AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬೇಡ್ಕರ್ ಪ್ರತಿಮೆಗೆ ಅಪಮಾನ: ಸಿಡಿದೆದ್ದ ದಲಿತ ಮುಖಂಡರು: ಕಲಬುರಗಿಯಲ್ಲಿ ಉದ್ರಿಕ್ತ ಪರಿಸ್ಥಿತಿ

ಕಲಬುರಗಿ ನಗರದಲ್ಲಿ ಕೋಟನೂರ ಡಿ ಬಳಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಖಂಡಿಸಿ ದಲಿತ ಮುಖಂಡರು ಸಿಡಿದೆದ್ದಿದ್ದು, ಟೈಯರ್​ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಬಿಜೆಪಿ ವಿಧಾನಪರಿಷತ್​ ಸದಸ್ಯ ಮಾಲೀಕತ್ವದ ಪೆಟ್ರೋಲ್ ಬಂಕ್​ನ ಗಾಜು ಪುಡಿ ಪುಡಿ ಮಾಡಿದ್ದಾರೆ. ಇದರಿಂದ ಕಲಬುರಗಿ ನಗರದಲ್ಲಿ ಉದ್ರಿಕ್ತ ಪರಿಸ್ಥಿತಿ ನಿರ್ಮಾಣವಾಗಿದೆ.

ಅಂಬೇಡ್ಕರ್ ಪ್ರತಿಮೆಗೆ ಅಪಮಾನ: ಸಿಡಿದೆದ್ದ ದಲಿತ ಮುಖಂಡರು: ಕಲಬುರಗಿಯಲ್ಲಿ ಉದ್ರಿಕ್ತ ಪರಿಸ್ಥಿತಿ
ದಲಿತ ಸಮುದಾಯದವರಿಂದ ಪ್ರತಿಭಟನೆ
ದತ್ತಾತ್ರೇಯ ಪಾಟೀಲ್​
| Edited By: |

Updated on: Jan 23, 2024 | 5:09 PM

Share

ಕಲಬುರಗಿ, ಜನವರಿ 23: ನಗರದಲ್ಲಿ ಕೋಟನೂರ ಡಿ ಬಳಿ ಅಂಬೇಡ್ಕರ್ ಪ್ರತಿಮೆ (Ambedkar statue) ಗೆ ಅಪಮಾನ ಖಂಡಿಸಿ ದಲಿತ ಮುಖಂಡರು ಸಿಡಿದೆದ್ದಿದ್ದು, ಟೈಯರ್​ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಬಿಜೆಪಿ ವಿಧಾನಪರಿಷತ್​ ಸದಸ್ಯ ಮಾಲೀಕತ್ವದ ಪೆಟ್ರೋಲ್ ಬಂಕ್​ನ ಗಾಜು ಪುಡಿ ಪುಡಿ ಮಾಡಿದ್ದಾರೆ. ಇದರಿಂದ ಕಲಬುರಗಿ ನಗರದಲ್ಲಿ ಉದ್ರಿಕ್ತ ಪರಿಸ್ಥಿತಿ ನಿರ್ಮಾಣವಾಗಿದೆ. ಜಗತ್ ಸರ್ಕಲ್ ಬಳಿ ಗೂಡ್ಸ್ ವಾಹನದ ಮೇಲೆ, ಗೂಡ್ಸ್ ವಾಹನಕ್ಕೆ ಕಲ್ಲುತೂರಾಟ ಮಾಡಲಾಗಿದೆ. ಬಲವಂತವಾಗಿ ಅಂಗಡಿ ಮುಗ್ಗಟ್ಟುಗಳನ್ನು ಪ್ರತಿಭಟನಾಕಾರರು ಬಂದ್ ಮಾಡಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ಮಾಡಿದ್ದಾರೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ: ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್

ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್​ ಮಾತನಾಡಿ, ಪ್ರತಿಮೆಗೆ ಅಪಮಾನ ಮಾಡಿದ ಕಿಡಿಗೇಡಿಗಳನ್ನು ಬಂಧಿಸಿಬೇಕು. ಪ್ರತಿಮೆಗೆ ಅಪಮಾನ ಆಗದಂತೆ ಸರ್ಕಾರ ಮುನ್ನೆಚ್ಚರಿಕೆ ವಹಿಸಲಿ. ಶ್ರೀರಾಮನ ಭಾವಚಿತ್ರ ಹರಿದು ಹಾಕುವ ಪ್ರಕರಣ ಹೆಚ್ಚಾಗುತ್ತಿದೆ. ಕಾಂಗ್ರೆಸ್​ನವರ ಮನಸ್ಥಿತಿ ಎತ್ತ ಸಾಗುತ್ತಿದೆ ಅಂತಾ ಗೊತ್ತಾಗುತ್ತೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಹೇಳಿದ್ದಾರೆ.

ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರಿಂದ ಪ್ರತಿಭಟನೆ

ವಿಜಯಪುರ: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಕ್ಷರ ದಾಸೋಹ ಅಡುಗೆ ಸಿಬ್ಬಂದಿಗಳಿಂದ ಸಂಸದ ರಮೇಶ ಜಿಗಜಿಣಗಿ ಕಚೇರಿ ಎದುರು ಪ್ರತಿಭಟನೆ ಮಾಡಲಾಗಿದೆ. ಕೇಂದ್ರ ಸರ್ಕಾರ ನಮ್ಮ ವೇತನ ಹೆಚ್ಚಳ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಶ್ರೀರಾಮ ಮೆರವಣಿಗೆ ವೇಳೆ ಗಲಾಟೆ: ಕಲಬುರಗಿ ಜಿಲ್ಲೆ ವಾಡಿ ಪಟ್ಟಣದಲ್ಲಿ ನಿಷೇದಾಜ್ಞೆ ಜೊತೆಗೆ ಮದ್ಯ ಮಾರಾಟ ನಿಷೇಧ

ಅಂಗನವಾಡಿ ಹಾಗೂ ಅಕ್ಷರ ದಾಸೋಹ ಅಡುಗೆ ಸಿಬ್ಬಂದಿಗೆ ಚುನಾವಣೆ ಕೆಲಸ, ಸರ್ವೇ ಕಾರ್ಯ ಹಾಗೂ ಇತರೆ ಕೆಲಸ ಹಚ್ಚುತ್ತಿರುವುದಕ್ಕೆ ಆಕ್ರೋಶ ಹೊರಹಾಕಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ದ ಮಹಿಳೆಯರು ಧಿಕ್ಕಾರ ಕೂಗಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು: ಡಿಸಿ ಕಚೇರಿ ಬಳಿ ಹೋಮ ಮಾಡಿ, ಮುತ್ತಿಗೆ ಹಾಕಿದ್ದ ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ FIR

ಐಸಿಬಿಎಸ್ ಅನುದಾನ ಕಡಿತ ಮಾಡುತ್ತಿರುವ ಕೇಂದ್ರ ಸರ್ಕಾರ ಕ್ರಮ ಸರಿಯಲ್ಲಾ ಎಂದು ಆರೋಪ ಮಾಡಿದ್ದು, ಕೂಡಲೇ ವೇತನ ಹೆಚ್ಚಳ ಮಾಡಬೇಕೆಂದು. ಸಂಸದರು ನಮ್ಮ ಮನವಿ ಪತ್ರ ಸ್ವೀಕರಿಸಬೇಕೆಂದು ಆಗ್ರಹಿಸಿದ್ದಾರೆ. ಮನವಿ ಪತ್ರ ಸ್ವೀಕರಿಸುವವರೆಗೂ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಪಟ್ಟು ಹಿಡಿದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!