂದೀಶ್ ಸಾವು ಪ್ರಕರಣ ಸಂಬಂಧ ಆರೋಪ ಪ್ರತ್ಯಾರೋಪಗಳು ಕೇಳಿಬರುತ್ತಿದ್ದು, ಈ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಪ್ರತಿಕ್ರಿಯೆ ನೀಡಿದ್ದಾರೆ. ಚರ್ಚೆಯನ್ನು ನಾವು ತಡೆಯಲು ಹೋಗಲ್ಲವೆಂದು ಹೇಳಿದ್ದಾರೆ.

ಇನ್ಸ್​ಪೆಕ್ಟರ್​ ನಂದೀಶ್​ ಸಾವು ಪ್ರಕರಣ: ಆರೋಪ-ಪ್ರತ್ಯಾರೋಪದ ಬಗ್ಗೆ ಪೊಲೀಸ್ ಮಹಾನಿರ್ದೇಶಕರು ಹೇಳಿದ್ದೇನು?
ಇನ್ಸ್​ಪೆಕ್ಟರ್​ ನಂದೀಶ್ ಸಾವು ಪ್ರಕರಣ:​ ಪೊಲೀಸ್ ಮಹಾನಿರ್ದೇಶಕರ ಪ್ರತಿಕ್ರಿಯೆ
TV9 Web
| Edited By: |

Updated on:Oct 30, 2022 | 12:02 PM

Share

ಬೆಂಗಳೂರು: ಅಮಾನತುಗೊಂಡಿದ್ದ ಕೆ.ಆರ್.ಪುರಂ ಠಾಣೆ ಇನ್ಸ್​ಪೆಕ್ಟರ್​ ನಂದೀಶ್​ ಸಾವು ವಿಚಾರ ಸಂಬಂಧ ಆರೋಪ ಪ್ರತ್ಯಾರೋಪಗಳು ಕೇಳಿಬರುತ್ತಿವೆ. ಈ ಬಗ್ಗೆ ನಗರದಲ್ಲಿ ಪ್ರತಿಕ್ರಿಯೆ ನೀಡಿದ ಪೊಲೀಸ್ ಮಹಾನಿರ್ದೇಶಕ (ಡಿಜಿ ಮತ್ತು ಐಜಿಪಿ) ಪ್ರವೀಣ್ ಸೂದ್, ಪೋಸ್ಟಿಂಗ್​ಗೆ ಹಣ ಪಡೆಯುತ್ತಿರುವ ಬಗ್ಗೆ ಚರ್ಚೆಯಾಗುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮುಕ್ತವಾಗಿ ಚರ್ಚೆ ನಡೆಯಬೇಕು, ಚರ್ಚೆಯನ್ನು ನಾವು ತಡೆಯಲು ಹೋಗುವುದಿಲ್ಲ. ಆರೋಪ, ಪ್ರತ್ಯಾರೋಪದ ಬಗ್ಗೆ ನಾವು ಹೇಳುವ ಅವಶ್ಯಕತೆಯಿಲ್ಲ. ಸತ್ಯಾಂಶ ಎಲ್ಲರಿಗೂ ಗೊತ್ತಿದೆ, ಆ ರೀತಿ ಯಾವುದೂ ಆಗಿಲ್ಲ ಎಂದರು.

ಇನ್ನು ನಂದೀಶ್ ಸಾವು ಪ್ರಕರಣ ಸಂಬಂಧ ಹೇಳಿಕೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೆ.ಆರ್.ಪುರಂ ಠಾಣೆ ಇನ್ಸ್​ಪೆಕ್ಟರ್​ ನಂದೀಶ್​ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಡಿಜಿ ಮತ್ತು ಐಜಿಪಿ ಪ್ರವೀಣ್​​ ಸೂದ್ ಅವರು​ ನನ್ನನ್ನು ಭೇಟಿಯಾಗಿದ್ದರು. ಈ ಬಗ್ಗೆ ಮಾಹಿತಿ ಪಡೆದು ವರದಿ ನೀಡುವಂತೆ ಸೂಚಿಸುತ್ತೇನೆ ಎಂದರು.

ಸಾವು ಬಗ್ಗೆ ನಿನ್ನೆ ಹೇಳಿಕೆ ನೀಡಿದ್ದ ಗೃಹಸಚಿವ ಆರಗ ಜ್ಞಾನೇಂದ್ರ ಅವರು ನಂದೀಶ್ ಅವರನ್ನು ಅಮಾನತು ಮಾಡಿರುವುದನ್ನು ಸಮರ್ಥಿಸಿಕೊಂಡರು. ಪಿಐ ನಂದೀಶ್​ ಹೃದಯಾಘಾತದಿಂದ ನಿಧನರಾಗಿದ್ದಾರೆಂದು ಮಾಹಿತಿ ಇದೆ. ಈಗ ಯಾವ್ಯಾವುದಕ್ಕೋ ಲಿಂಕ್​ ಮಾಡಿ ಮಾತಾಡುವುದು ಸರಿಯಲ್ಲ. ಕ್ಯಾಬರೆ, ಇಸ್ಪೀಟ್​ ಕ್ಲಬ್, ಕ್ಯಾಸಿನೋ ಬಂದಾಗಬೇಕೆಂದು ಸೂಚನೆ ನೀಡಲಾಗಿತ್ತು. ಕೆಲವು ಠಾಣಾ ವ್ಯಾಪ್ತಿಯಲ್ಲಿ ಮತ್ತೆ ಓಪನ್​ ಮಾಡುವ ಕೆಲಸ ನಡೆದಿತ್ತು. ಈ ಬಗ್ಗೆ ನಗರ ಪೊಲೀಸ್ ಆಯುಕ್ತರು ಸುತ್ತೋಲೆ ಹೊರಡಿಸಿದ್ದರು. ಅಕ್ರಮ ನಡೆಯುತ್ತಿದ್ದರೆ ಸ್ಥಳೀಯ ಅಧಿಕಾರಿ ಹೊಣೆಮಾಡುವಂತೆ ಹೇಳಿದ್ದೆ. ಕಟ್ಟುನಿಟ್ಟಿನ ಸೂಚನೆ ನೀಡಿದ್ದರೂ ಅಲ್ಲಿ ರೇವ್ ಪಾರ್ಟಿ ನಡೆಯುತ್ತಿತ್ತು. ಪಾರ್ಟಿಯಲ್ಲಿ ಸೂಡಾನ್​ ದೇಶದ 20 ಪ್ರಜೆಗಳು ಭಾಗವಹಿಸಿದ್ದರು. ಸಿಸಿಬಿ ದಾಳಿ ನಡೆಸಿದ್ದ ಹಿನ್ನೆಲೆಯಲ್ಲಿ ಆಯುಕ್ತರು,​ ನಂದೀಶ್ ಅವರನ್ನು​ ಅಮಾನತು ಮಾಡಿ ನನಗೆ ಮಾಹಿತಿ ನೀಡಿದ್ದರು ಎಂದು ಸ್ಪಷ್ಟಪಡಿಸಿದ್ದರು.

ಏನಿದು ಪ್ರಕರಣ?

ನಂದೀಶ್‌ ಮೈಸೂರಿನ ಹುಣಸೂರು ಮೂಲದವರಾಗಿದ್ದು, ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ 2019 ರಿಂದ 2020ರವರೆಗೆ ಕಾರ್ಯ ನಿರ್ವಹಿಸಿದ್ದರು. ಬಳಿಕ ಕೆಆರ್​ ಪುರಂ ಠಾಣೆಯ ಇನ್ಸ್​​ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ನಂದೀಶ್, ಕಳೆದ ವಾರವಷ್ಟೇ ಸಸ್ಪೆಂಡ್​ ಆಗಿದ್ದರು. ಏರಿಯಾದಲ್ಲಿ ಅವಧಿ ಮೀರಿ ಪಬ್​ ನಡೆಸಲು ಅವಕಾಶ ನೀಡಿದ್ದಕ್ಕೆ ಅಮಾನತು ಮಾಡಿ ಕಮಿಷನರ್ ಪ್ರತಾಪ್ ರೆಡ್ಡಿ ಆದೇಶಿಸಿದ್ದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:02 pm, Sun, 30 October 22

ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ