Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashtrakavi KuVemPu: ಕುವೆಂಪು ಅವರನ್ನು ನಿಂದಿಸಿ, ನಾಡಗೀತೆಯ ತಿರುಚಿ ಬರೆದವರ ವಿರುದ್ಧ ಸರ್ಕಾರ ಕ್ರಮ ಜರುಗಿಸಲಿ: ಆದಿಚುಂಚನಗಿರಿ ಸ್ವಾಮೀಜಿ ಒತ್ತಾಯ

Adichunchanagiri Mutt Shree Dr. Nirmalanandanatha Maha Swamiji: ರಾಷ್ಟ್ರಕವಿ ಕುವೆಂಪು ಅವರನ್ನು ನಿಂದಿಸಿ, ನಾಡಗೀತೆಯನ್ನು ತಿರುಚಿ ಬರೆದಿರುವವರ ವಿರುದ್ಧ ಸರ್ಕಾರ ಕ್ರಮ ಜರುಗಿಸುವುದೆಂದು ಭಾವಿಸುವುದಾಗಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಮಾಧ್ಯಮ ಹೇಳಿಕೆ ಮೂಲಕ ಒತ್ತಾಯಿಸಿದ್ದಾರೆ

Rashtrakavi  KuVemPu: ಕುವೆಂಪು ಅವರನ್ನು ನಿಂದಿಸಿ, ನಾಡಗೀತೆಯ ತಿರುಚಿ ಬರೆದವರ ವಿರುದ್ಧ ಸರ್ಕಾರ ಕ್ರಮ ಜರುಗಿಸಲಿ: ಆದಿಚುಂಚನಗಿರಿ ಸ್ವಾಮೀಜಿ ಒತ್ತಾಯ
ರಾಷ್ಟ್ರಕವಿ ಕುವೆಂಪು ಅವರನ್ನು ನಿಂದಿಸಿ, ನಾಡಗೀತೆಯ ತಿರುಚಿ ಬರೆದಿರುವವರ ವಿರುದ್ಧ ಸರ್ಕಾರ ಕ್ರಮ ಜರುಗಿಸಲಿ: ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಸ್ವಾಮೀಜಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:May 28, 2022 | 10:31 PM

ರಾಷ್ಟ್ರಕವಿ ಕುವೆಂಪು ಅವರನ್ನು (Rashtrakavi KuVemPu) ನಿಂದಿಸಿ, ನಾಡಗೀತೆಯನ್ನು ತಿರುಚಿ ಬರೆದಿರುವವರ ವಿರುದ್ಧ ಸರ್ಕಾರ ಕ್ರಮ ಜರುಗಿಸುವುದೆಂದು ಭಾವಿಸುವುದಾಗಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು (Adichunchanagiri Mutt Shree Dr. Nirmalanandanatha Maha Swamiji) ಮಾಧ್ಯಮ ಹೇಳಿಕೆ ಮೂಲಕ ಒತ್ತಾಯಿಸಿದ್ದಾರೆ.

ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಮಾಧ್ಯಮ ಹೇಳಿಕೆ ಪೂರ್ಣ ಪಾಠ ಹೀಗಿದೆ: ನಮ್ಮ ನಾಡು ಕಂಡ ಅಪ್ರತಿಮ ಕವಿ, ದಾರ್ಶನಿಕ, ಸರ್ವೋದಯ ತತ್ವ ಪ್ರತಿಪಾದಕರಾದ ರಾಷ್ಟ್ರಕವಿ ಕುವೆಂಪು ಅವರು ಕನ್ನಡ ಸಾಹಿತ್ಯದ ಮೇರು ಕವಿಗಳು; ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು. ಅವರ ಸಾಹಿತ್ಯ ಸರ್ವರನ್ನೂ ಒಳಗೊಳ್ಳುವ, ಸರ್ವರಹಿತ ಬಯಸುವ ಕ್ರಾಂತದೃಷ್ಟಿಯನ್ನು ಹೊಂದಿದೆ. ಸಾಮಾಜಿಕ, ಆರ್ಥಿಕ, ಧಾರ್ಮಿಕ ಅಸಮಾನತೆಯನ್ನು ಮತ್ತು ಲಿಂಗಭೇದವನ್ನು ನಿವಾರಿಸಿಕೊಂಡು ಈ ನಾಡು “ಸರ್ವಜನಾಂಗದ ಶಾಂತಿಯ ತೋಟ”ವಾಗಬೇಕು ಎಂಬ ಕನಸು ಕಂಡವರು ಅವರು.

ಅವರ ‘ಕಾನೂರು ಹೆಗ್ಗಡತಿ’ ಮತ್ತು ‘ಮಲೆಗಳಲ್ಲಿ ಮದುಮಗಳು’ ಮಹಾಕಾದಂಬರಿಗಳು, ‘ಶೂದ್ರ ತಪಸ್ವಿ’, ‘ಜಲಗಾರ’, ‘ಬೆರಳ್ಗೆ ಕೊರಳ್’ ಮುಂತಾದ ಶ್ರೇಷ್ಠ ನಾಟಕಗಳು, ‘ರಾಮಾಯಣ ದರ್ಶನಂ’ ಮಹಾಕಾವ್ಯ ಹಾಗೂ ಸಾವಿರಾರು ಪದ್ಯಗಳು, ಲೇಖನಗಳ ಮೂಲಕ ಕನ್ನಡ ಸಾಹಿತ್ಯದ ಕ್ಷಿತಿಜವನ್ನು ವಿಸ್ತರಿಸಿದ ಮಹಾಕವಿ ಕುವೆಂಪು.

ಅವರು ತಮ್ಮ ಯೌವನದ ಕಾಲದಲ್ಲಿ ಬರೆದ ‘ಜೈ ಭಾರತ ಜನನಿಯ ತನುಜಾತೆ’ ಕವಿತೆಯು ಕಳೆದ ತೊಂಬತ್ತು ವರ್ಷಗಳಿಂದ ಕನ್ನಡಿಗರ ಹೃದಯದಲ್ಲಿ ನೆಲೆನಿಂತು, ದೇಶಭಕ್ತಿ ಮತ್ತು ನಾಡಪ್ರೇಮವನ್ನು ಉದ್ದೀಪಿಸಿದೆ. ಇದನ್ನು ಮನಗಂಡು ಕರ್ನಾಟಕ ಸರ್ಕಾರವು ‘ಜೈ ಭಾರತ ಜನನಿಯ ತನುಜಾತೆ’ ಗೀತೆಯನ್ನು ನಾಡಗೀತೆಯಾಗಿ ಘೋಷಿಸಿತು. ಅದನ್ನು ನಾಡಗೀತೆಯಾಗಿ ಘೋಷಣೆ ಮಾಡಬೇಕು ಎಂದು ಯಾರೂ ಕೇಳಿರಲಿಲ್ಲ. ಅದು ಸರ್ಕಾರವೇ ತೆಗೆದುಕೊಂಡ ತೀರ್ಮಾನವಾಗಿತ್ತು. ಕನ್ನಡ ಮತ್ತು ಕನ್ನಡಿಗರ ಅಸ್ಮಿತೆಯಾಗಿರುವ ಅಧಿಕೃತ ನಾಡಗೀತೆಯನ್ನು ಹಾಡಿ ಕೋಟಿ ಕೋಟಿ ಕನ್ನಡಿಗರು ಸಂಭ್ರಮಿಸಿದ್ದಾರೆ, ಸಂಭ್ರಮಿಸುತ್ತಿದ್ದಾರೆ.

ಆದರೆ ಈಚೆಗೆ ಕೆಲವರು ನಾಡಗೀತೆಯನ್ನು ತಿರುಚಿ ಬರೆದು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವುದು ಸರ್ಕಾರದ ತೀರ್ಮಾನವನ್ನು ಗೇಲಿ ಮಾಡುತ್ತಿರುವಂತಿದೆ. ಅಷ್ಟೇ ಅಲ್ಲ, ಮಹಾಕವಿಗಳೂ ರಾಷ್ಟ್ರಕವಿಗಳೂ ಆಗಿರುವ ಕುವೆಂಪು ಅವರ ಬಗ್ಗೆ ಅತ್ಯಂತ ಕೀಳುಭಾಷೆಯಲ್ಲಿ ಅವಹೇಳನಕಾರಿ ಲೇಖನಗಳನ್ನು ಬರೆದಿದ್ದಾರೆ. ನಾಡಗೀತೆಯನ್ನು ಅವಮಾನಿಸುವುದೆಂದರೆ ರಾಷ್ಟ್ರಗೀತೆಯನ್ನು ಅವಮಾನಿಸಿದಂತೆ; ಹಾಗೂ ನೆಲದ ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ.

ಪ್ರಯುಕ್ತ, ರಾಷ್ಟ್ರಕವಿ ಕುವೆಂಪು ಅವರನ್ನು ಅಸಂಸದೀಯ ಭಾಷೆಯಲ್ಲಿ ನಿಂದಿಸಿ ಲೇಖನ ಬರೆದಿರುವ ಮತ್ತು ನಾಡಗೀತೆಯನ್ನು ತಿರುಚಿ ಬರೆದಿರುವವರ ವಿರುದ್ಧ ಸೈಬರ್ ಕ್ರೈಮ್ ಅಡಿಯಲ್ಲಿ ಕಾನೂನು ಪ್ರಕಾರ ಸರ್ಕಾರವು ಕ್ರಮ ಜರುಗಿಸುತ್ತದೆಂದು ಭಾವಿಸುತ್ತೇವೆ. ಹಾಗೂ ಈ ಮೂಲಕ ಸರ್ಕಾರವು ಕಾನೂನು ಮತ್ತು ವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಾಳಿ ಮಾಡುವವರನ್ನು ಕ್ಷಮಿಸುವುದಿಲ್ಲ ಎಂಬ ಸಂದೇಶ ರವಾನಿಸುತ್ತದೆ ಎಂಬುದು ನಮ್ಮ ಅಭಿಲಾಷೆಯಾಗಿದೆ.

Published On - 10:02 pm, Sat, 28 May 22

ಔರಂಗಜೇಬನ ಸಮಾಧಿ ಸಂಬಂಧಿತ ವಿವಾದ, ನಾಗ್ಪುರದಲ್ಲಿ ಹಿಂಸಾಚಾರ
ಔರಂಗಜೇಬನ ಸಮಾಧಿ ಸಂಬಂಧಿತ ವಿವಾದ, ನಾಗ್ಪುರದಲ್ಲಿ ಹಿಂಸಾಚಾರ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ