AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬೇಡ್ಕರ್ ಪ್ರತಿಮೆಗೆ ಅಪಮಾನ: ಸಿಡಿದೆದ್ದ ದಲಿತ ಮುಖಂಡರು: ಕಲಬುರಗಿಯಲ್ಲಿ ಉದ್ರಿಕ್ತ ಪರಿಸ್ಥಿತಿ

ಕಲಬುರಗಿ ನಗರದಲ್ಲಿ ಕೋಟನೂರ ಡಿ ಬಳಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಖಂಡಿಸಿ ದಲಿತ ಮುಖಂಡರು ಸಿಡಿದೆದ್ದಿದ್ದು, ಟೈಯರ್​ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಬಿಜೆಪಿ ವಿಧಾನಪರಿಷತ್​ ಸದಸ್ಯ ಮಾಲೀಕತ್ವದ ಪೆಟ್ರೋಲ್ ಬಂಕ್​ನ ಗಾಜು ಪುಡಿ ಪುಡಿ ಮಾಡಿದ್ದಾರೆ. ಇದರಿಂದ ಕಲಬುರಗಿ ನಗರದಲ್ಲಿ ಉದ್ರಿಕ್ತ ಪರಿಸ್ಥಿತಿ ನಿರ್ಮಾಣವಾಗಿದೆ.

ಅಂಬೇಡ್ಕರ್ ಪ್ರತಿಮೆಗೆ ಅಪಮಾನ: ಸಿಡಿದೆದ್ದ ದಲಿತ ಮುಖಂಡರು: ಕಲಬುರಗಿಯಲ್ಲಿ ಉದ್ರಿಕ್ತ ಪರಿಸ್ಥಿತಿ
ದಲಿತ ಸಮುದಾಯದವರಿಂದ ಪ್ರತಿಭಟನೆ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Jan 23, 2024 | 5:09 PM

Share

ಕಲಬುರಗಿ, ಜನವರಿ 23: ನಗರದಲ್ಲಿ ಕೋಟನೂರ ಡಿ ಬಳಿ ಅಂಬೇಡ್ಕರ್ ಪ್ರತಿಮೆ (Ambedkar statue) ಗೆ ಅಪಮಾನ ಖಂಡಿಸಿ ದಲಿತ ಮುಖಂಡರು ಸಿಡಿದೆದ್ದಿದ್ದು, ಟೈಯರ್​ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಬಿಜೆಪಿ ವಿಧಾನಪರಿಷತ್​ ಸದಸ್ಯ ಮಾಲೀಕತ್ವದ ಪೆಟ್ರೋಲ್ ಬಂಕ್​ನ ಗಾಜು ಪುಡಿ ಪುಡಿ ಮಾಡಿದ್ದಾರೆ. ಇದರಿಂದ ಕಲಬುರಗಿ ನಗರದಲ್ಲಿ ಉದ್ರಿಕ್ತ ಪರಿಸ್ಥಿತಿ ನಿರ್ಮಾಣವಾಗಿದೆ. ಜಗತ್ ಸರ್ಕಲ್ ಬಳಿ ಗೂಡ್ಸ್ ವಾಹನದ ಮೇಲೆ, ಗೂಡ್ಸ್ ವಾಹನಕ್ಕೆ ಕಲ್ಲುತೂರಾಟ ಮಾಡಲಾಗಿದೆ. ಬಲವಂತವಾಗಿ ಅಂಗಡಿ ಮುಗ್ಗಟ್ಟುಗಳನ್ನು ಪ್ರತಿಭಟನಾಕಾರರು ಬಂದ್ ಮಾಡಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ಮಾಡಿದ್ದಾರೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ: ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್

ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್​ ಮಾತನಾಡಿ, ಪ್ರತಿಮೆಗೆ ಅಪಮಾನ ಮಾಡಿದ ಕಿಡಿಗೇಡಿಗಳನ್ನು ಬಂಧಿಸಿಬೇಕು. ಪ್ರತಿಮೆಗೆ ಅಪಮಾನ ಆಗದಂತೆ ಸರ್ಕಾರ ಮುನ್ನೆಚ್ಚರಿಕೆ ವಹಿಸಲಿ. ಶ್ರೀರಾಮನ ಭಾವಚಿತ್ರ ಹರಿದು ಹಾಕುವ ಪ್ರಕರಣ ಹೆಚ್ಚಾಗುತ್ತಿದೆ. ಕಾಂಗ್ರೆಸ್​ನವರ ಮನಸ್ಥಿತಿ ಎತ್ತ ಸಾಗುತ್ತಿದೆ ಅಂತಾ ಗೊತ್ತಾಗುತ್ತೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಹೇಳಿದ್ದಾರೆ.

ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರಿಂದ ಪ್ರತಿಭಟನೆ

ವಿಜಯಪುರ: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಕ್ಷರ ದಾಸೋಹ ಅಡುಗೆ ಸಿಬ್ಬಂದಿಗಳಿಂದ ಸಂಸದ ರಮೇಶ ಜಿಗಜಿಣಗಿ ಕಚೇರಿ ಎದುರು ಪ್ರತಿಭಟನೆ ಮಾಡಲಾಗಿದೆ. ಕೇಂದ್ರ ಸರ್ಕಾರ ನಮ್ಮ ವೇತನ ಹೆಚ್ಚಳ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಶ್ರೀರಾಮ ಮೆರವಣಿಗೆ ವೇಳೆ ಗಲಾಟೆ: ಕಲಬುರಗಿ ಜಿಲ್ಲೆ ವಾಡಿ ಪಟ್ಟಣದಲ್ಲಿ ನಿಷೇದಾಜ್ಞೆ ಜೊತೆಗೆ ಮದ್ಯ ಮಾರಾಟ ನಿಷೇಧ

ಅಂಗನವಾಡಿ ಹಾಗೂ ಅಕ್ಷರ ದಾಸೋಹ ಅಡುಗೆ ಸಿಬ್ಬಂದಿಗೆ ಚುನಾವಣೆ ಕೆಲಸ, ಸರ್ವೇ ಕಾರ್ಯ ಹಾಗೂ ಇತರೆ ಕೆಲಸ ಹಚ್ಚುತ್ತಿರುವುದಕ್ಕೆ ಆಕ್ರೋಶ ಹೊರಹಾಕಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ದ ಮಹಿಳೆಯರು ಧಿಕ್ಕಾರ ಕೂಗಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು: ಡಿಸಿ ಕಚೇರಿ ಬಳಿ ಹೋಮ ಮಾಡಿ, ಮುತ್ತಿಗೆ ಹಾಕಿದ್ದ ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ FIR

ಐಸಿಬಿಎಸ್ ಅನುದಾನ ಕಡಿತ ಮಾಡುತ್ತಿರುವ ಕೇಂದ್ರ ಸರ್ಕಾರ ಕ್ರಮ ಸರಿಯಲ್ಲಾ ಎಂದು ಆರೋಪ ಮಾಡಿದ್ದು, ಕೂಡಲೇ ವೇತನ ಹೆಚ್ಚಳ ಮಾಡಬೇಕೆಂದು. ಸಂಸದರು ನಮ್ಮ ಮನವಿ ಪತ್ರ ಸ್ವೀಕರಿಸಬೇಕೆಂದು ಆಗ್ರಹಿಸಿದ್ದಾರೆ. ಮನವಿ ಪತ್ರ ಸ್ವೀಕರಿಸುವವರೆಗೂ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಪಟ್ಟು ಹಿಡಿದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Dattatraya Patil
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ