AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ನೌಕರರ ಮುಷ್ಕರ ನಿಲ್ಲಿಸದಿದ್ದರೆ ‘ಅಂತರ್‌ ನಿಗಮ ವರ್ಗಾವಣೆ’ ಪರಿಗಣಿಸದಿರಲು ತೀರ್ಮಾನ!

ರಾಜ್ಯದಲ್ಲಿ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಮತ್ತೊಂದು ಅಸ್ತ್ರ ಪ್ರಯೋಗಕ್ಕೆ ಮುಂದಾಗಿದೆ.

ಸಾರಿಗೆ ನೌಕರರ ಮುಷ್ಕರ ನಿಲ್ಲಿಸದಿದ್ದರೆ ‘ಅಂತರ್‌ ನಿಗಮ ವರ್ಗಾವಣೆ’ ಪರಿಗಣಿಸದಿರಲು ತೀರ್ಮಾನ!
ಕೆಎಸ್​ಆರ್​ಟಿಸಿ
shruti hegde
| Edited By: |

Updated on: Apr 11, 2021 | 12:35 PM

Share

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಮತ್ತೊಂದು ಅಸ್ತ್ರ ಪ್ರಯೋಗಕ್ಕೆ ಮುಂದಾಗಿದೆ. ‘ಅಂತರ್‌ ನಿಗಮ ವರ್ಗಾವಣೆ’ ಪರಿಗಣಿಸದಿರಲು ತೀರ್ಮಾನ ಕೈಗೊಂಡಿದೆ. ಸಾರಿಗೆ ನೌಕರರು ಕೋರಿಕೆ ಮೇರೆಗೆ ವರ್ಗಾವಣೆಯಾಗಿದ್ದಾರೆ. ವರ್ಗಾವಣೆಯಾದವರು ಕೂಡಲೇ ಕೆಲಸಕ್ಕೆ ಹಾಜರಾಗಬೇಕು. ವರ್ಗಾವಣೆಯ ಈ ಹಿಂದಿನ ಆದೇಶವನ್ನು ರದ್ದುಪಡಿಸಿ, ಮತ್ತೆ ಮೂಲ ಸ್ಥಳಕ್ಕೆ ವಾಪಸ್ ಕಳಿಸುವುದಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ.

ಸಾರಿಗೆ ನೌಕರರ ಮುಷ್ಕರಕ್ಕೆ ಪ್ರಚೋದನೆ ನೀಡಿ ಕರ್ತವ್ಯ ನಿರ್ವಹಿಸುತ್ತಿರುವ ಸಹ ಸಿಬ್ಬಂದಿಗಳಿಗೆ ಬೆದರಿಕೆ ಹಾಕಿ, ಬಸ್ಸುಗಳ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಸಾರಿಗೆ ಸೇವೆ ಒದಗಿಸುವಲ್ಲಿ ತೊಂದರೆ ಮಾಡುತ್ತಿರುವ ನೌಕರರ ಅಂತರ ನಿಗಮ ವರ್ಗಾವಣೆ ಕೋರಿಕೆಯನ್ನು ಪರಿಗಣಿಸದಿರಲು ತೀರ್ಮಾನ ಮಾಡಲಾಗಿದೆ. ಈಗಾಗಲೇ ಕೋರಿಕೆ ಮೇರೆಗೆ ಅಂತರ ವಿಭಾಗ ವರ್ಗಾವಣೆಗೊಂಡು, ವಿಭಾಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಈ ಅವಧಿಯಲ್ಲಿ ಕೂಡಲೇ ಕರ್ತವ್ಯಕ್ಕೆ ಹಾಜರಾಗದಿದ್ದಲ್ಲಿ ಹೊರಡಿಸಿರುವ ಆದೇಶವನ್ನು ರದ್ದುಗೊಳಿಸಿ, ಮೂಲ ವಿಭಾಗಕ್ಕೆ ಮರು ವರ್ಗಾವಣೆಗೆ ಕೆಎಸ್​ಆರ್​ಟಿಸಿ ಮುಂದಾಗಿದೆ.

ಮೈಸೂರಿನಲ್ಲಿ ಅಧಿಕಾರಿಗಳ ವಿರುದ್ಧ ಖಾಸಗಿ ವಾಹನ ಚಾಲಕರ ವಾಗ್ವಾದ ಮೈಸೂರಿನಲ್ಲಿ ಕೆಲ ಕೆಎಸ್​ಆರ್​ಟಿಸಿ ಬಸ್ ಸಂಚಾರ ಆರಂಭ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳ ಜತೆ ಚಾಲಕರ ವಾಗ್ವಾದ ನಡೆದಿದೆ. ನಾವು ಬೆಳಗ್ಗೆಯಿಂದ ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದೇವೆ. ಎಲ್ಲರೂ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಈಗ ನಮ್ಮ ಗತಿ ಏನೆಂದು ಸಾರಿಗೆ ಅಧಿಕಾರಿಗಳಿಗೆ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಸಾರಿಗೆ ಮುಷ್ಕರ.. ಕರ್ನಾಟಕ ಮೂಲದ ಭಕ್ತರು ನೆರೆಯ ಶ್ರೀಶೈಲಂನಲ್ಲಿ ಪರದಾಡುತ್ತಿದ್ದಾರೆ, ಸರ್ಕಾರ ಮೌನವಾಗಿದೆ!

ಸಾರಿಗೆ ಮುಷ್ಕರ; ಕೋಡಿಹಳ್ಳಿ ಚಂದ್ರಶೇಖರ್​ಗೆ 10 ಲಕ್ಷ ರೂ. ಪರಿಹಾರ ಕೇಳಿ ಲೀಗಲ್ ನೋಟಿಸ್ ನೀಡಿದ ಬಿ.ಇ. ವಿದ್ಯಾರ್ಥಿನಿ

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ