AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Udupi: ಉಡುಪಿಯಲ್ಲಿ 2 ಕೋಟಿ ವೆಚ್ಚದ ಗಣಪತಿ ದೇವಸ್ಥಾನ ಕಟ್ಟಿಸಿದ ಕ್ರೈಸ್ತ ಉದ್ಯಮಿ; ಕಾರಣ ಕೇಳಿದರೆ ಆಶ್ಚರ್ಯ ಪಡ್ತೀರ!

ಉಡುಪಿ: ಆಗಾಗ ಕೋಮುಗಲಭೆಗಳಿಂದ ಸುದ್ದಿಯಾಗುತ್ತಲೇ ಇರುವ ಉಡುಪಿ ಮತ್ತು ಮಂಗಳೂರಿನಲ್ಲಿ ಎಲ್ಲ ಧರ್ಮೀಯರೂ ಇದ್ದಾರೆ. ಹಿಂದೂ, ಮುಸ್ಲಿ. ಕ್ರೈಸ್ತ, ಜೈನ ಧರ್ಮೀಯರು ಸಹಬಾಳ್ವೆಯಿಂದಲೇ ಜೀವನ ನಡೆಸುತ್ತಿದ್ದಾರೆ. ಈ ಕೋಮುಸೌಹಾರ್ದತೆಗೆ ಮತ್ತೊಂದು ಉದಾಹರಣೆಯೆಂಬಂತೆ ಉಡುಪಿ ಜಿಲ್ಲೆಯ ಶಿರ್ವ ಎಂಬಲ್ಲಿ ತಮ್ಮ ಸ್ವಂತ ಜಮೀನಿನಲ್ಲಿ ಉದ್ಯಮಿಯೊಬ್ಬರು 2 ಕೋಟಿ ರೂ. ವೆಚ್ಚದಲ್ಲಿ ಸಿದ್ಧಿವಿನಾಯಕ ದೇವಸ್ಥಾನವನ್ನು ಕಟ್ಟಿಸಿದ್ದಾರೆ. ಈ ವಿಚಾರ ವಿಶೇಷವಾಗುವುದಕ್ಕೆ ಇನ್ನೂ ಒಂದು ಕಾರಣವಿದೆ. ಈ ದೇವಸ್ಥಾನವನ್ನು ಕಟ್ಟಿಸಿದ ಉದ್ಯಮಿ ಕ್ರೈಸ್ತ ಧರ್ಮಕ್ಕೆ ಸೇರಿದವರು! ಮುಂಬೈನಲ್ಲಿ ನೆಲೆಸಿರುವ ಉಡುಪಿಯ ಶಿರ್ವದ […]

Udupi: ಉಡುಪಿಯಲ್ಲಿ 2 ಕೋಟಿ ವೆಚ್ಚದ ಗಣಪತಿ ದೇವಸ್ಥಾನ ಕಟ್ಟಿಸಿದ ಕ್ರೈಸ್ತ ಉದ್ಯಮಿ; ಕಾರಣ ಕೇಳಿದರೆ ಆಶ್ಚರ್ಯ ಪಡ್ತೀರ!
ಉಡುಪಿಯಲ್ಲಿ ನಿರ್ಮಿಸಿರುವ 2 ಕೋಟಿ ವೆಚ್ಚದ ಗಣೇಶ ದೇವಸ್ಥಾನ
TV9 Web
| Edited By: |

Updated on: Jul 23, 2021 | 6:36 PM

Share

ಉಡುಪಿ: ಆಗಾಗ ಕೋಮುಗಲಭೆಗಳಿಂದ ಸುದ್ದಿಯಾಗುತ್ತಲೇ ಇರುವ ಉಡುಪಿ ಮತ್ತು ಮಂಗಳೂರಿನಲ್ಲಿ ಎಲ್ಲ ಧರ್ಮೀಯರೂ ಇದ್ದಾರೆ. ಹಿಂದೂ, ಮುಸ್ಲಿ. ಕ್ರೈಸ್ತ, ಜೈನ ಧರ್ಮೀಯರು ಸಹಬಾಳ್ವೆಯಿಂದಲೇ ಜೀವನ ನಡೆಸುತ್ತಿದ್ದಾರೆ. ಈ ಕೋಮುಸೌಹಾರ್ದತೆಗೆ ಮತ್ತೊಂದು ಉದಾಹರಣೆಯೆಂಬಂತೆ ಉಡುಪಿ ಜಿಲ್ಲೆಯ ಶಿರ್ವ ಎಂಬಲ್ಲಿ ತಮ್ಮ ಸ್ವಂತ ಜಮೀನಿನಲ್ಲಿ ಉದ್ಯಮಿಯೊಬ್ಬರು 2 ಕೋಟಿ ರೂ. ವೆಚ್ಚದಲ್ಲಿ ಸಿದ್ಧಿವಿನಾಯಕ ದೇವಸ್ಥಾನವನ್ನು ಕಟ್ಟಿಸಿದ್ದಾರೆ. ಈ ವಿಚಾರ ವಿಶೇಷವಾಗುವುದಕ್ಕೆ ಇನ್ನೂ ಒಂದು ಕಾರಣವಿದೆ. ಈ ದೇವಸ್ಥಾನವನ್ನು ಕಟ್ಟಿಸಿದ ಉದ್ಯಮಿ ಕ್ರೈಸ್ತ ಧರ್ಮಕ್ಕೆ ಸೇರಿದವರು!

ಮುಂಬೈನಲ್ಲಿ ನೆಲೆಸಿರುವ ಉಡುಪಿಯ ಶಿರ್ವದ 77 ವರ್ಷದ ಕ್ರೈಸ್ತ ಉದ್ಯಮಿ ಗೇಬ್ರಿಯೆಲ್ ನಜರೆತ್ ತಮ್ಮ ಮನೆಯ ಬಳಿ ಇರುವ ಸ್ವಂತ ಜಮೀನಿನಲ್ಲಿ ಬೃಹತ್ ಗಣಪತಿ ದೇವಸ್ಥಾನವನ್ನು ಕಟ್ಟಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಇದಕ್ಕೆ ಕಾರಣವೇನೆಂದು ತಿಳಿದರೆ ಇನ್ನಷ್ಟು ಅಚ್ಚರಿಯಾಗುವುದು ಖಚಿತ. ಗೇಬ್ರಿಯೆಲ್ ಅವರು ತಮ್ಮ ತಂದೆ-ತಾಯಿಯ ನೆನಪಿನಲ್ಲಿ ಈ ಗಣಪತಿ ದೇವಸ್ಥಾನವನ್ನು ಕಟ್ಟಿಸಿ, ಅದನ್ನು ಹಿಂದೂಗಳಿಗೆ ಉಡುಗೊರೆಯಾಗಿ ನೀಡಿದ್ದಾರೆ. ಗೇಬ್ರಿಯೆಲ್ ಅವರ ತಂದೆ ಫ್ಯಾಬಿಯನ್ ಸೆಬಾಸ್ಟಿಯನ್ ನಜರೆತ್ ಮತ್ತು ತಾಯಿ ಸಬೀನಾ ನಜರೆತ್ ಅವರಿಂದ ಬಂದ ಜಮೀನಿನಲ್ಲಿ ಗಣಪತಿ ದೇವಸ್ಥಾನವನ್ನು ನಿರ್ಮಿಸಲಾಗಿದೆ.

60 ವರ್ಷಗಳ ಹಿಂದೆ ನಾನು ಗಣಪತಿಯ ಭಕ್ತನಾದೆ. ಅಂದಿನಿಂದ ನನಗೆ ಗಣಪತಿ ಎಲ್ಲವನ್ನೂ ಒಳ್ಳೆಯದೇ ಮಾಡಿದ್ದಾನೆ. 1959ರಲ್ಲಿ ನಾನು ಎಸ್‌ಎಸ್‌ಎಲ್​ಸಿ ಮುಗಿಸಿ ಉದ್ಯೋಗ ಹುಡುಕಿಕೊಂಡು ಮುಂಬೈಗೆ ಹೋದೆ. ಆಗ ನನಗೆ ಕೇವಲ 14 ವರ್ಷವಾಗಿತ್ತು. ಆಗ ಮುಂಬೈನ ಪ್ರಭಾದೇವಿ ಬಳಿ ಉಳಿದುಕೊಂಡಿದ್ದೆ. ಅಲ್ಲೇ ಒಂದು ಸಿದ್ಧಿ ವಿನಾಯಕನ ದೇವಸ್ಥಾನವಿತ್ತು. ದಿನವೂ ಕೆಲಸ ಹುಡುಕಲು ಹೋಗುವಾಗ ಆ ದೇವಸ್ಥಾನಕ್ಕೆ ನಮಸ್ಕಾರ ಮಾಡಿ ಹೋಗುತ್ತಿದ್ದೆ. ಆತನಿಂದಲೇ ನಾನಿಂದು ಇಷ್ಟು ದೊಡ್ಡ ಉದ್ಯಮಿಯಾಗಿದ್ದೇನೆ ಎಂದು ಗೇಬ್ರಿಯೆಲ್ ತಾವು ಗಣಪತಿ ದೇವಸ್ಥಾನವನ್ನು ಕಟ್ಟಿಸಿದ ಹಿಂದಿನ ಕತೆಯನ್ನು ಹೇಳಿದ್ದಾರೆ.

ಗಣಪತಿ ದೇವಸ್ಥಾನ ಕಟ್ಟಿಸಿದ ಉದ್ಯಮಿ ಗೇಬ್ರಿಯೆಲ್

10ನೇ ತರಗತಿ ಮುಗಿಸಿ, ಮುಂಬೈನಲ್ಲಿ ಉದ್ಯೋಗ ಅರಸುತ್ತಿದ್ದ ಗೇಬ್ರಿಯೆಲ್ ಬಳಿಕ ಮೆಟಲ್ ಡೈಯ್ಯಿಂಗ್ ವರ್ಕ್​ಶಾಪ್ ಆರಂಭಿಸಿದರು ಅದರಲ್ಲಿ ಯಶಸ್ಸು ಕಂಡ ಅವರು ನಂತರ ಮೂರು ಕಡೆ ತಮ್ಮ ವರ್ಕ್​ಶಾಪ್ ಅನ್ನು ತೆರೆದರು. ಇದೀಗ ಅವರು ಯಶಸ್ವಿ ಉದ್ಯಮಿಯಾಗಿದ್ದಾರೆ. ಈಗ ಗಣಪತಿ ದೇವಸ್ಥಾನವನ್ನು ನಿರ್ಮಿಸಿರುವ ಜಾಗದಲ್ಲಿಯೇ ಮೊದಲು ಗೇಬ್ರಿಯೆಲ್ ಅವರ ಮನೆಯಿತ್ತು. ಆ ಮನೆಯನ್ನು ಕಿತ್ತು ಆ ಜಾಗದಲ್ಲಿ ದೇವಸ್ಥಾನ ನಿರ್ಮಿಸಲಾಗಿದೆ. ನನ್ನ ಯಶಸ್ಸಿಗೆ ಕಾರಣವಾದ ಗಣೇಶನಿಗಾಗಿ ಒಂದು ಗುಡಿ ಕಟ್ಟುವ ಬಯಕೆಯಿತ್ತು. ನನ್ನ ತಂದೆ-ತಾಯಿ ವಾಸವಾಗಿದ್ದ ಸ್ಥಳದಲ್ಲೇ ಅವರ ನೆನಪಿಗಾಗಿ ಈ ದೇವಸ್ಥಾನವನ್ನು ಕಟ್ಟಿಸಿದ್ದೇನೆ ಎಂದು ಗೇಬ್ರಿಯೆಲ್ ಹೇಳಿದ್ದಾರೆ.

ಯಾರ ಬಳಿಯೂ ದೇಣಿಗೆ ಸಂಗ್ರಹ ಮಾಡದೆ ತಾವೇ ದುಡಿದ 2 ಕೋಟಿ ರೂ. ಹಣದಿಂದ ಗೇಬ್ರಿಯೆಲ್ ಈ ದೇವಾಲಯವನ್ನು ಕಟ್ಟಿಸಿದ್ದಾರೆ. ಈ ನೂತನ ಸಿದ್ಧಿವಿನಾಯಕ ದೇವಸ್ಥಾನದ ಗರ್ಭಗುಡಿಯಲ್ಲಿ ಕಪ್ಪು ಬಣ್ಣದ 36 ಇಂಚಿನ ಗಣಪತಿಯ ವಿಗ್ರಹವನ್ನು ಸ್ಥಾಪಿಸಲಾಗಿದೆ. ದೇವಾಲಯದ ಬಳಿ ದೇವಾಲಯದ ಅರ್ಚಕರಿಗೆ ಒಂದು ಮನೆಯನ್ನು ಸಹ ನಿರ್ಮಿಸಲಾಗಿದೆ. ದೇವಾಲಯದ ಆಡಳಿತವನ್ನು ಎಂಜಿನಿಯರ್ ನಾಗೇಶ್ ಹೆಗ್ಡೆ ಮತ್ತು ಗೇಬ್ರಿಯಲ್ ಅವರ ಸ್ನೇಹಿತರಾದ ಸತೀಶ್ ಶೆಟ್ಟಿ ಮತ್ತು ರತ್ನಕರ್ ಕುಕ್ಯಾನ್ ಅವರನ್ನು ಒಳಗೊಂಡ ಮೂವರು ಸದಸ್ಯರ ಸಮಿತಿ ನೋಡಿಕೊಳ್ಳಲಿದೆ.

ಇದನ್ನೂ ಓದಿ: Udupi Murder: ಬ್ರಹ್ಮಾವರದ ವಿಶಾಲ ಗಾಣಿಗ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು; ದುಬೈನಿಂದಲೇ ಸುಪಾರಿ ಕೊಟ್ಟನಾ ಗಂಡ?

Uttara Kannada Rain: ಅಂಕೋಲದಲ್ಲಿ ಪ್ರವಾಹ ಭೀತಿ; ಹಿಚ್ಕಡ ಗ್ರಾಮದಲ್ಲಿ ಕಣ್ಣೆದುರೇ ಕುಸಿದು ಬಿತ್ತು ಎರಡಂತಸ್ತಿನ ಮನೆ

(Christian Businessman Builds Ganesha Temple In Udupi At Cost Of 2 Crore Rupees du you know Why?)

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು