ನೆರೆ ಪರಿಹಾರ ನೀಡಲು ಕೇಂದ್ರ ಹಿಂದೇಟು, ಆದ್ರೆ ಕರ್ನಾಟಕದಿಂದ್ಲೇ ಹೆಚ್ಚು ತೆರಿಗೆ ಸಂಗ್ರಹ!

ಬೆಂಗಳೂರು: ಒಂದು ಕಡೆ ಅತಿವೃಷ್ಟಿ ಮತ್ತೊಂದು ಕಡೆ ಅನಾವೃಷ್ಟಿಯಿಂದ ಕಂಗೆಟ್ಟಿರುವ ಕರ್ನಾಟಕಕ್ಕೆ ಪರಿಹಾರಾರ್ಥ ಹಣಕಾಸು ನೆರವು ನೀಡಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಿಂದು ಮುಂದು ನೋಡುತ್ತಿದೆ. ಆದ್ರೆ ಇತಹ ಭೀಕರ ಪರಿಸ್ಥಿತಿಯಲ್ಲೂ ಕರ್ನಾಟಕ ರಾಜ್ಯವು ಕೇಂದ್ರಕ್ಕೆ ತೆರಿಗೆ ಕಟ್ಟುವಲ್ಲಿ ಹಿಂದೆ ಬಿದ್ದಿಲ್ಲ. ನೇರ ತೆರಿಗೆ ಆದಾಯದಲ್ಲಿ 3 ರಾಜ್ಯಗಳದ್ದು ಸಿಂಹಪಾಲು ಇರುವುದಾಗಿ ವರದಿಯಾಗಿದೆ. ಆದಾಯ ತೆರಿಗೆ ಸಂಗ್ರಹ ಬಾಬತ್ತಿನಲ್ಲಿ ಕರ್ನಾಟಕ, ದೆಹಲಿ, ಮಹಾರಾಷ್ಟ್ರ ರಾಜ್ಯಗಳದ್ದೇ ಸಿಂಹಪಾಲು. ಮೂರೂ ರಾಜ್ಯಗಳಿಂದ ಶೇ. 61ರಷ್ಟು ಆದಾಯ ತೆರಿಗೆ […]

ನೆರೆ ಪರಿಹಾರ ನೀಡಲು ಕೇಂದ್ರ ಹಿಂದೇಟು, ಆದ್ರೆ ಕರ್ನಾಟಕದಿಂದ್ಲೇ ಹೆಚ್ಚು ತೆರಿಗೆ ಸಂಗ್ರಹ!
ಸಾಧು ಶ್ರೀನಾಥ್​

Updated on: Oct 23, 2019 | 12:38 PM

ಬೆಂಗಳೂರು: ಒಂದು ಕಡೆ ಅತಿವೃಷ್ಟಿ ಮತ್ತೊಂದು ಕಡೆ ಅನಾವೃಷ್ಟಿಯಿಂದ ಕಂಗೆಟ್ಟಿರುವ ಕರ್ನಾಟಕಕ್ಕೆ ಪರಿಹಾರಾರ್ಥ ಹಣಕಾಸು ನೆರವು ನೀಡಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಿಂದು ಮುಂದು ನೋಡುತ್ತಿದೆ. ಆದ್ರೆ ಇತಹ ಭೀಕರ ಪರಿಸ್ಥಿತಿಯಲ್ಲೂ ಕರ್ನಾಟಕ ರಾಜ್ಯವು ಕೇಂದ್ರಕ್ಕೆ ತೆರಿಗೆ ಕಟ್ಟುವಲ್ಲಿ ಹಿಂದೆ ಬಿದ್ದಿಲ್ಲ.

ನೇರ ತೆರಿಗೆ ಆದಾಯದಲ್ಲಿ 3 ರಾಜ್ಯಗಳದ್ದು ಸಿಂಹಪಾಲು ಇರುವುದಾಗಿ ವರದಿಯಾಗಿದೆ. ಆದಾಯ ತೆರಿಗೆ ಸಂಗ್ರಹ ಬಾಬತ್ತಿನಲ್ಲಿ ಕರ್ನಾಟಕ, ದೆಹಲಿ, ಮಹಾರಾಷ್ಟ್ರ ರಾಜ್ಯಗಳದ್ದೇ ಸಿಂಹಪಾಲು. ಮೂರೂ ರಾಜ್ಯಗಳಿಂದ ಶೇ. 61ರಷ್ಟು ಆದಾಯ ತೆರಿಗೆ ಸಂಗ್ರಹವಾಗಿದೆ. ಮಹಾರಾಷ್ಟ್ರದಲ್ಲಿ 19,17,944 ಕೋಟಿ ರೂ. ಸಂಗ್ರಹವಾಗಿದ್ದರೆ ದೆಹಲಿಯಲ್ಲಿ 6,93,275 ಕೋಟಿ ರೂಪಾಯಿ ಸಂಗ್ರಹವಾಗಿದೆ. ಇನ್ನು ಮೂರನೇ ಸ್ಥಾನದಲ್ಲಿ ಕರ್ನಾಟಕವು 4,99,310 ಕೋಟಿ ರೂಪಾಯಿಯನ್ನು ಆದಾಯ ತೆರಿಗೆಯಾಗಿ ಕೇಂದ್ರಕ್ಕೆ ಪಾವತಿಸಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us